No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Sunday, August 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಉತ್ತರಾಯಣಕ್ಕೂ, ದಕ್ಷಿಣಾಯಣಕ್ಕೂ ವೈಜ್ಞಾನಿಕ ವ್ಯತ್ಯಾಸವೇನು? ನೀವು ತಿಳಿಯಲೇಬೇಕಾದ ಮಾಹಿತಿ

ಮಕರ ಸಂಕ್ರಮಣದಲ್ಲಿ ಮಾಡಬೇಕಾದ್ದೇನು? ಶಾಸ್ತ್ರ ಏನು ಹೇಳುತ್ತದೆ?

kalpa News by kalpa News
January 13, 2025
in Special Articles
0
ಉತ್ತರಾಯಣಕ್ಕೂ, ದಕ್ಷಿಣಾಯಣಕ್ಕೂ ವೈಜ್ಞಾನಿಕ ವ್ಯತ್ಯಾಸವೇನು? ನೀವು ತಿಳಿಯಲೇಬೇಕಾದ ಮಾಹಿತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ: ಮಾಧುರಿ ದೇಶಪಾಂಡೆ  |

ಮನುಷ್ಯರ ದಿನಮಾನದಲ್ಲಿ ಒಂದು ವರ್ಷವು ದೇವತೆಗಳ ಒಂದು ದಿನವೆಂದು ಭಾವಿಸಲಾಗುತ್ತದೆ. ದಿನದ ಎರಡು ಭಾಗಗಳು ಇದ್ದಂತೆ ವರ್ಷದಲ್ಲಿ ಉತ್ತರಾಯಣ ಹಾಗೂ ದಕ್ಷಿಣಾಯಣ ಎಂಬ ಎರಡು ಭಾಗಗಳಿವೆ.

ಸಾಮಾನ್ಯವಾಗಿ ಜನವರಿ ತಿಂಗಳ 14-15ನೇ ತಾರೀಖಿನಿಂದ ಜುಲೈ ತಿಂಗಳ 16-17ರವರೆಗೆ ಉತ್ತರಾಯಣ #Uttarayana ಕಾಲವು ಹಾಗೂ ಜುಲೈನಿಂದ ಜನವರಿಯವರೆಗೂ ದಕ್ಷಿಣಾಯಣ #Dakshinayana ಎಂದು ಕರೆಯಲಾಗುತ್ತದೆ. ಉತ್ತರಾಯಣವನ್ನು ಪುಣ್ಯಕಾಲವೆಂದು ಭಾವಿಸಲಾಗುತ್ತದೆ. ಉತ್ತರಾಯಣದಲ್ಲಿ ಜನರು ಸೂರ್ಯನ ಸಂಪರ್ಕಕ್ಕೆ ಬರುತ್ತಾರೆ. ಭೂಮಿಯ ಮೇಲೆ ಬಿಸಿಲು ಕಾಲದ ಉತ್ತಮ ವಾತಾವರಣವಿದ್ದು ಈ ಪುಣ್ಯ ಸಮಯದಲ್ಲಿ ಹುಟ್ಟು ಸಾವುಗಳು ಮಹತ್ವವನ್ನು ಪಡೆಯುತ್ತವೆ.

Also Read>> ಗುಣಮಟ್ಟದ ಬಿತ್ತನೆ ಬೀಜ ಪರೀಕ್ಷೆ ಮಾಡುವುದು ಹೇಗೆ? ಡಾ. ಪ್ರಿಯಾ ವಿವರಿಸಿದ್ದಾರೆ ಓದಿ

ಉತ್ತರಾಯಣ ಪುಣ್ಯಕಾಲದಲ್ಲಿ ಸಾಯುವುದು ಕೂಡ ಶ್ರೇಷ್ಠ ಎಂದು ಪರಿಗಣಿಸಲಾಗುತ್ತದೆ. ಮಹಾಭಾರತದ ಕಾಲದಲ್ಲಿ ಭೀಷ್ಮರು ಶರಶಯ್ಯೆಯಲ್ಲಿ ಮಲಗಿದ್ದು ಉತ್ತರಾಯಣ ಕಾಲದಲ್ಲಿ ಪ್ರವೇಶಿದ ನಂತರ ತಮ್ಮ ಪ್ರಾಣತ್ಯಾಗ ಮಾಡುವ ಕತೆಯಂತೂ ಬಹಳಷ್ಟು ಪ್ರಚಲಿತವೇ ಆಗಿದೆ.

ಭೂಮಿಯು #Earth ಸೂರ್ಯನ ಸುತ್ತ ತಿರುಗುತ್ತದೆ. ಉತ್ತರಾಯಣದಲ್ಲಿ ಭೂಮಿಯ ಉತ್ತರ ಭಾಗವು ಸೂರ್ಯನ ಕಿರಣಗಳಿಗೆ ಹತ್ತಿರವಾಗಿದ್ದು ಉತ್ತಮ ಆರೋಗ್ಯ ಹಾಗೂ ಸಮೃದ್ಧಿ, ಬೆಳೆಗಳನ್ನು ಹೊಂದುವ ಸಮಯವಾಗಿದೆ. ಉತ್ತರಾಯಣವು ಮಾರ್ಗಶಿರ ಅಥವಾ ಪುಷ್ಯ ಮಾಸದ ಅಂದರೆ ಜನವರಿ ತಿಂಗಳ 14 ಅಥವಾ 15ನೇ ತಾರೀಖಿಗೆ ಬರುತ್ತದೆ. ಡಿಸೆಂಬರ್ 16-17ನೇ ತಾರೀಖಿಗೆ ಆರಂಭವಾಗುವ ಧನುರ್ಮಾಸವು #Dhanurmasa ಸಮಾಪ್ತಿಯಾಗುವುದು ಉತ್ತರಾಯಣ ಪರ್ವ ಕಾಲದಲ್ಲಿ.ಇನ್ನು, ಉತ್ತರಾಯಣ ಪರ್ವಕಾಲವು ಹಿಂದುಗಳಲ್ಲಿ ಬಹಳ ಮಹತ್ವವನ್ನು ಪಡೆದಿದೆ. ಸೂರ್ಯನನ್ನು ಸುತ್ತುತ್ತಿರುವ ಭೂಮಿಯು ಉತ್ತರ ದಿಕ್ಕಿನಲ್ಲಿ ಚಲಿಸುವಾಗ ಮಕರ ರಾಶಿಯಲ್ಲಿ ಸಂಕ್ರಮಣವು ಆಗುತ್ತದೆ. ಒಟ್ಟಾರೆ ತಿಂಗಳಿಗೊಮ್ಮೆ ಸಂಕ್ರಮಣವಿರುತ್ತದೆ. ಮಕರ ರಾಶಿಗೆ ಸಂಕ್ರಮಣವಿದ್ದ ಕಾಲಕ್ಕೆ ಉತ್ತರಾಯಣ ಎನ್ನಲಾಗುತ್ತದೆ. ಇದು ವೈಜ್ಞಾನಿಕವಾಗಿ ಹಾಗೂ ಧಾರ್ಮಿಕವಾಗಿ ಬಹಳ ಮಹತ್ವವನ್ನು ಪಡೆದಿದೆ. ಹಿಂದೂ ಪಂಚಾಂಗದಲ್ಲಿ ಹೇಗೆ ಯುಗಾದಿಗೆ ಗೋಚಾರ ಫಲಗಳಿವೆಯೋ ಅದೇ ರೀತಿ ಸಂಕ್ರಮಣದಲ್ಲೂ ಸಹ ಶುಭ ಅಶುಭಗಳ ಮಾಹಿತಿಯನ್ನು ಕೊಡುತ್ತಾರೆ. ಹೀಗಾಗಿ ಉತ್ತರಾಯಣ ಕಾಲವು ಬಹಳ ಮಹತ್ವಪೂರ್ಣ ಕಾಲವಾಗಿದೆ.

ಉತ್ತರಾಯಣ ಕಾಲದಲ್ಲಿ ಆಚರಿಸುವ ಹಬ್ಬ ಮತ್ತು ವಿಧಿ ವಿಧಾನಗಳು ಬಹಳ ಮಹತ್ವವನ್ನು ಪಡೆದಿವೆ. ಧನುರ್ಮಾಸದ ಕಡೆಯ ದಿನವನ್ನು ಭೋಗಿ ಹಬ್ಬವೆಂದು ಆಚರಿಸುತ್ತೇವೆ. ಬ್ರಾಹ್ಮಣರಿಗೆ #Brahmin ಭೋಜನಕ್ಕೆ ಕರೆದು, ಸುವಾಸಿನಿಯರಿಗೆ ಬಾಗಿಣ ಕೊಟ್ಟು ಮನೆಯಲ್ಲಿ ತಾಜಾ ಬೆಳೆದ ತರಕಾರಿ-ಧಾನ್ಯಗಳನ್ನು ಉಪಯೋಗಿಸಿ ರೊಟ್ಟಿ, ಪಲ್ಯ, ಹುಗ್ಗಿ, ಹೋಳಿಗೆ ಮೊದಲಾದ ಸಿಹಿ ಪದಾರ್ಥವನ್ನು ಉಣಬಡಿಸಿ ನಾವು ಕೂಡ ಪ್ರಸಾದ ಸೇವಿಸಬೇಕು. ಬೇರೆಲ್ಲ ಹಬ್ಬಗಳಲ್ಲಿ ಹಬ್ಬದ ದಿನವೇ ಅಭ್ಯಂಗ ಮಾಡಿದರೆ ಸಂಕ್ರಮಣ ಕಾಲದಲ್ಲಿ ಭೋಗಿ ಹಬ್ಬದ ದಿನವೇ ಅಭ್ಯಂಗ ಮಾಡಬೇಕು.

Also Read>> ಮಕರ ಸಂಕ್ರಾಂತಿ | ಎಳ್ಳು ಬೆಲ್ಲ ಸೇವನೆ | ಸನಾತನ ಧರ್ಮದ ವೈಜ್ಞಾನಿಕ ಕಾರಣ ಏನು? ತಿಳಿಯಲೇಬೇಕಾದ ಮಾಹಿತಿ

ಸೂರ್ಯನು #Sun ನಮ್ಮ ಭೂಮಿಗೆ ಅತಿ ಹತ್ತಿರದಲ್ಲಿ ಹಾದು ಹೋಗುವ ಸಮಯವನ್ನು ಪರ್ವಕಾಲ ಎನ್ನುತ್ತಾರೆ. ಆ ಸಮಯದಲ್ಲಿ ಸೂರ್ಯನಿಗೆ ಅರ್ಘ್ಯವನ್ನು ನೀಡುವುದು ವಾಡಿಕೆ. ಸೂರ್ಯದೇವನ ಪೂಜೆ ನಮ್ಮ ಸನಾತನ ಧರ್ಮದಲ್ಲಿ ಮೊದಲಿನಿಂದಲೂ ಬಂದಿದೆ. ಹೀಗಾಗಿ ಮಕರ ಸಂಕ್ರಮಣದ ದಿವಸ ಅಂದರೆ ಉತ್ತರಾಯಣ ಪರ್ವಕಾಲ ಸಂಭವಿಸುವ ಸಮಯದಲ್ಲಿ ಸೂರ್ಯ ದೇವನ ಆರಾಧನೆಗಾಗಿ ತಿಲ ತರ್ಪಣವನ್ನು ಕೊಡಲಾಗುತ್ತದೆ. ನದಿ ತೀರಕ್ಕೆ ಹೋಗಿ ಶ್ರಾದ್ಧ ಕಾರ್ಯಾದಿಗಳು ತರ್ಪಣ ಕೊಡುವುದು ಸಹ ವಾಡಿಕೆಯಾಗಿದೆ.

ಉತ್ತರಾಯಣ ಸಮಯದಲ್ಲಿ ಸ್ತ್ರೀ ಇರಲಿ ಪುರುಷರಿರಲಿ ಮೈಗೆ ಎಳ್ಳನ್ನು ಲೇಪಿಸಿಕೊಂಡು ಸ್ನಾನ ಮಾಡಬೇಕು. ಎಳ್ಳಿನಲ್ಲಿ ಎಣ್ಣೆಯ ಅಂಶ ಸಾಕಷ್ಟು ಪ್ರಮಾಣದಲ್ಲಿರುತ್ತದೆ. ಚಳಿಗಾಲದ ಕಾರಣ ನಮ್ಮ ಚರ್ಮವು ಒಣಗಿ ಶುಷ್ಕವಾಗಿರುತ್ತದೆ. ಆಶುಷ್ಕತೆಯನ್ನು ಹೋಗಲಾಡಿಸಿ ನಮ್ಮನ್ನು ಆರೋಗ್ಯವಂತರನ್ನಾಗಿ ಇಡಲು ಈ ಎಳ್ಳು ಲೇಪನದೊಂದಿಗೆ ಸ್ನಾನವನ್ನು ನಮ್ಮ ಪೂರ್ವಿಕರು ಅಭ್ಯಾಸ ಮಾಡಿಸಿರುತ್ತಾರೆ. ಸರ್ವ ರೋಗ ನಿವಾರಕ ಎಂದು ಜ್ಞಾನಿಗಳು ಹೇಳಿದ್ದಾರೆ.ಉತ್ತರಾಯಣ ಕಾಲದಲ್ಲಿ ಷಡ್ ತಿಲ ಕರ್ಮಾನುಷ್ಠಾನ ಮಾಡುತ್ತಾರೆ. ಮೊದಲಿಗೆ ಎಳ್ಳು ಲೇಪನದ ಸ್ನಾನ, ಎರಡನೆಯದು ಎಳ್ಳುದಾನ, ಮೂರನೆಯದು ಎಳ್ಳಿನ ಹೋಮ, ನಾಲ್ಕನೆಯದು ಎಳ್ಳಿನ ಭಕ್ಷಣ, ಎಳ್ಳಿನಿಂದ ತರ್ಪಣ ನೀಡುವುದು ಕೊನೆಯದಾಗಿ ಎಳ್ಳೆಣ್ಣೆಯ ದೀಪವನ್ನು ಹಚ್ಚುವುದು.

ಎಳ್ಳು ಸಾಕಷ್ಟು ಶಾಖವನ್ನು ಉತ್ಪತ್ತಿ ಮಾಡುವ ಪದಾರ್ಥವಾಗಿದ್ದು ವಿಪರಿತ ಚಳಿಯ ಸಮಯದ ತಾಪವನ್ನು ಶಮನ ಮಾಡಿಕೊಳ್ಳಲು ಎಳ್ಳಿನ ಬಳಕೆಯನ್ನು ಯಥೇಚ್ಛವಾಗಿ ಮಾಡಬೇಕು ಎಂದು ಹೇಳುತ್ತಾರೆ. ಎಳ್ಳಿನ ಲೇಪನದೊಂದಿಗೆ ಸ್ನಾನ ಮಾಡಿದ ಮೇಲೆ ಎಳ್ಳನ್ನು ದಾನ ಮಾಡಬೇಕು. ಇಲ್ಲಿ ಕೇವಲ ನಾವು ಮಾತ್ರ ಆರೋಗ್ಯವಂತರಾಗಿ ಇದ್ದರೆ ಸಾಲದು. ಇತರರಿಗೂ ದಾನವನ್ನು ಮಾಡಿದರೆ ನಾವು ಬೇರೆಯವರಲ್ಲಿ ಆರೋಗ್ಯಕರ ಅಭ್ಯಾಸ ಬೆಳೆಸಿದಂಥೆ ಎಂಬ ಕಾರಣಕ್ಕೆ ದಾನವನ್ನು ನೀಡಲಾಗುತ್ತದೆ.

ನಂತರ ಎಳ್ಳಿನಿಂದ ಹೋಮವನ್ನು ಮಾಡುತ್ತಾರೆ. ಹಬ್ಬ ಹರಿದಿನಗಳಲ್ಲಿ ನಮ್ಮ ಪೂರ್ವಿಕರು ಹೋಮ ಜಪ ತಪಾದಿಗಳನ್ನು ಮಾಡುತ್ತಿದ್ದರು. ಕಾರಣ ಇಷ್ಟೆ ಹೋಮದ ಹೊಗೆ ವಾತಾವರಣವನ್ನು ಶುದ್ಧಗೊಳಿಸಿ ನಮ್ಮ ಸುತ್ತಲೂ ಸಕಾರಾತ್ಮಕ ವಲಯವನ್ನು ಸೃಷ್ಟಿ ಮಾಡುತ್ತದೆ. ಎಳ್ಳಿನ ಹೋಮದಿಂದ ಆಹಾರದಲ್ಲಿ ಬಂದು ಆರೋಗ್ಯ ಕೆಡಿಸಬಹುದಾದ ಹುಳ ಹುಪ್ಪಡಿಗಳು ಸತ್ತು ಆರೋಗ್ಯಕರ ವಾತಾವರಣ ಸೃಷ್ಟಿಯಾಗುತ್ತದೆ.

ಇವೆಲ್ಲ ಬಾಹ್ಯದಲ್ಲಿ ಬೆಚ್ಚಗಿಡುವ ಪ್ರಯತ್ನವಾದರೆ ದೇಹವು ಒಳಗಿನಿಂದ ಬೆಚ್ಚಗಿರಲು ಎಳ್ಳಿನ ಪದಾರ್ಥವನ್ನು ಸೇವಿಸಬೇಕು. ಉತ್ತರಾಯಣಕಾಲದಲ್ಲಿ ಎಳ್ಳು ಹೋಳಿಗೆ, ಎಳ್ಳಿನ ಚಿತ್ರಾನ್ನ ಮೊದಲಾದ ಎಳ್ಳಿನಿಂದ ತಯಾರಿಸಿದ ಖಾದ್ಯಗಳನ್ನು ಅವಶ್ಯವಾಗಿ ಸೇವಿಸಲೇಬೇಕು. ಈ ರೀತಿಯಲ್ಲಿ ಎಲ್ಲರೂ ಸೇವಿಸಬೇಕೆಂಬ ಕಾರಣದಿಂದ ಸಂಕ್ರಮಣದ ದಿನ ಎಳ್ಳು ಬೆಲ್ಲ ಬೀರುವ ಸಮಯವಾಗಿದೆ.

ಧಾರ್ಮಿಕವಾಗಿ ಎಲ್ಲ ಯೋನಿಗಳಲ್ಲಿರುವ ಪಿತೃಗಳಿಗೆ ತರ್ಪಣವನ್ನು ನೀಡಿ ಎಳ್ಳಿನ ಬಳಕೆಯನ್ನು ಮಾಡುತ್ತೇವೆ. ಕೊನೆಯದಾಗಿ ಎಳ್ಳೆಣ್ಣೆ ದೀಪವನ್ನು ಹಚ್ಚುವುದು. ಸಾಮಾನ್ಯವಾಗಿ ತೈಲ ಎಂದರೆ ತಿಲದಿಂದ ಮಾಡಿದ ದ್ರವವೇ ತೈಲ. ದೇವರಿಗೆ ಎಣ್ಣೆ ಮತ್ತು ತುಪ್ಪ ಎರಡು ಪದಋಥಗಳಿಂದ ಹಚ್ಚುತ್ತೇವೆ. ಆದರೆ ಎಳ್ಳೆಣ್ಣೆ ದೀಪ ಹಚ್ಚುವುದು ಆರೋಗ್ಯಕರ ಹಾಗೂ ಪುಣ್ಯಕರ ಎಂದು ಶಾಸ್ತ್ರಗಳು ಹೇಳುತ್ತವೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.newsKalahamsa Infotech private limited

https://kalpa.news/wp-content/uploads/2024/04/VID-20240426-WA0008.mp4
Tags: ArticleFestivalKannada News WebsiteLatest News KannadaMadhuri DeshapandeMakara SankrantiSankrantiಉತ್ತರಾಯಣಉತ್ತರಾಯಣ ಕಾಲಜನವರಿದಕ್ಷಿಣಾಯಣಧನುರ್ಮಾಸಪುಷ್ಯ ಮಾಸಭೂಮಿಮಕರ ಸಂಕ್ರಾತಿಮಾಧುರಿ ದೇಶಪಾಂಡೆಸಂಕ್ರಾಂತಿಸೂರ್ಯಹೋಮ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮೈಸೂರು ಬ್ಯಾಂಕ್ ನಿವೃತ್ತ ನೌಕರರಿಗೆ ಜ.16ರಂದು ಆಯುಷ್ಮಾನ್ ಭಾರತ್ ಕಾರ್ಡ್ ವಿತರಣೆ

Next Post

ಲಕ್ಷ್ಮೀ ಹಬ್ಬಾಳ್ಕರ್ ಕಾರು ಅಪಘಾತ | ಸಚಿವರ ಆರೋಗ್ಯದ ಬಗ್ಗೆ ವೈದ್ಯರು ಹೇಳಿದ್ದೇನು?

kalpa News

kalpa News

Next Post
ಲಕ್ಷ್ಮೀ ಹಬ್ಬಾಳ್ಕರ್ ಕಾರು ಅಪಘಾತ | ಸಚಿವರ ಆರೋಗ್ಯದ ಬಗ್ಗೆ ವೈದ್ಯರು ಹೇಳಿದ್ದೇನು?

ಲಕ್ಷ್ಮೀ ಹಬ್ಬಾಳ್ಕರ್ ಕಾರು ಅಪಘಾತ | ಸಚಿವರ ಆರೋಗ್ಯದ ಬಗ್ಗೆ ವೈದ್ಯರು ಹೇಳಿದ್ದೇನು?

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL