Saturday, October 4, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಅಂಕಣ ಕಾನೂನು ಕಲ್ಪ

ಚೆಕ್ ಬೌನ್ಸ್ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಕೋರ್ಟಿನ ಹೊಸ ಮಾರ್ಗಸೂಚಿಯಲ್ಲಿ ಏನಿದೆ?

October 4, 2025
in ಕಾನೂನು ಕಲ್ಪ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಕಾನೂನು ಕಲ್ಪ – ಪ್ರಶ್ನೋತ್ತರ ಅಂಕಣ  |ಚೆಕ್ ಬೌನ್ಸ್ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಕೋರ್ಟ್ ನೂತನ ಮಾರ್ಗಸೂಚಿಗಳನ್ನು ಹೊರಡಿಸಿದೆ.

ಸಂಜಬಿಜ್ ತರಿ ವಿರುದ್ಧ ಕಿಶೋರ್ ಬೋರ್ಕರ್ ಪ್ರಕರಣದ ವಿಚಾರಣೆಯಲ್ಲಿ, ಸುಪ್ರೀಂ ಕೋರ್ಟಿನ ನ್ಯಾಯಮೂರ್ತಿಗಳಾದ ಶ್ರೀ ಮನಮೋಹನ್ ಹಾಗು ಶ್ರೀ ಎನ್ ವಿ ಅಂಜಾರಿಯಾ ಅವರನ್ನು ಒಳಗೊಂಡ ನ್ಯಾಯಪೀಠ ದೇಶಾದ್ಯಂತ ಅದರಲ್ಲೂ ಮಹಾನಗರಗಳ ಜಿಲ್ಲಾ ಕೋರ್ಟುಗಳಲ್ಲಿ ಚೆಕ್ ಬೌನ್ಸ್ ಪ್ರಕರಣಗಳು ದೊಡ್ಡ ಸಂಖ್ಯೆಯಲ್ಲಿ ಬಾಕಿ ಉಳಿದಿರುವ ವಿಚಾರವನ್ನು ಪರಿಗಣನೆಗೆ ತೆಗೆದುಕೊಂಡು, ಈ ಮಾರ್ಗಸೂಚಿಗಳನ್ನು ಹೊರಡಿಸಿದೆ.

ಆರೋಪಿಗೆ ಸಮನ್ಸ್ ಜಾರಿಯಲ್ಲಿನ ಸಮಸ್ಯೆಗಳೂ ಕೂಡ ಚೆಕ್ ಬೌನ್ಸ್ ಕೇಸುಗಳ ಇತ್ಯರ್ಥದಲ್ಲಿ ಆಗುತ್ತಿರುವ ವಿಳಂಬಕ್ಕೆ ಪ್ರಮುಖ ಕಾರಣ ಎಂದೇ ವಿಶ್ಲೇಷಿಸಲಾಗುತ್ತಿದೆ. ಇದನ್ನು ಪರಿಗಣನೆಗೆ ತೆಗೆದುಕೊಂಡಿರುವ ಸುಪ್ರೀಂ ಕೋರ್ಟ್, ನೂತನ ಮಾರ್ಗಸೂಚಿಗಳ ಪ್ರಕಾರ, ನೆಗೋಶಿಯೇಬಲ್ ಇನ್ಸ್ಟ್ರುಮೆಂಟ್ಸ್ ಕಾಯಿದೆಯ ಕಲಂ 138ರ ಅಡಿ ದಾಖಲಾಗುವ ಪ್ರಕರಣದಲ್ಲಿ, ಆರೋಪಿಗೆ ಸಾಂಪ್ರದಾಯಿಕ ಮಾದರಿಯ ಸಮನ್ಸ್ ಜಾರಿ ವ್ಯವಸ್ಥೆಯಾದ ರಿಜಿಸ್ಟರ್ಡ್ ಪೋಸ್ಟ್ ಅಲ್ಲದೆ, ದಸ್ತಿ ಸಮನ್ಸ್ ಅಂದರೆ ವೈಯಕ್ತಿಕ ಸಮನ್ಸ್ (hand summons) ಜಾರಿ ಮಾಡಲು ಕೂಡ ವ್ಯವಸ್ಥೆ ಕಲ್ಪಿಸಬೇಕು ಎಂದಿದೆ.

