No Result
View All Result
HOSMAT Hospitals Partners with South United Football Club as Official Sports Medicine & Medical Services Leader
English Articles

HOSMAT Hospitals Partners with South United Football Club as Official Sports Medicine & Medical Services Leader

by ಕಲ್ಪ ನ್ಯೂಸ್
February 15, 2026
0

Kalpa Media House  |  Bengaluru  | HOSMAT Hospitals, a recognised leader in orthopaedics, trauma and sports medicine for over three...

Read moreDetails
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
  • Advertise With Us
  • Grievances
  • About Us
  • Contact Us
Monday, February 16, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಜಕೀಯ

ಆಪರೇಷನ್ ಕಮಲದ ದುಡ್ಡು ಯಾವುದು | ನಾ ಖಾವೂಂಗಾ-ನಾ ಖಾನೆದೂಂಗಾ ಬರೀ ಡೈಲಾಗಾ?

ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಮುಖೇಡ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಸಿಎಂ ಸಿದ್ಧರಾಮಯ್ಯ ಮತಯಾಚನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 16, 2024
in ರಾಜಕೀಯ
0
ಆಪರೇಷನ್ ಕಮಲದ ದುಡ್ಡು ಯಾವುದು | ನಾ ಖಾವೂಂಗಾ-ನಾ ಖಾನೆದೂಂಗಾ ಬರೀ ಡೈಲಾಗಾ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮಹಾರಾಷ್ಟ್ರ  |

ನರೇಂದ್ರ ಮೋದಿಯವರು #Narendra Modi ಭ್ರಷ್ಟಾಚಾರದ ವಿರುದ್ಧ ಮಾತನಾಡುತ್ತಾ ನಾ ಖಾವೋಂಗಾ, ನಾ ಖಾನೆದೂಂಗಾ ಎನ್ನುತ್ತಾರೆ . ಹಾಗಾದರೆ ಆಪರೇಶನ್ ಕಮಲ ಮಾಡಲು ಹಣ ಎಲ್ಲಿಂದ ಬಂತು ಎಂದು ಸಿಎಂ ಸಿದ್ದರಾಮಯ್ಯ #CM Siddaramaiah ಪ್ರಶ್ನೆ ಮಾಡಿದರು.

ಅವರು ಇಂದು ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಮುಖೇಡ್ ನಲ್ಲಿ ಇಂದು ಆಯೋಜಿಸಿದ್ದ ಪ್ರಚಾರ ಸಭೆಯಲ್ಲಿ ಲೋಕಸಭೆ ಉಪ ಚುನಾವಣಾ ಅಭ್ಯರ್ಥಿ ರವೀಂದ್ರ ಚೌಹಾನ್, ವಿಧಾನಸಭೆ ಚುನಾವಣಾ ಅಭ್ಯರ್ಥಿ ಹನುಮಂತರಾವ್ ಪಾಟೀಲ್ ಅವರ ಪರ ಮತ ಯಾಚಿಸಿದರು.

2008 ರಲ್ಲಿ ಎಂಟು ಶಾಸಕರನ್ನು ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಕೊಂಡುಕೊಂಡರು. 2019 ರಲ್ಲಿ 17 ಜನ ಶಾಸಕರನ್ನು ಕೊಂಡರು. ಈ ಕೋಟ್ಯಾಂತರ ರೂಪಾಯಿ ಬಿಜೆಪಿಗೆ ಎಲ್ಲಿಂದ ಬಂತು ಎಂದು ಪ್ರಶ್ನಿಸಿದರು.
ಆಪರೇಷನ್ ಕಮಲ ಮೂಲಕ ಬಿಜೆಪಿ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿರುವ ನಿದರ್ಶನಗಳಿವೆ. ಮಹಾರಾಷ್ಟ್ರದಲ್ಲಿ ಹಿಂದೆ ಉದ್ಧವ್ ಠಾಕ್ರೆ ಮುಖ್ಯಮಂತ್ರಿಯಾಗಿದ್ದರು. ಕಾಂಗ್ರೆಸ್, ಎನ್.ಸಿ.ಪಿ, ಶಿವಸೇನೆ ಸೇರಿ ಸರ್ಕಾರ ರಚನೆ ಮಾಡಿದ್ದರು. ಎಲ್ಲಾ ಕಡೆ ಆಪರೇಶನ್ ಕಮಲ ಮಾಡಿ ಹಿಂಬಾಗಿಲಿನಿಂದ ಅಧಿಕಾರ ಹಿಡಿಯುವ ಪ್ರಯತ್ನ ಮಾಡುತ್ತಿದೆ. ಏಕನಾಥ ಶಿಂಧೆಯವರು ಶಿವಸೇನೆಯಲ್ಲಿ ಇದ್ದವರು. ಶಿವಸೇನೆಯನ್ನು ಒಡೆದು ಮತ್ತೊಂದು ಗುಂಪು ಮಾಡಿ ಅದಕ್ಕೆ ಬೆಂಬಲ ಕೊಟ್ಟು ಫಡ್ನವಿಸ್ ಅವರು ಉಪಮುಖ್ಯಮಂತ್ರಿಯಾಗಿದ್ದಾರೆ. ಅನೇಕ ಕಡೆಗಳಲ್ಲಿ ಬಿಜೆಪಿ ಅಧಿಕಾರಕ್ಕಾಗಿ ಆಪರೇಷನ್ ಕಮಲ ಮಾಡಿ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿರುವ ನಿದರ್ಶನಗಳಿವೆ ಎಂದರು.

ಕರ್ನಾಟಕದಲ್ಲಿಯೂ ಎರಡು ಬಾರಿ ಬಿಜೆಪಿ ಅಧಿಕಾರ ಮಾಡಿದೆ. ಒಮ್ಮೆಯೂ ಜನರ ಆಶೀರ್ವಾದವನ್ನು ಪಡೆದು ಅಧಿಕಾರಕ್ಕೆ ಬರಲಿಲ್ಲ. 2008 ನಲ್ಲಿ ಕರ್ನಾಟಕದಲ್ಲಿ ಬಿ.ಎಸ್. ಯಡಿಯೂರಪ್ಪ ಆಪರೇಶನ್ ಕಮಲ ಮಾಡಿ ಮುಖ್ಯಮಂತ್ರಿಯಾದರು. 2019 ಪುನ: ಯಡಿಯೂರಪ್ಪ ಮುಖ್ಯಮಂತ್ರಿಯಾದರು. 2018 ರಲ್ಲಿ ಅವರು ಸರ್ಕಾರ ರಚನೆಗೆ ಬೇಕಿದ್ದ ಸರಳ ಬಹುಮತ 113 ಸ್ಥಾನಗಳು. ಎರಡೂ ಬಾರಿಯೂ ಅವರು ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದರು ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ನರೇಂದ್ರ ಮೋದಿಯವರಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಯಾವುದೇ ನೈತಿಕ ಹಕ್ಕಿಲ್ಲ

ನರೇಂದ್ರ ಮೋದಿಯವರು ಗ್ಯಾರಂಟಿ ಯೋಜನೆಗಳ ಬಗ್ಗೆ ಲೇವಡಿ ಮಾಡಿ ಮಾತನಾಡುತ್ತಾರೆ. ಗ್ಯಾರಂಟಿ ಯೋಜನೆಗಳನ್ನು ಕರ್ನಾಟಕದಲ್ಲಿ ಘೋಷಣೆ ಮಾಡಿದಾಗ 5 ಗ್ಯಾರಂಟಿಗಳನ್ನೂ ಜಾರಿ ಮಾಡಲಾಗುವುದಿಲ್ಲ. ದೇಶದ ಅಭಿವೃದ್ದಿ ಕುಂಠಿತವಾಗುತ್ತದೆ. ಒಂದು ವೇಳೆ ಜಾರಿಯಾದರೆ ರಾಜ್ಯ ದಿವಾಳಿಯಾಗುತ್ತದೆ ಎಂದಿದ್ದರು.

ನರೇಂದ್ರ ಮೋದಿ ದೇಶದ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಆದರೆ ಇದೇ ಬಿಜೆಪಿ ಗ್ಯಾರಂಟಿ ಯೋಜನೆಗಳನ್ನು ರಾಜಸ್ಥಾನ,ಮಧ್ಯಪ್ರದೇಶ, ಜಾರ್ಖಂಡ್, ಹರಿಯಾಣದಲ್ಲಿ ಘೋಷಣೆ ಮಾಡಿದರು. ಅವರು ಹೇಳುವುದು ಒಂದು ಮಾಡುವುದು ಇನ್ನೊಂದು. ಸುಳ್ಳು ಹೇಳುವುದರಲ್ಲಿ ಬಿಜೆಪಿಯವರು ನಿಸ್ಸೀಮರು ಎಂದರು. ಮೋದಿಯವರು ಈ ರಾಜ್ಯಗಳಿಗೆ ತೆರಳಿ ಗ್ಯಾರಂಟಿಗಳ ಪರವಾಗಿ ಮಾತನಾಡಿದರು. ಇದರಿಂದ ಜನರ ಆರ್ಥಿಕ ಸಾಮಾಜಿಕ ಅಭಿವೃದ್ಧಿ ಸಾಧ್ಯ ಎನ್ನುತ್ತಾರೆ. ಇಂಥ ಗೊಂದಲದ ಹೇಳಿಕೆ ಕೊಡುವ ಮೂಲಕ ಈ ದೇಶದ ಜನರ ದಾರಿತಪ್ಪಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಗ್ಯಾರಂಟಿ ಜಾರಿಯಾದ ರಾಜ್ಯಗಳಲ್ಲಿ ಆರ್ಥಿಕವಾಗಿ ದಿವಾಳಿಯಾಗಿಲ್ಲ

Also read: ಸಂಘಟನೆಯಾಗಿ ಕೆಲಸ ಮಾಡಿ ಸಮ್ಮೇಳನ ಯಶಸ್ವಿಗೊಳಿಸಿ: ಅಧ್ಯಕ್ಷ ದಿನೇಶ್ ಗೂಳಿಗೌಡ ಕರೆ

ಕರ್ನಾಟಕದಲ್ಲಿ ನಾವು 136 ಸ್ಥಾನಗಳನ್ನು ಪಡೆದು ಅಧಿಕಾರಕ್ಕೆ ಬಂದೆವು. 2023 ಮೇ 20 ರಂದು ಅಧಿಕಾರಕ್ಕೆ ಬಂದೆವು. ಆರು ತಿಂಗಳಲ್ಲಿ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡಿದೆವು. ತೆಲಂಗಾಣ ರಾಜ್ಯದಲ್ಲಿ ಚುನಾವಣಾ ಪೂರ್ವದಲ್ಲಿ ಗ್ಯಾರಂಟಿಗಳನ್ನು ಘೋಷಣೆ ಮಾಡಿ ಜಾರಿ ಮಾಡಿದರು. ಹಿಮಾಚಲ ಪ್ರದೇಶದಲ್ಲಿಯಾಗಲಿ, ತೆಲಂಗಾಣದಲ್ಲಿ, ಕರ್ನಾಟಕದಲ್ಲಿ ಆರ್ಥಿಕವಾಗಿ ದಿವಾಳಿಯಾಗಿಲ್ಲ. ಕರ್ನಾಟಕ ರಾಜ್ಯದಲ್ಲಿ ಆರ್ಥಿಕ ದಿವಾಳಿಯಾಗಿಲ್ಲ. 56000 ಕೋಟಿ ರೂಪಾಯಿ ಗಳನ್ನು ವೆಚ್ಚ ಮಾಡುತ್ತಿದ್ದು , 3 ಲಕ್ಷದ 71 ಸಾವಿರ ಕೋಟಿ ರೂಪಾಯಿಗಳಲ್ಲಿ 1.20 ಲಕ್ಷ ಕೋಟಿ ರೂಪಾಯಿ ಗಳನ್ನು ಅಭಿವೃದ್ಧಿಗಾಗಿ ಮೀಸಲಿಡಲಾಗಿದೆ.ಯಾವ ರಾಜ್ಯದಲ್ಲಿಯೂ ಅಭಿವೃದ್ಧಿ ಕೆಲಸಗಳು ನಿಂತಿಲ್ಲ ಎಂದರು.

ಮಹಾ ವಿಕಾಸ ಆಘಾಡಿ ಅಧಿಕಾರಕ್ಕೆ ಬರುವ ಬಗ್ಗೆ ಸಂಪೂರ್ಣ ವಿಶ್ವಾಸ

ವಿಧಾನಸಭಾ ಚುನಾವಣೆಯಲ್ಲಿ ಮಹಾವಿಕಾಸ ಆಘಾಡಿ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದೆ. ನಮ್ಮ ನಾಯಕರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಉದ್ಧವ್ ಠಾಕ್ರೆ, ಶರದ್ ಪವಾರ್ ಈ ಘೋಷಣೆ ಮಾಡಿದ್ದಾರೆ. ಈ ಮೂರು ಪಕ್ಷಗಳು ಮಹಾ ವಿಕಾಸ ಆಘಾಡಿ ಅಧಿಕಾರಕ್ಕೆ ಬರುವ ಬಗ್ಗೆ ಸಂಪೂರ್ಣ ವಿಶ್ವಾಸವಿದೆ. ಹನುಮಂತ ರಾವ್ ಪಾಟೀಲ್ , ರವೀಂದ್ರ ಚೌಹಾನ್ ಲೋಕಸಭೆಗೆ ಗೆಡ್ಡೆ ಗೆಲ್ಲುತ್ತಾರೆ. ಮಹಾ ವಿಕಾಸ್ ಆಘಾಡಿ ಅಧಿಕಾರಕ್ಕೆ ಬಂದಾಗ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡಲಾಗುವುದು. ಕೇಂದ್ರ ಸರ್ಕಾರಕ್ಕೆ ತೆರಿಗೆ ಕೊಡುವುದರಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದೆ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಕೇಂದ್ರಕ್ಕೆ 8 ಲಕ್ಷದ 88 ಸಾವಿರ ಕೋಟಿ ನೀಡುತ್ತದೆ. ಇಷ್ಟು ಕೊಟ್ಟರೂ1.30 ಸಾವಿರ ಕೋಟಿ ಮಾತ್ರ ವಾಪಸ್ ಬರುತ್ತದೆ. ನಿಮ್ಮ ತೆರಿಗೆಯಲ್ಲಿ 15 ಪೈಸೆ ಮಾತ್ರ ವಾಪಸ್ಸು ಕೊಡುತ್ತಾರೆ. ಕರ್ನಾಟಕದಿಂದ 4.50 ಲಕ್ಷ ತೆರಿಗೆ ಕೊಟ್ಟರೆ 60,000 ಕೋಟಿ ಮಾತ್ರ ವಾಪಸ್ಸು ಬರುತ್ತದೆ. ಕರ್ನಾಟಕದಲ್ಲಿ ಒಂದು ರೂಪಾಯಿಗೆ 13-14 ರೂಪಾಯಿ ಮಾತ್ರ ವಾಪಸ್ ಬರುತ್ತದೆ.ಇದನ್ನು ವಿರೋಧ ಮಾಡಬೇಕೋ ಬೇಡವೋ ಎಂದು ಪ್ರಶ್ನಿಸಿದರು.

ಗ್ಯಾರಂಟಿಗಳಿಗೆ ಹಣ ಸಿಗಬಾರದು ಎಂದು ತೆರಿಗೆಯಲ್ಲಿ ಅನ್ಯಾಯ

ನಮಗೆ ನ್ಯಾಯಯುತವಾಗಿ ಬರಬೇಕಾದ ತೆರಿಗೆಯಲ್ಲಿ ಮೋಸ ಮಾಡುತ್ತಿರುವುದು ಗ್ಯಾರಂಟಿಗಳಿಗೆ ಹಣ ಸಿಗಬಾರದು ಎಂದು. ಕರ್ನಾಟಕ, ತೆಲಂಗಾಣ, ಕೇರಳ, ತಮಿಳುನಾಡು, ಆಂಧ್ರ ಪ್ರದೇಶ ರಾಜ್ಯಗಳು ಕೇಂದ್ರದ ಈ ನಿಲುವನ್ನು ವಿರೋಧಿಸಬೇಕೆಂದು ಕರೆ ನೀಡಿದರು. ನಿಮಗೆ ಇದನ್ನು ವಿರೋಧಿಸಬೇಕೆಂದರೆ ಬಿಜೆಪಿ ಸೋಲಿಸಿ, ಮಹಾ ವಿಕಾಸ ಅಘಾಡಿಯನ್ನು ಗೆಲ್ಲಿಸಬೇಕೆಂದರು.

ಬಿಜೆಪಿಗೆ ಸುಳ್ಳೇ ಮನೆದೇವರು

ಗೃಹ ಲಕ್ಷ್ಮೀ ಯೋಜನೆಗೆ ಹಣವಿಲ್ಲ ಎಂದು ಜಾಹೀರಾತು ನೀಡಿದ್ದರು. ಬಿಜೆಪಿಗೆ ಸುಳ್ಳೇ ಮನೆದೇವರು. ನಾವು ಯಾವ ರಾಜ್ಯಗಳಲ್ಲಿಯೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಿಲ್ಲ ಎಂದರು.

ಸಚಿವರಾದ ಕರ್ನಾಟಕದ ಎಂ.ಬಿ.ಪಾಟೀಲ್, ತೆಲಂಗಾಣದ ಉತ್ತಮ್ ಕುಮಾರ್ ರೆಡ್ಡಿ ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

               

Tags: CM SiddaramaiahKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMaharashtranarendra modiNews_in_KannadaNews_Kannadaನರೇಂದ್ರ ಮೋದಿಮಹಾರಾಷ್ಟ್ರಸಿಎಂ ಸಿದ್ದರಾಮಯ್ಯ
Share196Tweet123Send
Previous Post

ಸಂಘಟನೆಯಾಗಿ ಕೆಲಸ ಮಾಡಿ ಸಮ್ಮೇಳನ ಯಶಸ್ವಿಗೊಳಿಸಿ: ಅಧ್ಯಕ್ಷ ದಿನೇಶ್ ಗೂಳಿಗೌಡ ಕರೆ

Next Post

ಆಸ್ಟ್ರೇಲಿಯಾ ನಿಯೋಗದಿಂದ ಉನ್ನತ ಶಿಕ್ಷಣ ಸಚಿವರು, ರಾಜ್ಯ ಮುಖ್ಯ ಕಾರ್ಯದರ್ಶಿ ಭೇಟಿ | ವಿಸ್ತೃತ ಚರ್ಚೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಆಸ್ಟ್ರೇಲಿಯಾ ನಿಯೋಗದಿಂದ ಉನ್ನತ ಶಿಕ್ಷಣ ಸಚಿವರು, ರಾಜ್ಯ ಮುಖ್ಯ ಕಾರ್ಯದರ್ಶಿ ಭೇಟಿ | ವಿಸ್ತೃತ ಚರ್ಚೆ

ಆಸ್ಟ್ರೇಲಿಯಾ ನಿಯೋಗದಿಂದ ಉನ್ನತ ಶಿಕ್ಷಣ ಸಚಿವರು, ರಾಜ್ಯ ಮುಖ್ಯ ಕಾರ್ಯದರ್ಶಿ ಭೇಟಿ | ವಿಸ್ತೃತ ಚರ್ಚೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಹಂಪಿ | ವಿದೇಶ ಮಹಿಳೆ ಅತ್ಯಾಚಾರ, ಪ್ರವಾಸಿಗನ ಹತ್ಯೆ | ಆರೋಪಿಗಳಿಗೆ ಗಲ್ಲು ಶಿಕ್ಷೆ

ಹಂಪಿ | ವಿದೇಶ ಮಹಿಳೆ ಅತ್ಯಾಚಾರ, ಪ್ರವಾಸಿಗನ ಹತ್ಯೆ | ಆರೋಪಿಗಳಿಗೆ ಗಲ್ಲು ಶಿಕ್ಷೆ

February 16, 2026
ಬಸ್ಸಿನಲ್ಲಿ ಲೈಂಗಿಕ ಕಿರುಕುಳ ಆರೋಪ | ಮಹಿಳೆ ವೀಡಿಯೋ ವೈರಲ್ | ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಟಿವಿ ನೋಡುತ್ತಾ ಊಟ ಮಾಡಬೇಡ ಎಂದು ತಾಯಿ ಬೈದಿದ್ದಕ್ಕೆ ಬಾಲಕಿ ಆತ್ಮಹತ್ಯೆ

February 16, 2026
ಮೈಸೂರು | ಮೂಕಾಂಬಿಕಾ ಬಡಾವಣೆಯಲ್ಲಿ ಸಾಮೂಹಿಕ ಶಿವರಾತ್ರಿ ಆಚರಣೆ

ಮೈಸೂರು | ಮೂಕಾಂಬಿಕಾ ಬಡಾವಣೆಯಲ್ಲಿ ಸಾಮೂಹಿಕ ಶಿವರಾತ್ರಿ ಆಚರಣೆ

February 16, 2026
ಶಿವಮೊಗ್ಗ | ಮೂರು ಅಪರಾಧ ಪ್ರಕರಣ ಸುದ್ದಿ ಒಂದೇ ಕ್ಲಿಕ್’ನಲ್ಲಿ

ಬೀರೂರು | ಗ್ರಾಹಕರ ಸೋಗಿನಲ್ಲಿ ಬಂದು ಮಾಂಗಲ್ಯ ಸರ ಕಳ್ಳತನ

February 16, 2026
ಕನ್ಸರ್‌ವೆನ್ಸಿ ಒತ್ತುವರಿ ತೆರವು ಕಾರ್ಯಾಚರಣೆ | ಪಾಲಿಕೆ ಅಧಿಕಾರಿಗಳ ಭೇಟಿ, ಪರಿಶೀಲನೆ

ಕನ್ಸರ್‌ವೆನ್ಸಿ ಒತ್ತುವರಿ ತೆರವು ಕಾರ್ಯಾಚರಣೆ | ಪಾಲಿಕೆ ಅಧಿಕಾರಿಗಳ ಭೇಟಿ, ಪರಿಶೀಲನೆ

February 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL