No Result
View All Result
Le Méridien Dehradun in the Foothills of the Himalayas, Inviting Guests to Slow Down and Savour the Good Life
English Articles

Le Méridien Dehradun in the Foothills of the Himalayas, Inviting Guests to Slow Down and Savour the Good Life

by ಕಲ್ಪ ನ್ಯೂಸ್
February 25, 2026
0

Kalpa Media House  |  Bengaluru  | Le Méridien Hotels & Resorts, part of Marriott Bonvoy’s global portfolio of over 30...

Read moreDetails
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
Amazon Opens Its Second Largest Office in Asia in Bengaluru

Amazon Opens Its Second Largest Office in Asia in Bengaluru

February 24, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

SWR Opens Makajipalli–Dharmavaram Double Line Project

February 23, 2026
Samruddhi Kundapura: The Rising Pole Star of Coastal Talent

Samruddhi Kundapura: The Rising Pole Star of Coastal Talent

February 23, 2026
  • Advertise With Us
  • Grievances
  • About Us
  • Contact Us
Wednesday, February 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಅಂಕಣ ಕಾನೂನು ಕಲ್ಪ

ಚೆಕ್ ಬೌನ್ಸ್ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಕೋರ್ಟಿನ ಹೊಸ ಮಾರ್ಗಸೂಚಿಯಲ್ಲಿ ಏನಿದೆ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 4, 2025
in ಕಾನೂನು ಕಲ್ಪ
0
ಚೆಕ್ ಬೌನ್ಸ್ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಕೋರ್ಟಿನ ಹೊಸ ಮಾರ್ಗಸೂಚಿಯಲ್ಲಿ ಏನಿದೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾನೂನು ಕಲ್ಪ – ಪ್ರಶ್ನೋತ್ತರ ಅಂಕಣ  |ಚೆಕ್ ಬೌನ್ಸ್ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಕೋರ್ಟ್ ನೂತನ ಮಾರ್ಗಸೂಚಿಗಳನ್ನು ಹೊರಡಿಸಿದೆ.

ಸಂಜಬಿಜ್ ತರಿ ವಿರುದ್ಧ ಕಿಶೋರ್ ಬೋರ್ಕರ್ ಪ್ರಕರಣದ ವಿಚಾರಣೆಯಲ್ಲಿ, ಸುಪ್ರೀಂ ಕೋರ್ಟಿನ ನ್ಯಾಯಮೂರ್ತಿಗಳಾದ ಶ್ರೀ ಮನಮೋಹನ್ ಹಾಗು ಶ್ರೀ ಎನ್ ವಿ ಅಂಜಾರಿಯಾ ಅವರನ್ನು ಒಳಗೊಂಡ ನ್ಯಾಯಪೀಠ ದೇಶಾದ್ಯಂತ ಅದರಲ್ಲೂ ಮಹಾನಗರಗಳ ಜಿಲ್ಲಾ ಕೋರ್ಟುಗಳಲ್ಲಿ ಚೆಕ್ ಬೌನ್ಸ್ ಪ್ರಕರಣಗಳು ದೊಡ್ಡ ಸಂಖ್ಯೆಯಲ್ಲಿ ಬಾಕಿ ಉಳಿದಿರುವ ವಿಚಾರವನ್ನು ಪರಿಗಣನೆಗೆ ತೆಗೆದುಕೊಂಡು, ಈ ಮಾರ್ಗಸೂಚಿಗಳನ್ನು ಹೊರಡಿಸಿದೆ.