ಅಲ್ಲದೆ, ಇಲೆಕ್ಟ್ರಾನಿಕ್ ಮಾಧ್ಯಮಗಳಾದ ಈ ಮೇಲ್, ವಾಟ್ಸಪ್ಪ್ ಸಂದೇಶಗಳ ಮೂಲಕವೂ ಸಮನ್ಸ್ ಜಾರಿ ಮಾಡಲು ಭಾರತೀಯ ನಾಗರೀಕ ಸುರಕ್ಷಾ ಸಂಹಿತೆಯ ಕಲಂ 64(1), 64(2) ಅಥವಾ 530(1)ರ ಅಡಿಯಲ್ಲಿ ಏನಾದರೂ ನಿಯಮಗಳು ಜಾರಿಯಲ್ಲಿದ್ದರೆ, ವಿಚಾರಣಾ ನ್ಯಾಯಾಲಯ ಇಲೆಕ್ಟ್ರಾನಿಕ್ ಮಾಧ್ಯಮದ ಮೂಲಕ ಸಮನ್ಸ್ ಜಾರಿಗೆ ಅವಕಾಶ ಕಲ್ಪಿಸಬೇಕು ಎಂದಿದೆ. ಚೆಕ್ ಬೌನ್ಸ್ ಪ್ರಕರಣಗಳ ದೂರಿನಲ್ಲಿ ಆರೋಪಿಯ ಈ ಮೇಲ್, ವಾಟ್ಸಪ್ಪ್ ವಿವರಗಳನ್ನು ನಮೂದಿಸಬೇಕು ಹಾಗು ಈ ನಿಟ್ಟಿನಲ್ಲಿ ಒಂದು ಪ್ರಮಾಣಪತ್ರವನ್ನು ಕೂಡ ಸಲ್ಲಿಸಬೇಕು ಎಂದು ಹೇಳಿದೆ. ಮೇಲೆ ನಮೂದಿಸಿದ ಮಾಧ್ಯಮಗಳ ಮೂಲಕ ಆರೋಪಿಗೆ ಸಮನ್ಸ್ ಜಾರಿಯಾದ ಬಗ್ಗೆ ಕೂಡ ದೂರುದಾರ ಒಂದು ಅಫಿಡವಿಟ್ ಸಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.ಕೇಸುಗಳ ತ್ವರಿತ ಇತ್ಯರ್ಥಕ್ಕೆ, ಪ್ರತಿ ಜಿಲ್ಲಾ ಹಾಗು ಸತ್ರ ನ್ಯಾಯಾಲಯ, ಚೆಕ್ ಹಣದ ಸುಲಭ ಮರುಪಾವತಿಗೆ QR code ಹಾಗು UPI payment links ಮೂಲಕ ವ್ಯವಸ್ಥೆ ಮಾಡಬೇಕು. ಸಮನ್ಸ್ ನಲ್ಲಿಯೇ ಆರೋಪಿಗೆ ಸುಲಭ ಮರುಪಾವತಿ ವಿಧಾನಗಳ ಬಗ್ಗೆ ತಿಳಿಸಿ, ಪ್ರಕರಣದ ಶೀಘ್ರ ಮುಕ್ತಾಯಕ್ಕೆ ಪ್ರಯತ್ನಿಸಬೇಕು.

