No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Saturday, July 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ನವರಾತ್ರಿ | ಭೂ ವೈಕುಂಠದಲ್ಲಿ 10 ದಿನ ಬ್ರಹ್ಮೋತ್ಸವ | ಜಗದೊಡೆಯನ ಯಾವ ವಾಹನಕ್ಕೆ ಏನು ಅರ್ಥ?

kalpa News by kalpa News
September 21, 2025
in Special Articles
0
ನವರಾತ್ರಿ | ಭೂ ವೈಕುಂಠದಲ್ಲಿ 10 ದಿನ ಬ್ರಹ್ಮೋತ್ಸವ | ಜಗದೊಡೆಯನ ಯಾವ ವಾಹನಕ್ಕೆ ಏನು ಅರ್ಥ?

Image Credit: Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  | ನವರಾತ್ರಿಯನ್ನು ಹಲವಾರು ವಿಧಗಳಲ್ಲಿ ಆಚರಿಸುತ್ತೇವೆ. ದಕ್ಷಿಣ ಭಾರತದಲ್ಲಿ ವಿಶೇಷವಾಗಿ ಭೂ ವೈಕುಂಠವಾದ ತಿರುಪತಿಯಲ್ಲಿ ನಡೆಯುವ ಬ್ರಹ್ಮೋತ್ಸವ ವಿಶೇಷ ಮಹತ್ವ ಪಡೆದಿರುತ್ತದೆ. 10 ದಿನಗಳ ವಿಶೇಷ ಉತ್ಸವ ಅದರಲ್ಲಿ ವಿವಿಧ ವಾಹನಗಳ ಉತ್ಸವ ಬ್ರಹ್ಮ ರಥೋತ್ಸವ, ಅವಭೃತ ಸ್ನಾನ ಮೊದಲಾದ ಪವಿತ್ರ ಪೂಜೆಗಳನ್ನು ಶ್ರೀ ವೆಂಕಟೇಶನಿಗೆ ಮಾಡಲಾಗುತ್ತದೆ. ಈ ಪವಿತ್ರ ಪರ್ವದಲ್ಲಿ ಲಕ್ಷಾಂತರ ಜನರು ಭಗವಂತನ ದರ್ಶನ ಪಡೆಯಲು ಕೃತಾರ್ಥರಾಗಲು ದೇಶ ವಿದೇಶಗಳಿಂದ ಬ್ರಹ್ಮೋತ್ಸವದಲ್ಲಿ ಭಾಗವಹಿಸಲು ಹೋಗುವವರು. ಅಲ್ಲಿ ಬರುವ ಜನರ ಸೇವೆಗೆ ಹೋಗುವವರು ಅನೇಕ ರೀತಿಯ ಭಕ್ತರನ್ನು, ಭಜನಾ ಮಂಡಳಿಯ ಭಕ್ತರು ಹೀಗೆ ವಿವಿಧ ಭಕ್ತರ ದೊಡ್ಡ ಸಮೂಹ ತಿರುಮಲ ತಿರುಪತಿಯಲ್ಲಿ ನೆಲೆಸಿರುತ್ತದೆ. ಪರಮಾತ್ಮನ ಅನೇಕ ಸದ್ಭಕ್ತರು ಅವನ ದರ್ಶನಕ್ಕೆ ಸೇರುವ ಈ ಜಾಗವು ಪುಣ್ಯ ಪ್ರದವಾದುದು ಹಾಗೂ ಅಲ್ಲಿಯ ಭಕ್ತರ ಇಷ್ಟಾರ್ಥ ಪೂರೈಸಲು ಸ್ವಾಮಿ ಬಂದೇ ಬರುವ ಎಂಬ ಹುಮ್ಮಸ್ಸಿನಿಂದ ಭಕ್ತರು ವಿಶೇಷವಾಗಿ ನವರಾತ್ರಿ ಪರ್ವದಲ್ಲಿ ತಿರುಮಲ ತಿರುಪತಿಗೆ ಹೋಗುತ್ತಾರೆ.

ಪ್ರಪಂಚದ ಒಡೆಯ ಶ್ರೀನಿವಾಸನಿಗೆ ನಾವು ವಿವಿಧ ಉತ್ಸವಗಳನ್ನು ನವರಾತ್ರಿಯಲ್ಲಿ ಮಾಡಿ ಸಂಭ್ರಮಿಸುತ್ತೇವೆ. ದೇವರ ಮದುವೆಯನ್ನು ಮಾಡಿ ನಮಗೆ ಕಲ್ಯಾಣ ಮಾಡೆಂದು ಪ್ರಾರ್ಥನೆಯನ್ನು ಮಾಡಿ ಬೇಡಿಕೊಳ್ಳುತ್ತೇವೆ. ಇಂತಹ ಸುಂದರವಾದ ಉತ್ಸವದಲ್ಲಿ ಪ್ರತಿ ದಿನ ಮುಂಜಾನೆ ಮತ್ತು ಸಂಜೆಯ ಹೊತ್ತಿನಲ್ಲಿ 7 ದಿನ ವಿವಿಧ ವಾಹನಗಳ ಉತ್ಸವವನ್ನು ನಡೆಸುತ್ತಾರೆ. ಎಂಟನೇ ದಿನ ಬ್ರಹ್ಮ ರಥೋತ್ಸವ ಮತ್ತು ದಶಮಿಯ ದಿನ ಪಲ್ಲಕ್ಕಿ ಉತ್ಸವ ಹಾಗೂ ಚಕ್ರ ಸ್ನಾನವನ್ನು ಮಾಡಿ ನವರಾತ್ರೋತ್ಸವ ಮಾಡುತ್ತಾರೆ.

ಪ್ರತಿಯೊಂದು ವಾಹನಕ್ಕೂ ಅದರದೇ ಆದ ಮಹತ್ವ ಇದೆ. ಶೇಷ ವಾಹನ, ಗರುಡ ವಾಹನ, ಸಿಂಹ ವಾಹನ, ಗಜ ವಾಹನ, ಅಶ್ವವಾಹನ, ಹಂಸ ವಾಹನ, ಮುತ್ತಿನ ಅಲಂಕಾರದ ವಾಹನ, ಕಲ್ಪವೃಕ್ಷ ವಾಹನ, ಸರ್ವ ಭೂಪಾಲ ವಾಹನ, ಮೋಹಿನ ಅವತಾರ, ಬಂಗಾರದ ರಥೋತ್ಸವ, ಹನುಮಂತ ವಾಹನ, ಪುಷ್ಪಕ ವಾಹನ, ಸೂರ್ಯಪ್ರಭಾ ವಾಹನ, ಚಂದ್ರಪ್ರಭಾ ವಾಹನ ಮಾಡುತ್ತಾರೆ.
ಎಲ್ಲ ವಾಹನಗಳದ್ದೂ ಅದರದೇ ಆದ ವಿಶೇಷತೆ ಇರುತ್ತದೆ. ಇಲ್ಲಿ ದೇವರಿಗೆ ಎಲ್ಲ ಜೀವವಿರುವ ಪ್ರಾಣಿ, ಪಕ್ಷಿ , ಮನುಷ್ಯರು ಮತ್ತು ದೇವತೆಗಳು ಎಲ್ಲರೂ ತಮ್ಮ ಸೇವೆ ಮಡುವುದನ್ನು ಗಮನಿಸಬಹುದು. ಮೊದಲಿಗೆ ಪ್ರಾಣಿ ಪಕ್ಷಿಗಳ ಬಗೆಗೆ ತಿಳಿಯೋಣ.

ಶೇಷ ವಾಹನ: ಶೇಷದೇವರು ಪರಮಾತ್ಮನ ಹಾಸಿಗೆ ಸದಾಕಾಲ ಅವನ ಸೇವೆಗೆ ನಿರಂತರವಾಗಿ ನಿಂತಿರುವವರು. ಅವರ ಪ್ರಾಣಿ ಜಾತಿಯ ಹಾವಿನ ಜಾತಿಗೆ ಸೇರಿದವರು ವಿಷವನ್ನು ಕಾರುವುದು ಅವರ ಸ್ವಭಾವ ಆದರೆ ಅವರ ಪ್ರಾಕೃತಿಕ ಸ್ವಭಾವವನ್ನು ಬಿಟ್ಟು ಭಗವಂತನ ಸೇವೆಗೆ ನಿಂತ ಮೇಲೆ ಪ್ರಪಂಚವನ್ನೇ ಹೊತ್ತಿರುವ ಭಗವಂತನ ಸೇವೆ ಮಾಡುತ್ತಾ ಇರುವುದು ನಾವು ನಮ್ಮಲ್ಲಿ ಎಂತದ್ದೇ ಗುಣ ಸ್ವಭಾವ ಹೊಂದಿದ್ದರೂ ಪರಮಾತ್ಮನ ಕೃಪೆಗೆ ಪಾತ್ರರಾದಾಗ ನಮ್ಮ ಕೆಟ್ಟಗುಣಗಳೂ ಕೂಡ ಒಳ್ಳೆಯದಾಗಿ ಪರಿವರ್ತಿತವಾಗುತ್ತದೆ ಎಂಬುದನ್ನು ತೋರಿಸುತ್ತದೆ.

ಗಜ ವಾಹನ: ಆನೆ ದೊಡ್ಡದಾದ ಪ್ರಾಣಿ, ತಾನಾಗಿ ಉತ್ಪಾತ ಮಾಡುವ ಸ್ವಭಾವದ್ದಲ್ಲ, ನಿಧಾನವಾಗಿ ನಡೆದರೂ ಅದಕ್ಕೆ ಬಹಳ ಮರ್ಯಾದೆ, ರಾಜರ ಆಸ್ಥಾನಗಳಲ್ಲಿ ಅದರ ಮೇಲೆ ಕುಳಿತು ಕೊಂಡು ಹೋಗುವುದೇ ಗೌರವ ಎಂದು ರಾಜರು ಅಂದು ಕೊಂಡರೆ ಪ್ರಪಂಚದ ರಾಜನಾದ ಭಗವಂತನು ಆ ಗಜನ ಮೇಲೆ ಕುಳಿತು ಆ ಗಜಕ್ಕೆ ಇನ್ನಷ್ಟು ಮಹತ್ವವನ್ನು ಕೊಡುತ್ತಾನೆ. ಭಗವಂತನಿಗೆ ತನ್ನ ಭಕ್ತರಲ್ಲಿಯ ಗಜದ ಹಿರಿಮೆ ಮತ್ತು ಗಾಂಭೀರ್ಯದ ನಡೆ ಪ್ರೀತಿ ಪಾತ್ರವಾಗಿದೆ. ಗಜ ಎಲ್ಲೇ ಹೋಗಲಿ ತನ್ನ ಪಾಡಿಗೆ ತನ್ನ ಹಿಂಡಿನ ಜೊತೆಗೆ ಸಂತಸದಿಂದ ಇರುತ್ತದೆ, ಯಾರಾದರೂ ಕೆಣಕಲು ಬಂದಾಗ ತಾನೂ ದಾಳಿ ಮಾಡಿ ರಕ್ಷಿಸಿ ಕೊಳ್ಳುತ್ತದೆ. ಹಾಗೇಯೇ ಭಗವಂತನ ಭಕ್ತರಿಗೆ ಕೂಡ ನಿಮ್ಮ ಪಾಡಿಗೆ ನೀವು ಇರಿ, ಉತ್ಪಾತ ಮಾಡಲು ಬಂದವರನ್ನು ಸುಮ್ಮನೆ ಬಿಡಬೇಡಿ ಎಂಬ ಸಂದೇಶವನ್ನು ಕೂಡ ಕೊಡುತ್ತದೆ.
ಸಿಂಹ ವಾಹನ: ಕಾಡಿನ ಪ್ರಾಣಿಗಳಿಗೆಲ್ಲ ಸಿಂಹವೇ ರಾಜ. ಸಿಂಹದ ವಿಶೇಷತೆ ಅದು ಬೇರೆಯವರ ಆಹಾರ ಬೇರೆ ಪ್ರಾಣಿಗಳು ಮಾಡಿದ ಬೇಟೆಯನ್ನು ಸ್ವೀಕರಿಸುವುದಿಲ್ಲ, ಭಕ್ತನಲ್ಲೂ ಕೂಡ ತನ್ನ ಕೆಲಸವನ್ನು ತಾನೇ ಮಾಡಿಕೊಳ್ಳುವ ಸ್ವಾಭಿಮಾನವು ಭಗವಂತನಿಗೆ ಬಹಳ ಹಿಡಿಸುತ್ತದೆ. ಭಕ್ತಿಯಲ್ಲಿ ಮತ್ತೊಬ್ಬರ ಕರ್ಮ ನಮಗೆ ಸದ್ಗತಿಯನ್ನು ಕೊಡದು. ತಾನು ಪಡೆಯಲು ಬಯಸುವುದನ್ನು ತಾನೇ ಶ್ರಮವಹಿಸಿ ಪಡೆಯಬೇಕೆಂಬ ಈ ಸಿಂಹವು ಭಕ್ತನಾಗಿ ಭಗವಂತನ ಸೇವೆ ಮಾಡಲು ಸದಾ ಸಿದ್ಧ ಎಂದು ತೋರಿಸುತ್ತದೆ. ಒಂದು ಸಮುದಾಯಕ್ಕೆ ರಾಜನಾದರೂ ಕೂಡ ಭಗವಂತನ ಎದುರು ಸೇವಕನೇ ಏಕೆಂದೆರೆ ಪರಮಾತ್ಮನೇ ಪ್ರಪಂಚದ ರಾಜ ಎಂಬುದಕ್ಕೆ ಎರಡು ಮಾತಿಲ್ಲ.

ಅಶ್ವ ವಾಹನ: ಕುದುರೆ ತನ್ನ ವೇಗಕ್ಕೆ ಪ್ರಸಿದ್ಧ ಬಹಳಷ್ಟು ದೇವತೆಗಳ ವಾಹನ ಅಶ್ವವಾಗಿದೆ. ಅಶ್ವವು ಅಷ್ಟು ವೇಗವಾಗಿ ಏಕೆ ಓಡುತ್ತದೆ ಎಂದರೆ ಅದಕ್ಕೆ ತನ್ನ ಅಕ್ಕಪಕ್ಕದ ಯಾವುದೇ ವಸ್ತುವಿನ ಕಡೆಗೆ ಲಕ್ಷ್ಯ ಹೋಗುವುದಿಲ್ಲ ತನ್ನ ಗುರಿಯತ್ತ ಮಾತ್ರ ಮನಸ್ಸು ಕೇಂದ್ರಿಕೃತವಾಗಿರುತ್ತದೆ. ಹಾಗೆಯೇ ಭಕ್ತನ ಮನಸ್ಸು ಭಗವಂತನ ಪಾದಚರಣಗಳಲ್ಲಿ ಸ್ಥಾನ ಪಡೆಯುವ ಒಂದೇ ಉದ್ಧೇಶವಿದ್ದಾಗ ಅವನ ಪಾದ ಸೇರುತ್ತೇವೆ ಎನ್ನುವ ವಿಚಾರವನ್ನು ಹೇಳುವ ಅಶ್ವವು ಕೂಡ ಪರಮಾತ್ಮನ ಸೇವೆ ತತ್ಪರವಾಗಿರುತ್ತದೆ.

ಹಂಸ ವಾಹನ: ಹಂಸವು ತನ್ನ ಹಂಸ ಕ್ಷೀರ ನ್ಯಾಯಕ್ಕೆ ಪ್ರಸಿದ್ಧ, ಹಾಲಿನಲ್ಲಿ ಮಿಶ್ರಿತವಾದ ನೀರನ್ನು ಬಿಟ್ಟು ಅದರಲ್ಲಿಯ ಹಾಲನ್ನು ಮಾತ್ರ ಸೇವಿಸುವ ಪಕ್ಷಿ ಹಂಸ, ನಮ್ಮ ಮನ ಹಂಸದ ಬಣ್ಣದಂತೆ ಶುದ್ಧವಾಗಿರಬೇಕು, ಮನದಲ್ಲಿ ಹಂಸದ ತೂಕದಷ್ಟೇ ಹಗುರವಾಗಿರಬೇಕು ಅಂದರೆ ಸಂಸಾರದ ಬಂಧನದ ಭಾರಗಳು ಆಧ್ಯಾತ್ಮದ ಜ್ಞಾನಕ್ಕೆ ಬಾಧಕವಾಗಬಾರದು. ಹೀಗೆ ಬೇರೆ ಪರಮಾತ್ಮನಂತೆ ವೇಷ ಹಾಕಿದವರನ್ನು ಹಿಂದೆ ಸರಿಸಿ ಪ್ರಪಂಚವನ್ನೇ ಉದ್ಧರಿಸುತ್ತಿರುವ ಪರಮಾತ್ಮನನ್ನು ಮಾತ್ರ ಆರಿಸಿಕೊಳ್ಳುವ ಹಂಸದಂತೆ ನಮ್ಮ ಭಕ್ತಿ ಇರಬೇಕು.
ಗರುಡ ವಾಹನ: ಗರುಡನು ಪರಮಾತ್ಮನ ವಾಹನ ದೇವರು ತಾನು ಎಲ್ಲಿಯೇ ಪ್ರಯಾಣ ಮಾಡಲಿ ಗರುಡದ ಮೇಲೆಯೇ ಹೋಗುತ್ತಾನೆ. ಗರುಡನ ದೃಷ್ಟಿ ತೀಕ್ಷ್ಣವಾಗಿರುತ್ತದೆ. ದೂರದಿಂದ ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸಿ, ಪರಮಾತ್ಮನ ಆಜ್ಞೆಯಂತೆ ಇರುವ ಗರುಡನ ಸ್ವಾಮಿನಿಷ್ಠೆ ಹಾಗೂ ದೂರ ದರ್ಶಕತ್ವ ಭಕ್ತರು ತಮ್ಮಲ್ಲಿ ಅಳವಡಿಸಿಕೊಳ್ಳಲಿ ಎಂಬುದು ಭಗಂತನ ಇಚ್ಛೆ. ಪ್ರತಿನಿತ್ಯ ವಿವಿಧ ವಾಹನಗಳ ಉತ್ಸವ ಮಾಡಿಕೊಂಡು ಎಲ್ಲರಿಗೂ ಪರಮಾತ್ಮ ವಿಶೇಷ ಆಶೀರ್ವಾದ ಮಾಡುತ್ತಾನೆ.

ಬ್ರಹ್ಮರಥೋತ್ಸವದಲ್ಲಿ ಬೃಹತ್‌ ಗಾತ್ರದ ಮರದ ರಥವನ್ನು ಎಳೆಯುತ್ತಾರೆ. ಸಾಮಾನ್ಯವಾಗಿ ರಥವನ್ನು ಎಳೆದು ಸೇವೆಯನ್ನು ಮಾಡುವುದರಿಂದಲೇ ನಮ್ಮ ಮನೋರಥಗಳು ಈಡೇರುತ್ತವೆ ಎಂಬ ನಂಬಿಕೆ ಇದೆ. ಅಂತಹ ಪ್ರಪಂಚದ ಕರ್ತೃವಾದ ಪರಮಾತ್ಮನ ಪ್ರೀತಿಗಾಗಿ ಮಾಡುವ ರಥೋತ್ಸವವು ಲೋಕ ಕಲ್ಯಾಣಕ್ಕಾಗಿಯೇ ಆಗಿರುತ್ತದೆ. ರಥೋತ್ಸವದ ಮುಂದೆ ಕೋಲಾಟ, ವಿವಿಧ ವೇಷಗಳಿಂದ ಸ್ವಾಮಿಯ ಸೇವೆಯನ್ನು, ಭಜನೆಗಳಿಂದ ಸೇವೆಯನ್ನು ಮಾಡುತ್ತಾ ಒಂದು ಪ್ರದಕ್ಷಿಣೆಯನ್ನು ಮಾಡುತ್ತಾರೆ.

ದಶಮಿಯ ದಿನ ಸ್ವಾಮಿ ಪುಷ್ಕರಣಿಯಲ್ಲಿ ವೆಂಕಟೇಶ ಶ್ರೀದೇವಿ ಭೂದೇವಿಯರಿಗೆ ಅವಭೃತ ಸ್ನಾನವನ್ನು ಮಾಡಿಸುತ್ತಾರೆ. ಉತ್ಸವ ಮೂರ್ತಿಗಳಿಗೆ ಅಭಿಷೇಕವನ್ನು ಶ್ರೀಚಕ್ರದ ಮೂಲಕ ಸ್ವಾಮಿ ಪುಷ್ಕರಣಿಯ ತೀರ್ಥದ ಮೂಲಕ ಮಾಡಿಸಿ ಅದರ ತೀರ್ಥವನ್ನು ಭಕ್ತರಿಗೆ ಪ್ರೋಕ್ಷಣೆ ಮಾಡುತ್ತಾರೆ. ಈ ಮೂಲಕ ಈ ಎಲ್ಲ ಆಚರಣೆಗಳಿಗೆ ತೆರೆ ಬೀಳುತ್ತದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: #NavaratriDasaraKannada News WebsiteLatest News KannadaSpecial ArticleTirupatiತಿರುಪತಿದಕ್ಷಿಣ ಭಾರತನವರಾತ್ರಿನವರಾತ್ರೋತ್ಸವಬ್ರಹ್ಮ ರಥೋತ್ಸವಬ್ರಹ್ಮೋತ್ಸವಭೂ ವೈಕುಂಠವಿಶೇಷ ಲೇಖನಶೇಷವಾಹನಶ್ರೀನಿವಾಸಸಿಂಹ ವಾಹನ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮೈಸೂರು | ಸೆ.22ರಿಂದ ಬನಶಂಕರಿ ಬೊಂಬೆ ಮನೆಯಲ್ಲಿ 600ಕ್ಕೂ ಹೆಚ್ಚು ಬೊಂಬೆಗಳ ಪ್ರದರ್ಶನ

Next Post

ಸೊರಬ | ನಿಮ್ಮ ಜೀವಕ್ಕೆ ನೀವೇ ಹೊಣೆ, ಪುರಸಭೆ ಅಲ್ಲ! ಹೀಗೆ ಬರೆದು ಪ್ರತಿಭಟನೆ ನಡೆಸಿದ್ದೇಕೆ?

kalpa News

kalpa News

Next Post
ಸೊರಬ | ನಿಮ್ಮ ಜೀವಕ್ಕೆ ನೀವೇ ಹೊಣೆ, ಪುರಸಭೆ ಅಲ್ಲ! ಹೀಗೆ ಬರೆದು ಪ್ರತಿಭಟನೆ ನಡೆಸಿದ್ದೇಕೆ?

ಸೊರಬ | ನಿಮ್ಮ ಜೀವಕ್ಕೆ ನೀವೇ ಹೊಣೆ, ಪುರಸಭೆ ಅಲ್ಲ! ಹೀಗೆ ಬರೆದು ಪ್ರತಿಭಟನೆ ನಡೆಸಿದ್ದೇಕೆ?

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL