Saturday, August 16, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಅಂಕಣ ಡಾ.ಗುರುರಾಜ ಪೋಶೆಟ್ಟಿಹಳ್ಳಿ

18 ಪುರಾಣಗಳಲ್ಲಿ ಯಾವುದು ಏನು ಹೇಳುತ್ತದೆ? ದಿನಕ್ಕೊಂದರ ಬಗ್ಗೆ ತಿಳಿಯಿರಿ: ಮಾಲಿಕೆ-4 ವಾಯು ಪುರಾಣ

March 29, 2020
in ಡಾ.ಗುರುರಾಜ ಪೋಶೆಟ್ಟಿಹಳ್ಳಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶ್ಲೋಕ ಸಂಖ್ಯೆ 24,000 ಎಂಬ ಹೇಳಿಕೆಯಿದ್ದರೂ ಮುದ್ರಿತಪ್ರತಿಯ ಸಂಖ್ಯೆ 12,000 ಮಾತ್ರ. ಇದು ಬಹುಶಃ ಪುರಾಣದ ಒಂದನೆಯ ಖಂಡದಷ್ಟೇ ಆಗಿರಬೇಕು. ಅನುಕ್ರಮಣಿಕೆಗಳ ಕಾಲದಲ್ಲಿ ದೇವಾದಿ ಮಹಾತ್ಮ್ಯಗಳು ಇದಕ್ಕೆ ಸೇರಿದ್ದವೆಂದು ತೋರುತ್ತದೆ. ಇದು ಎಲ್ಲ ಪುರಾಣಗಳಿಗಿಂತ ಹೆಚ್ಚು ಪ್ರಾಚೀನವೆಂದು ನಂಬಲಾಗಿದೆ. ವಾಯು ಬ್ರಹ್ಮಾಂಡಗಳೆರಡೂ ವಾಯುಪ್ರೋಕ್ತ ಪುರಾಣಗಳಾದುದರಿಂದ ಇವು ಮೊದಲು ಒಂದೇ ಕೃತಿಯಾಗಿದ್ದುವೆಂದು ಪಾರ್ಗಿಟರ್ನ ಮತ. ಮಹಾಭಾರತ, ಹರಿವಂಶಗಳು ವಾಯುಪುರಾಣವನ್ನು ಉಲ್ಲೇಖಿಸುತ್ತವೆ, ಶ್ಲೋಕಗಳನ್ನು ಉದ್ಧರಿಸುತ್ತವೆ. ಕ್ರಿಶ 4ನೆಯ ಶತಮಾನದ ಗುಪ್ತಚಕ್ರವರ್ತಿಗಳ ಆಳ್ವಿಕೆ ಇಲ್ಲಿ ವರ್ಣಿತವಾಗಿದೆ.

ಆದುದರಿಂದ ಪ್ರಾಚೀನತಮವಾದ ಮೂಲವಾಯು ಪುರಾಣದ ಕಾಲ ಯಾವುದೇ ಆದರೂ ಅದರ ಇಂದಿನ ರೂಪದ ಬಹುಭಾಗ ಪ್ರ.ಶ. ಸು. 5ನೆಯ ಶತಮಾನದ್ದೆಂದು ವಿಂಟರ್ನಿಟ್ಜನ ಅಭಿಪ್ರಾಯ. ಜನತ್ಸೃಷ್ಟಿ ವಂಶವೃಕ್ಷ ಮುಂತಾದ ಪ್ರಾಚೀನ ಪೌರಾಣಿಕ ವಿಷಯಗಳೂ ಶಿವೋತ್ಕರ್ಷವನ್ನು ಸಾಧಿಸುವ ಕತೆಗಳೂ ಜಗತ್ಪ್ರಳಯವೂ ಯೋಗಮಾರ್ಗ ಪ್ರಶಂಸೆಯೂ ಶಿವಪುರ ವರ್ಣನ, ವಿಷ್ಣುಪ್ರಭಾವ, ಶ್ರಾದ್ಧ, ಗೀತಾಲಂಕಾರ, ಗಯಾ ಮಾಹಾತ್ಮ್ಯಗಳೂ ಈ ಪುರಾಣದ ಮುಖ್ಯಾಂಶಗಳು. ಇದಕ್ಕೆ ಸೇರಿದವೆಂದು ಹೇಳಲಾಗುವ ಇನ್ನೂ ಎಷ್ಟೋ ಸ್ತೋತ್ರಗಳೂ ಮಾಹಾತ್ಮ್ಯಗಳೂ ಕರ್ಮವಿಧಿಗ್ರಂಥಗಳೂ ದೊರಕುತ್ತವೆ. ಪ್ರಸ್ತುತ ವಾಯುಪುರಾಣದಲ್ಲಿರುವ ಪ್ರಾಚೀನ ಭಾಗಗಳ ಕಾಲ ಪ್ರ.ಶ. 200 ಅಥವಾ ಅದಕ್ಕೂ ಹಿಂದೆ ಹೋಗಬಹುದು.

ವಾಯುಪುರಾಣ ದೇವರಲ್ಲಿಯ ಸೃಷ್ಟಿಮಾಡುವ ಪ್ರವೃತ್ತಿಯ ಮೂಲಕಾರಣವನ್ನು ಅಪ್ರಮೇಯವೆನ್ನುತ್ತದೆಯಲ್ಲದೆ, ಅದನ್ನು ಬ್ರಹ್ಮ, ಪ್ರಧಾನ, ಪ್ರಕೃತಿ, ಪ್ರಕೃತಿ-ಪ್ರಸೂತಿ, ಆತ್ಮ, ಗುಹ, ಯೋನಿ, ಚಕ್ಷುಸ್, ಕ್ಷೇತ್ರ, ಅಮೃತ, ಅಕ್ಷರ, ಶುಕ್ರ, ತಪಸ್, ಸತ್ಯ ಅಥವಾ ಅತಿಪ್ರಕಾಶ ಎಂದೂ ಕರೆಯುತ್ತದೆ, ಅದು ಲೋಕಪಿತಾಮಹನಾದ ಎರಡನೆಯ ಪುರುಷನನ್ನು ಸುತ್ತುವರಿದಿರುತ್ತದೆ. ಕಾಲಸಂಪರ್ಕ ಮತ್ತು ರಜಃ ಪ್ರಾಧಾನ್ಯಗಳಿಂದ ಕ್ಷೇತ್ರಜ್ಞನಿಗೆ ಸಂಬಂಧಿಸಿದ ಎಂಟು ಪರಿವರ್ತನಗಳಾಗುತ್ತವೆ.

ಪ್ರಕೃತಿ ಮೂಲತಃ ಇಂದ್ರಿಯಗ್ರಾಹ್ಯ ಗುಣಗಳುಳ್ಳದ್ದಲ್ಲ; ಸತ್ತ್ವಾದಿಗುಣತ್ರಯದಿಂದ ಕೂಡಿದ್ದು; ಕಾಲಾತೀತ ಮತ್ತು ಅಜ್ಞೇಯ. ತನ್ನ ಮೂಲಸ್ವರೂಪ ವಾದ ಗುಣತ್ರಯ ಸಾಮ್ಯಾವಸ್ಥೆಯಲ್ಲದ್ದು ತಮೊರೂಪದಿಂದ ಎಲ್ಲವನ್ನೂ ಆವರಿಸಿತ್ತು. ಸೃಷ್ಟಿಕಾಲದಲ್ಲಿ ಅದಕ್ಕೆ ಕ್ಷೇತ್ರಜ್ಞ ಸಂಪರ್ಕವುಂಟಾಗಿ ಅದರಿಂದ ಮಹತ್ತತ್ತ್ವ ಹುಟ್ಟಿತು. ಈ ಮಹತ್ತನ್ನು ಮನಸ್, ಮತಿ, ಬ್ರಹ್ಮ, ರ್ಪು, ಬುದ್ಧಿ, ಖ್ಯಾತಿ, ಈಶ್ವರ, ಚಿತಿ, ಪ್ರಜ್ಞೆ, ಸ್ಮೃತಿ, ಸಂವಿತ್, ವಿಪುರ ಎಂಬ ಹೆಸರುಗಳಿಂದ ಕರೆಯುತ್ತಾರೆ.
ಸತ್ತ್ವಪ್ರಧಾನವೂ ಶುದ್ಧಾಸ್ತಿತ್ವ ಸ್ವರೂಪವುಳ್ಳದ್ದೂ ಆದ ಮಹತ್ತು ಸೃಜಿಸುವ ಇಚ್ಛೆಯುಂಟಾದಾಗ ಧರ್ಮಾಧರ್ಮಾದಿ ಪದಾರ್ಥಗಳನ್ನು ನಿರ್ಮಿಸುತ್ತದೆ. ಇಡೀ ವಿಶ್ವದ ಚರಾಚರಗಳೆಲ್ಲವೂ ಮಹತ್ವದ ಪರಿಣಾಮಗಳು. ಕ್ಷೇತ್ರ, ಕ್ಷೇತ್ರಜ್ಞರಲ್ಲಿ ಅದೇ ಜ್ಞಾತೃ. ಕ್ಷೇತ್ರಜ್ಞನೇ ಬ್ರಹ್ಮ, ಹಿರಣ್ಯ ಗರ್ಭ. ಗುಣತ್ರಯದ ಸಹಕಾರದಿಂದಾಗಿ ಮೊಟ್ಟೆಯಿಂದ ಆತ ಹುಟ್ಟಿದವ. ಪ್ರತಿ ಪ್ರಳಯದಲ್ಲೂ ಬ್ರಹ್ಮನ ಶರೀರ ನಾಶವಾಗುತ್ತದೆ. ಮೊಟ್ಟೆಯ ರೂಪದ ಬ್ರಹ್ಮಾಂಡ ಜಲ, ಪ್ರಕಾಶ, ಉಷ್ಣತೆ, ವಾಯು, ಆಕಾಶ, ಭೂತಾದಿ, ಮಹತ್ ಮತ್ತು ಅವ್ಯಕ್ತಗಳಿಂದ ಆವೃತವಾಗಿದೆ.