ಕಾಯಿದೆಯ ಕಲಂ 143ರ ಉದ್ದೇಶ Summary Trial ಅಂದರೆ ಸಂಕ್ಷಿಪ್ತ ವಿಚಾರಣೆಯ ಮೂಲಕ ಪ್ರಕರಣದ ಶೀಘ್ರ ಇತ್ಯರ್ಥ. ಸಂಕ್ಷಿಪ್ತ ವಿಚಾರಣೆಯನ್ನು ಸಮನ್ಸ್ ವಿಚಾರಣೆಯಾಗಿ ಕೈಗೆತ್ತಿಕೊಳ್ಳಲು ವಿಚಾರಣಾ ನ್ಯಾಯಾಲಯ ಇಚ್ಚಿಸಿದಲ್ಲಿ, ಅದಕ್ಕೆ ಕಾರಣಗಳನ್ನು ನೀಡಬೇಕು ಎಂದೂ ಕೂಡ ಸುಪ್ರೀಂ ಕೋರ್ಟ್ ಹೇಳಿದೆ.

ನೆಗೋಶಿಯೇಬಲ್ ಇನ್ಸ್ಟ್ರುಮೆಂಟ್ಸ್ ಕಾಯಿದೆಯಲ್ಲಿ ಚೆಕ್ ಅಮಾನ್ಯಗೊಂಡು ಹಣ ಪಾವತಿಯಾಗದಿದ್ದಾಗ ನೀಡಲಾಗುವ ಶಿಕ್ಷೆ, ಪ್ರತಿಕಾರ ಪಡೆಯುವ ಸಾಧನವಲ್ಲ, ಬದಲಾಗಿ ಹಣ ಮರುಪಾವತಿ ಖಚಿತಪಡಿಸಿಕೊಳ್ಳಲು ಹಾಗು ಹಣಪಾವತಿಯ ಸಾಧನವಾಗಿ ಚೆಕ್ಕುಗಳ ವಿಶ್ವಾಸಾರ್ಹತೆಯನ್ನು ಹೆಚ್ಚಿಸುವುದಾಗಿದೆ, ಎಂದೂ ಕೂಡ ಸುಪ್ರೀಂ ಕೋರ್ಟ್ ಹೇಳಿದೆ.

ದೂರಿನೊಟ್ಟಿಗೆ ಪ್ರಕರಣದ ಸಾರಾಂಶ ವರದಿ ಸಲ್ಲಿಸುವುದನ್ನು ಖಡ್ಡಾಯಗೊಳಿಸಬೇಕು ಎಂದು ಕೂಡ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಆತ್ಮೀಯ ಓದುಗರೇ,
ಕಲ್ಪ ಮೀಡಿಯಾ ಹೌಸ್(ರಿ.) ಅಡಿಯಲ್ಲಿ ಪ್ರಕಟವಾಗುತ್ತಿರುನ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾದಲ್ಲಿ ನಮ್ಮ ಓದುಗರಿಗಾಗಿ `ಕಾನೂನು ಕಲ್ಪ’ ಎಂಬ ಹೊಸ ಅಂಕಣವನ್ನು ಆರಂಭಿಸಲಾಗಿದ್ದು, ಪ್ರತಿ ಶುಕ್ರವಾರ ಪ್ರಕಟವಾಗಲಿದೆ. ಶಿವಮೊಗ್ಗ-ಭದ್ರಾವತಿಯ ಖ್ಯಾತ ವಕೀಲರು ಹಾಗೂ ಹಿರಿಯ ಪತ್ರಕರ್ತರೂ ಆಗಿರುವ ಶ್ರೀ ವೀರೇಂದ್ರ ಪಿ.ಎಂ. ಅವರು ಯಾವುದೇ ರೀತಿಯ ಕಾನೂನು ಸಮಸ್ಯೆಗಳು, ಕಾನೂನಿನ ಕುರಿತಾಗಿನ ಮಾರ್ಗದರ್ಶನ ಮಾಡಲಿದ್ದಾರೆ. ಸಾರ್ವಜನಿಕರು ತಮಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದರೆ ನಮಗೆ ಕಳುಹಿಸಬಹುದು. ಆ ಪ್ರಶ್ನೆಗಳಿಗೆ ವಕೀಲರಾದ ಶ್ರೀ ವೀರೇಂದ್ರ ಪಿ.ಎಂ. ಅವರು ಉತ್ತರ ನೀಡಲಿದ್ದಾರೆ. ನಿಮ್ಮ ಪ್ರಶ್ನೆಗಳು ಸ್ಪಷ್ಟ, ಸ್ಪುಟ, ನೇರವಾಗಿರಲಿ.

