ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ರಾಷ್ಟ್ರವ್ಯಾಪಿ ಕೋವಿಡ್-19 ವ್ಯಾಕ್ಸಿನೇಷನ್ ಡ್ರೈವ್ನ ಎರಡನೇ ಹಂತವು ಆರಂಭವಾದ ಬೆನ್ನಲ್ಲೇ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ದಂಪತಿಗಳು ಲಸಿಕೆ ಹಾಕಿಸಿಕೊಂಡಿದ್ದಾರೆ.
ಇಂದು ಸರ್ಕಾರಿ ಆರ್ಯುವೇದಿಕ್ ಕಾಲೇಜು ಆಸ್ಪತ್ರೆಗೆ ತೆರಳಿದ ಈಶ್ವರಪ್ಪ ದಂಪತಿಗಳು ಲಸಿಕೆ ಹಾಕಿಸಿಕೊಳ್ಳುವ ಮೂಲಕ ಜಿಲ್ಲೆಯ ಜನತೆಗೆ ಮಾದರಿಯಾಗಿದ್ದಾರೆ.
ಈ ವೇಳೆ ಮಾತನಾಡಿದ ಅವರು, ವಿಶ್ವವನ್ನೇ ಕಾಡಿದ ಇಂತಹ ಮಹಾಮಾರಿಗೆ ಲಸಿಕೆ ಕಂಡು ಹಿಡಿದಿರುವ ಭಾರತದ ವಿಜ್ಞಾನಿಗಳನ್ನು ಅಭಿನಂದಿಸುತ್ತೇನೆ ಎಂದರು.
60 ವರ್ಷ ದಾಟಿರುವವರು ಲಸಿಕೆ ಪಡೆದುಕೊಂಡರೆ ತೊಂದರೆಯಾಗುತ್ತಿದೆ. ಆದರೆ, ಈ ಲಸಿಕೆ ಪಡೆದುಕೊಳ್ಳುವುದರಿಂದ ಯಾವುದೇ ರೀತಿಯ ತೊಂದರೆಯಿಲ್ಲ. ಜನರು ವದಂತಿಗಳನ್ನು ನಂಬಬಾರದು ಎಂದರು.
ಇನ್ನು, ಸರ್ಕಾರಿ ಆಸ್ಪತ್ರೆಯಗಳಲ್ಲಿ ಈ ಲಸಿಕೆ ಸಂಪೂರ್ಣ ಉಚಿತವಾಗಿದ್ದು, ಖಾಸಗಿ ಆಸ್ಪತ್ರೆಗಳಲ್ಲಿ 250 ರೂ. ದರ ನಿಗದಿ ಪಡಿಸಲಾಗಿದೆ. ಸಾರ್ವಜನಿಕರು ಯಾವುದೇ ರೀತಿಯ ಹಿಂಜರಿಕೆಯಿಲ್ಲದೇ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post