ಆರೋಪಿಗೆ ಸಮನ್ಸ್ ಜಾರಿಯಲ್ಲಿನ ಸಮಸ್ಯೆಗಳೂ ಕೂಡ ಚೆಕ್ ಬೌನ್ಸ್ ಕೇಸುಗಳ ಇತ್ಯರ್ಥದಲ್ಲಿ ಆಗುತ್ತಿರುವ ವಿಳಂಬಕ್ಕೆ ಪ್ರಮುಖ ಕಾರಣ ಎಂದೇ ವಿಶ್ಲೇಷಿಸಲಾಗುತ್ತಿದೆ. ಇದನ್ನು ಪರಿಗಣನೆಗೆ ತೆಗೆದುಕೊಂಡಿರುವ ಸುಪ್ರೀಂ ಕೋರ್ಟ್, ನೂತನ ಮಾರ್ಗಸೂಚಿಗಳ ಪ್ರಕಾರ, ನೆಗೋಶಿಯೇಬಲ್ ಇನ್ಸ್ಟ್ರುಮೆಂಟ್ಸ್ ಕಾಯಿದೆಯ ಕಲಂ 138ರ ಅಡಿ ದಾಖಲಾಗುವ ಪ್ರಕರಣದಲ್ಲಿ, ಆರೋಪಿಗೆ ಸಾಂಪ್ರದಾಯಿಕ ಮಾದರಿಯ ಸಮನ್ಸ್ ಜಾರಿ ವ್ಯವಸ್ಥೆಯಾದ ರಿಜಿಸ್ಟರ್ಡ್ ಪೋಸ್ಟ್ ಅಲ್ಲದೆ, ದಸ್ತಿ ಸಮನ್ಸ್ ಅಂದರೆ ವೈಯಕ್ತಿಕ ಸಮನ್ಸ್ (hand summons) ಜಾರಿ ಮಾಡಲು ಕೂಡ ವ್ಯವಸ್ಥೆ ಕಲ್ಪಿಸಬೇಕು ಎಂದಿದೆ.

ಅಲ್ಲದೆ, ಇಲೆಕ್ಟ್ರಾನಿಕ್ ಮಾಧ್ಯಮಗಳಾದ ಈ ಮೇಲ್, ವಾಟ್ಸಪ್ಪ್ ಸಂದೇಶಗಳ ಮೂಲಕವೂ ಸಮನ್ಸ್ ಜಾರಿ ಮಾಡಲು ಭಾರತೀಯ ನಾಗರೀಕ ಸುರಕ್ಷಾ ಸಂಹಿತೆಯ ಕಲಂ 64(1), 64(2) ಅಥವಾ 530(1)ರ ಅಡಿಯಲ್ಲಿ ಏನಾದರೂ ನಿಯಮಗಳು ಜಾರಿಯಲ್ಲಿದ್ದರೆ, ವಿಚಾರಣಾ ನ್ಯಾಯಾಲಯ ಇಲೆಕ್ಟ್ರಾನಿಕ್ ಮಾಧ್ಯಮದ ಮೂಲಕ ಸಮನ್ಸ್ ಜಾರಿಗೆ ಅವಕಾಶ ಕಲ್ಪಿಸಬೇಕು ಎಂದಿದೆ. ಚೆಕ್ ಬೌನ್ಸ್ ಪ್ರಕರಣಗಳ ದೂರಿನಲ್ಲಿ ಆರೋಪಿಯ ಈ ಮೇಲ್, ವಾಟ್ಸಪ್ಪ್ ವಿವರಗಳನ್ನು ನಮೂದಿಸಬೇಕು ಹಾಗು ಈ ನಿಟ್ಟಿನಲ್ಲಿ ಒಂದು ಪ್ರಮಾಣಪತ್ರವನ್ನು ಕೂಡ ಸಲ್ಲಿಸಬೇಕು ಎಂದು ಹೇಳಿದೆ. ಮೇಲೆ ನಮೂದಿಸಿದ ಮಾಧ್ಯಮಗಳ ಮೂಲಕ ಆರೋಪಿಗೆ ಸಮನ್ಸ್ ಜಾರಿಯಾದ ಬಗ್ಗೆ ಕೂಡ ದೂರುದಾರ ಒಂದು ಅಫಿಡವಿಟ್ ಸಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.ಕೇಸುಗಳ ತ್ವರಿತ ಇತ್ಯರ್ಥಕ್ಕೆ, ಪ್ರತಿ ಜಿಲ್ಲಾ ಹಾಗು ಸತ್ರ ನ್ಯಾಯಾಲಯ, ಚೆಕ್ ಹಣದ ಸುಲಭ ಮರುಪಾವತಿಗೆ QR code ಹಾಗು UPI payment links ಮೂಲಕ ವ್ಯವಸ್ಥೆ ಮಾಡಬೇಕು. ಸಮನ್ಸ್ ನಲ್ಲಿಯೇ ಆರೋಪಿಗೆ ಸುಲಭ ಮರುಪಾವತಿ ವಿಧಾನಗಳ ಬಗ್ಗೆ ತಿಳಿಸಿ, ಪ್ರಕರಣದ ಶೀಘ್ರ ಮುಕ್ತಾಯಕ್ಕೆ ಪ್ರಯತ್ನಿಸಬೇಕು.