ನಿಮ್ಮ ಪ್ರಶ್ನೆಗಳನ್ನು ಈ ಕೆಳಗಿನ ವಾಟ್ಸಪ್ ಸಂಖ್ಯೆ 9481252093 (ವಾಟ್ಸಪ್ ಮಾತ್ರ) ಅಥವಾ ಇ-ಮೇಲ್ info@kalpa.news ಗೆ ಕಳುಹಿಸಬಹುದು.  

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/09/Vedic-Maths-New.mp4

http://kalpa.news/wp-content/uploads/2024/04/VID-20240426-WA0008.mp4

  

Tags: Check bouncehand summonsIndian Civil Security CodeKannada News WebsiteLatest News Kannadaಚೆಕ್ ಬೌನ್ಸ್ಚೆಕ್‌ ಬೌನ್ಸ್‌ ಪ್ರಕರಣನ್ಯಾಯಾಲಯಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2023ಮಾರ್ಗಸೂಚಿವೈಯಕ್ತಿಕ ಸಮನ್ಸ್ಸುಪ್ರೀಂ ಕೋರ್ಟ್
Previous Post

ಈ ಜಾತಿಗಣತಿ ಮಾಡಿ ಪ್ರಯೋಜನವೇನು ಸಂಸದ ಬಿ.ವೈ. ರಾಘವೇಂದ್ರ ಪ್ರಶ್ನೆ

Next Post

ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕಿಚ್ಚಾಸ್ ಕಿಂಗ್ಸ್ ಬೆಂಗಳೂರು: ತಂಡಕ್ಕೆ ಗೆಲುವು ತಂದು ಕೊಟ್ಟ ಕೈಲ್ ಕುಮಾರನ್ ಮತ್ತು ನೀಲ್ ಜಾನಿ

October 4, 2025

ಪಿಇಎಸ್’ಐಎಂಎಸ್ ಕಾಲೇಜಿನಲ್ಲಿ ಹಣಕಾಸಿನ ಸಾಕ್ಷರತೆ ಕುರಿತ ವಿಶೇಷ ಉಪನ್ಯಾಸ

October 4, 2025

ಸತತ 5ನೆ ಬಾರಿ ಕುವೆಂಪು ವಿವಿ ಪ್ರಾಧ್ಯಾಪಕರ ದಾಖಲೆ | ಜಗತ್ತಿನ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ

October 4, 2025

ಯಡಿಯೂರಪ್ಪನವರ ಬಗ್ಗೆ ಮಾತನಾಡುವ ಯೋಗ್ಯತೆ ಸಚಿವ ಮಧುಗೆ ಇಲ್ಲ | ಸಂಸದ ರಾಘವೇಂದ್ರ ಚಾಟಿ

October 4, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕಿಚ್ಚಾಸ್ ಕಿಂಗ್ಸ್ ಬೆಂಗಳೂರು: ತಂಡಕ್ಕೆ ಗೆಲುವು ತಂದು ಕೊಟ್ಟ ಕೈಲ್ ಕುಮಾರನ್ ಮತ್ತು ನೀಲ್ ಜಾನಿ

October 4, 2025

ಪಿಇಎಸ್’ಐಎಂಎಸ್ ಕಾಲೇಜಿನಲ್ಲಿ ಹಣಕಾಸಿನ ಸಾಕ್ಷರತೆ ಕುರಿತ ವಿಶೇಷ ಉಪನ್ಯಾಸ

October 4, 2025

ಸತತ 5ನೆ ಬಾರಿ ಕುವೆಂಪು ವಿವಿ ಪ್ರಾಧ್ಯಾಪಕರ ದಾಖಲೆ | ಜಗತ್ತಿನ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ

October 4, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!