ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಸಿಗಂಧೂರು: ಈ ಭಾಗದ ಜನರ ದಶಕಗಳ ಬೇಡಿಕೆಯಾಗಿದ್ದ ಸಿಗಂಧೂರು ಸೇತುವೆ ಕಾಮಗಾರಿ ಭರದಿಂದ ಸಾಗಿದ್ದು, ಇಂದು ಸಂಸದ ಬಿ.ವೈ. ರಾಘವೇಂದ್ರ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇಂದು ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಂಸದರು, ಕಾಮಗಾರಿ ಪ್ರಗತಿ ಕುರಿತಾಗಿ ಅಧಿಕಾರಿಗಳು ಹಾಗೂ ಇಂಜಿನೀಯರ್’ಗಳಿಂದ ಮಾಹಿತಿ ಪಡೆದುಕೊಂಡರು.
ಈ ವೇಳೆ ಮಾತನಾಡಿದ ಸಂಸದರು, ಈ ಭಾಗದ ಜನರ ದಶಕಗಳ ಬೇಡಿಕೆಯಾಗಿದ್ದ ಈ ಸೇತುವೆಗಾಗಿ ಜನಪ್ರತಿನಿಧಿಗಳು, ಅಧಿಕಾರಿಗಳು ಬಹಳಷ್ಟು ಶ್ರಮ ವಹಿಸಿದ್ದಾರೆ. ನಾಡಿಗೆ ಬೆಳಕು ನೀಡಿರುವ ಈ ಭಾಗದ ಜನರ ಅಗತ್ಯತೆಯನ್ನು ಎಷ್ಟೇ ಕಷ್ಟವಾದರೂ ಈಡೇರಿಸಬೇಕಾದ್ದು ನಮ್ಮ ಕರ್ತವ್ಯ. ಹೀಗಾಗಿ, ಕೇಂದ್ರ ಸರ್ಕಾರದ ಮೇಲೆ ತೀವ್ರ ಒತ್ತಡ ತಂದು ಇದನ್ನು ಅನುಮೋದನೆ ಮಾಡಿಕೊಳ್ಳಲಾಗಿದೆ ಎಂದರು.
ಸೇತುವೆ ಕಾಮಗಾರಿ ಭರದಿಂದ ಸಾಗಿದ್ದು, ಕಾಮಗಾರಿಯ ವೇಗ ಹಾಗೂ ಗುಣಮಟ್ಟವನ್ನು ಖುದ್ದು ಪರಿಶೀಲಿಸುವ ಸಲುವಾಗಿ ಸಂಸದರು ಇಲ್ಲಿಗೆ ಆಗಾಗ್ಗೆ ಭೇಟಿ ನೀಡುವುದು ಅವರ ಕಾಳಜಿಯನ್ನು ತೋರಿಸುತ್ತಿದೆ.
ಸಂಸದರೊಂದಿಗೆ ಜಿಲ್ಲಾಧಿಕಾರಿ ಶಿವಕುಮಾರ್, ಶಾಸಕ ಹರತಾಳು ಹಾಲಪ್ಪ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಬಿಜೆಪಿ ಜಿಲ್ಲಾಧ್ಯಕ್ಷ ಮೇಘರಾಜ್, ಪ್ರಮುಖರಾದ ಎಸ್. ದತ್ತಾತ್ರಿ, ಬಳ್ಳೇಕೆರೆ ಸಂತೋಷ್, ಮಾಲತೇಶ್ ಸೇರಿದಂತೆ ಹಲವರಿದ್ದರು.
Get in Touch With Us info@kalpa.news Whatsapp: 9481252093
Discussion about this post