ವಾಯು ಮತ್ತು ಬ್ರಹ್ಮಾಂಡ ಪುರಾಣಗಳ ಪ್ರಕಾರ ಸೃಷ್ಟಿಯ ಆ ಆದಿಕಾಲದಲ್ಲಿ ಬ್ರಹ್ಮ ಸಾತ್ತ್ವಿಕ, ರಾಜಸ, ಸಾತ್ವಿಕ ರಾಜಸ, ಮತ್ತು ತಾಮಸಿಕ ಎಂಬ ನಾಲ್ಕು ಬಗೆಗಳ ಮನುಷ್ಯರನ್ನು ತನ್ನ ಬಾಯಿ, ಎದೆ, ತೊಡೆ ಮತ್ತು ಪಾದಗಳಿಂದ ಹುಟ್ಟಿಸಿದನೆಂದೂ ಅವರೆಲ್ಲರೂ ಮೇಲು-ಕೀಳೆಂಬ ಭೇದವಿಲ್ಲದೆ ಸಮಾನರಾಗಿ ಬಾಳುತ್ತಿದ್ದರೆಂದೂ ಅವರಲ್ಲಾಗ ವರ್ಣಾಶ್ರಮ ಭೇದಗಳಿರಲಿಲ್ಲವೆಂದೂ ಚಳಿಬಿಸಿಲುಗಳ ಅಂಜಿಕೆಯಿಲ್ಲದೆ, ಮನೆ-ಮಠಗಳನ್ನಾಶ್ರಯಿಸದೆ ದಿವ್ಯ ಜೀವನ ನಡೆಸುತ್ತಿದ್ದರೆಂದೂ ತಿಳಿಯುತ್ತದೆ.

ತಮ್ಮ ದಿವ್ಯತೆಯನ್ನವರು ಕಳೆದುಕೊಂಡು ಮರ್ತ್ಯರಾದಾಗ ತಮ್ಮ ಕರ್ಮಕ್ಕೆ ತಕ್ಕಂತೆ ಮುಂದೆ ಜನ್ಮಗಳನ್ನು ಪಡೆದು, ಹಿಂದಿನದಕ್ಕೆ ವ್ಯತಿರಿಕ್ತವಾದ ಸ್ಥಿತಿಗಿಳಿದರು. ವರ್ಣ ಜಾತಿಗಳ ಮತ್ತು ರಾಜಾಧಿಕಾರದ ಅಗತ್ಯವುಂಟಾಗಲು ಮಾನವರು ಭ್ರಮಿಷ್ಠರಾಗಿ, ಪಾಪಮಾಡಿ, ದಿನೇ ದಿನೇ ಅಧಃಪತನ ಹೊಂದುತ್ತ ಹೋದುದೇ ಕಾರಣವೆಂದು ಉಕ್ತಪುರಾಣಗಳ ಮತ.

ಕೃತಯುಗದಿಂದ ಕಲಿಯುಗದವರೆಗೆ ಧರ್ಮ ಕ್ಷೀಣವಾಗುತ್ತಾ ಹೋದ ಹಾಗೆ ಅದನ್ನು ಅರ್ಜಿಸುವ ವಿಧಾನಗಳ ಬಿಗಿಯೂ ಕಡಿಮೆಯಾಗುತ್ತದೆ, ರಾಜಾಧಿಕಾರ ದೇವಾಧಿಕಾರಕ್ಕೆ ಸರಿದೊರೆಯಾಗುತ್ತದೆ; ಪ್ರಭು ಪ್ರಜೆಗಳಿಬ್ಬರೂ ಪರಸ್ಪರರ ಬಗ್ಗೆ ಮಾಡಬೇಕಾದ ಕರ್ತವ್ಯಗಳನ್ನು ಮಾಡದಿದ್ದರೆ ದಂಡನೀಯವಾಗುತ್ತಾರೆ-ಎಂಬೀ ಅಂಶಗಳನ್ನೂ ವಿಷ್ಣು ಭಾಗವತ, ಮಾರ್ಕಂಡೇಯ ಪುರಾಣಗಳಂತೆಯೇ ಇವೂ ಪ್ರತಿಪಾದಿಸಿವೆ. ಸರ್ವರೂ ಧರ್ಮಾಧೀನರೆಂಬ ಸ್ಮೃತಿಪರಂಪರೆಗಿದು ಸಮ್ಮತ.


Get in Touch With Us info@kalpa.news Whatsapp: 9481252093

Tags: 18 Puranas18 ಪುರಾಣDr Gururaj PoshettihalliHindu MythologyKannadaNewsWebsiteLatestNewsKannadaVayu Puranaಡಾ.ಗುರುರಾಜ ಪೋಶೆಟ್ಟಿಹಳ್ಳಿವಾಯು ಪುರಾಣ
Previous Post

18 ಪುರಾಣಗಳಲ್ಲಿ ಯಾವುದು ಏನು ಹೇಳುತ್ತದೆ? ದಿನಕ್ಕೊಂದರ ಬಗ್ಗೆ ತಿಳಿಯಿರಿ: ಮಾಲಿಕೆ-3 ವಿಷ್ಣು ಪುರಾಣ

Next Post

ಕೋವಿಡ್19: ಸಿಕ್ಕಾಪಟ್ಟೆ ವೈರಲ್ ಆಗಿರುವ ಆರ್ಯುವೇದ ತಜ್ಞರೊಬ್ಬರ ಸಲಹೆಯೇನು ಗೊತ್ತಾ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕೋವಿಡ್19: ಸಿಕ್ಕಾಪಟ್ಟೆ ವೈರಲ್ ಆಗಿರುವ ಆರ್ಯುವೇದ ತಜ್ಞರೊಬ್ಬರ ಸಲಹೆಯೇನು ಗೊತ್ತಾ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಏಳು ತಿಂಗಳಲ್ಲಿ ರೈಲ್ವೆ ಮೈಸೂರು ವಿಭಾಗದಲ್ಲಿ ಅಪರಿಮಿತ ಸಾಧನೆ : ಡಿಆರ್’ಎಂ ಮುದಿತ್ ಮಿತ್ತಲ್

August 15, 2025

ಶಿವಮೊಗ್ಗ | ಪ್ರತಿ ಸ್ವಾತಂತ್ರೋತ್ಸವವು ಕೂಡ ಸಂಕಲ್ಪದ ಹೆಜ್ಜೆಗಳಾಗಲಿ : ಡಾ. ಸಂಧ್ಯಾ ಕಾವೇರಿ

August 15, 2025

ಶಿಕಾರಿಪುರ | ದೇಶದ ಐಕ್ಯತೆ, ರಕ್ಷಣೆಗೆ ಸದಾ ಬದ್ಧರಾಗಿರಿ | ಜಿ.ಎಸ್. ಶಿವಕುಮಾರ್ ಕರೆ

August 15, 2025

ಶರಾವತಿ ಮುಳುಗಡೆ ಸಂತ್ರಸ್ಥರ ಒಕ್ಕಲೆಬ್ಬಿಸದಂತೆ ಕಟ್ಟುನಿಟ್ಟಿನ ಆದೇಶ: ಸಚಿವ ಮಧು ಬಂಗಾರಪ್ಪ

August 15, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಏಳು ತಿಂಗಳಲ್ಲಿ ರೈಲ್ವೆ ಮೈಸೂರು ವಿಭಾಗದಲ್ಲಿ ಅಪರಿಮಿತ ಸಾಧನೆ : ಡಿಆರ್’ಎಂ ಮುದಿತ್ ಮಿತ್ತಲ್

August 15, 2025

ಶಿವಮೊಗ್ಗ | ಪ್ರತಿ ಸ್ವಾತಂತ್ರೋತ್ಸವವು ಕೂಡ ಸಂಕಲ್ಪದ ಹೆಜ್ಜೆಗಳಾಗಲಿ : ಡಾ. ಸಂಧ್ಯಾ ಕಾವೇರಿ

August 15, 2025

ಶಿಕಾರಿಪುರ | ದೇಶದ ಐಕ್ಯತೆ, ರಕ್ಷಣೆಗೆ ಸದಾ ಬದ್ಧರಾಗಿರಿ | ಜಿ.ಎಸ್. ಶಿವಕುಮಾರ್ ಕರೆ

August 15, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!