ಕಾಯಿದೆಯ ಕಲಂ 143ರ ಉದ್ದೇಶ Summary Trial ಅಂದರೆ ಸಂಕ್ಷಿಪ್ತ ವಿಚಾರಣೆಯ ಮೂಲಕ ಪ್ರಕರಣದ ಶೀಘ್ರ ಇತ್ಯರ್ಥ. ಸಂಕ್ಷಿಪ್ತ ವಿಚಾರಣೆಯನ್ನು ಸಮನ್ಸ್ ವಿಚಾರಣೆಯಾಗಿ ಕೈಗೆತ್ತಿಕೊಳ್ಳಲು ವಿಚಾರಣಾ ನ್ಯಾಯಾಲಯ ಇಚ್ಚಿಸಿದಲ್ಲಿ, ಅದಕ್ಕೆ ಕಾರಣಗಳನ್ನು ನೀಡಬೇಕು ಎಂದೂ ಕೂಡ ಸುಪ್ರೀಂ ಕೋರ್ಟ್ ಹೇಳಿದೆ.

ನೆಗೋಶಿಯೇಬಲ್ ಇನ್ಸ್ಟ್ರುಮೆಂಟ್ಸ್ ಕಾಯಿದೆಯಲ್ಲಿ ಚೆಕ್ ಅಮಾನ್ಯಗೊಂಡು ಹಣ ಪಾವತಿಯಾಗದಿದ್ದಾಗ ನೀಡಲಾಗುವ ಶಿಕ್ಷೆ, ಪ್ರತಿಕಾರ ಪಡೆಯುವ ಸಾಧನವಲ್ಲ, ಬದಲಾಗಿ ಹಣ ಮರುಪಾವತಿ ಖಚಿತಪಡಿಸಿಕೊಳ್ಳಲು ಹಾಗು ಹಣಪಾವತಿಯ ಸಾಧನವಾಗಿ ಚೆಕ್ಕುಗಳ ವಿಶ್ವಾಸಾರ್ಹತೆಯನ್ನು ಹೆಚ್ಚಿಸುವುದಾಗಿದೆ, ಎಂದೂ ಕೂಡ ಸುಪ್ರೀಂ ಕೋರ್ಟ್ ಹೇಳಿದೆ.

ದೂರಿನೊಟ್ಟಿಗೆ ಪ್ರಕರಣದ ಸಾರಾಂಶ ವರದಿ ಸಲ್ಲಿಸುವುದನ್ನು ಖಡ್ಡಾಯಗೊಳಿಸಬೇಕು ಎಂದು ಕೂಡ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಆತ್ಮೀಯ ಓದುಗರೇ,
ಕಲ್ಪ ಮೀಡಿಯಾ ಹೌಸ್(ರಿ.) ಅಡಿಯಲ್ಲಿ ಪ್ರಕಟವಾಗುತ್ತಿರುನ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾದಲ್ಲಿ ನಮ್ಮ ಓದುಗರಿಗಾಗಿ `ಕಾನೂನು ಕಲ್ಪ’ ಎಂಬ ಹೊಸ ಅಂಕಣವನ್ನು ಆರಂಭಿಸಲಾಗಿದ್ದು, ಪ್ರತಿ ಶುಕ್ರವಾರ ಪ್ರಕಟವಾಗಲಿದೆ. ಶಿವಮೊಗ್ಗ-ಭದ್ರಾವತಿಯ ಖ್ಯಾತ ವಕೀಲರು ಹಾಗೂ ಹಿರಿಯ ಪತ್ರಕರ್ತರೂ ಆಗಿರುವ ಶ್ರೀ ವೀರೇಂದ್ರ ಪಿ.ಎಂ. ಅವರು ಯಾವುದೇ ರೀತಿಯ ಕಾನೂನು ಸಮಸ್ಯೆಗಳು, ಕಾನೂನಿನ ಕುರಿತಾಗಿನ ಮಾರ್ಗದರ್ಶನ ಮಾಡಲಿದ್ದಾರೆ. ಸಾರ್ವಜನಿಕರು ತಮಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದರೆ ನಮಗೆ ಕಳುಹಿಸಬಹುದು. ಆ ಪ್ರಶ್ನೆಗಳಿಗೆ ವಕೀಲರಾದ ಶ್ರೀ ವೀರೇಂದ್ರ ಪಿ.ಎಂ. ಅವರು ಉತ್ತರ ನೀಡಲಿದ್ದಾರೆ. ನಿಮ್ಮ ಪ್ರಶ್ನೆಗಳು ಸ್ಪಷ್ಟ, ಸ್ಪುಟ, ನೇರವಾಗಿರಲಿ.

ನಿಮ್ಮ ಪ್ರಶ್ನೆಗಳನ್ನು ಈ ಕೆಳಗಿನ ವಾಟ್ಸಪ್ ಸಂಖ್ಯೆ 9481252093 (ವಾಟ್ಸಪ್ ಮಾತ್ರ) ಅಥವಾ ಇ-ಮೇಲ್ info@kalpa.news ಗೆ ಕಳುಹಿಸಬಹುದು.  

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/09/Vedic-Maths-New.mp4

http://kalpa.news/wp-content/uploads/2024/04/VID-20240426-WA0008.mp4

  

Tags: Check bouncehand summonsIndian Civil Security CodeKannada News WebsiteLatest News Kannadaಚೆಕ್ ಬೌನ್ಸ್ಚೆಕ್‌ ಬೌನ್ಸ್‌ ಪ್ರಕರಣನ್ಯಾಯಾಲಯಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2023ಮಾರ್ಗಸೂಚಿವೈಯಕ್ತಿಕ ಸಮನ್ಸ್ಸುಪ್ರೀಂ ಕೋರ್ಟ್
Share196Tweet123Send
Previous Post

ಈ ಜಾತಿಗಣತಿ ಮಾಡಿ ಪ್ರಯೋಜನವೇನು ಸಂಸದ ಬಿ.ವೈ. ರಾಘವೇಂದ್ರ ಪ್ರಶ್ನೆ

Next Post

ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಕೃಷ್ಣಾ ನದಿಯ ಮೇಲೆ 805 ಮೀಟರ್ ಉದ್ದದ ರೈಲ್ವೆ ಸೇತುವೆ ಕಾರ್ಯಾರಂಭ: ಎಜಿಎಮ್ ಅನಂತ್ 

ಕೃಷ್ಣಾ ನದಿಯ ಮೇಲೆ 805 ಮೀಟರ್ ಉದ್ದದ ರೈಲ್ವೆ ಸೇತುವೆ ಕಾರ್ಯಾರಂಭ: ಎಜಿಎಮ್ ಅನಂತ್ 

February 25, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

February 25, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಹೋಳಿ ಹಬ್ಬ | ಹುಬ್ಬಳ್ಳಿ – ಮುಜಫರ್‌ಪುರ ನಡುವೆ ವಿಶೇಷ ರೈಲುಗಳ ಸಂಚಾರ

February 25, 2026
Minister Somanna Inspects Road Over Bridges at Tiptur

Minister Somanna Inspects Road Over Bridges at Tiptur

February 25, 2026
ಶತಮಾನೋತ್ಸವ ಸಂಭ್ರಮದ ಹೊಸ್ತಿಲಲ್ಲಿ ಆನವಟ್ಟಿ ಸರ್ಕಾರಿ ಶಾಲೆ

ಶತಮಾನೋತ್ಸವ ಸಂಭ್ರಮದ ಹೊಸ್ತಿಲಲ್ಲಿ ಆನವಟ್ಟಿ ಸರ್ಕಾರಿ ಶಾಲೆ

February 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL