No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Saturday, April 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಅಂಕಣ ಡಾ.ಗುರುರಾಜ ಪೋಶೆಟ್ಟಿಹಳ್ಳಿ

ಉಪನಯನ ಎಂದರೇನು? ಲೇಖನ ಸರಣಿ-2: ಕಾಲಾಕಾಲ ನಿರ್ಣಯ ಮತ್ತು ಸಾಧ್ಯಾಸಾಧ್ಯ ನಿರ್ಣಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 17, 2020
in ಡಾ.ಗುರುರಾಜ ಪೋಶೆಟ್ಟಿಹಳ್ಳಿ
0
ಉಪನಯನ ಎಂದರೇನು? ಲೇಖನ ಸರಣಿ-2: ಕಾಲಾಕಾಲ ನಿರ್ಣಯ ಮತ್ತು ಸಾಧ್ಯಾಸಾಧ್ಯ ನಿರ್ಣಯ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಉಪನಯನವು ಒಂದು ಅತಿ ಉಪಯುಕ್ತವಾದ ಅಗತ್ಯ ಸಂಸ್ಕಾರವಾಗಿದ್ದು ಸೂಕ್ತಕಾಲದಲ್ಲಿ ಸೂಕ್ತಸ್ಥಳದಲ್ಲಿ ಮಾಡಬೇಕು. ಮುಖ್ಯವಾಗಿ ಸೂಕ್ತಕಾಲ, ಸ್ಥಳಾಭಾವ, ಮನೆಯಲ್ಲಿ ಉಪನಯನ ಮಾಡುವ ಸಾಧ್ಯಾಸಾಧ್ಯಗಳ ಕುರಿತು ಋತ್ವಿಕ್‌ವಾಣಿ ವಿದ್ವತ್ ಸಭೆಯ ಚರ್ಚೆಯ ವರಧಿ ಇದಾಗಿರುತ್ತದೆ. ಆ ವಿಚಾರವಾಗಿ ಶೃತಿಸ್ಮೃತಿಗಳು ಏನು ಹೇಳುತ್ತವೆ, ಧರ್ಮಶಾಸ್ತ್ರಗಳು ಏನು ಹೇಳುತ್ತವೆ ಎಂಬ ವಿಚಾರವಾಗಿ ಲಭ್ಯ ಗ್ರಂಥಾಧಾರಗಳಿಂದ ಸ್ಪಷ್ಟೀಕರಣ ಕೊಡಲು ಇಚ್ಛಿಸುತ್ತೇವೆ. ಇದಕ್ಕೆ ಆಧರಿಸಲ್ಪಟ್ಟ ಗ್ರಂಥಗಳ ವಿವರ ಹೀಗಿರುತ್ತದೆ:

1.ಮನು 2. ವಿಷ್ಣುಧರ್ಮೋತ್ತರ 3. ಅಪರಾರ್ಕವೃತ್ತಶಾಕಾದಪ 4. ಪರಧತ್ತ 5.ಗೌತಮ 6.ಆಪಸ್ತಂಭ 7.ಆಶ್ವಲಾಯನ 8.ಗರ್ಗ 9.ವೃತ್ತಶತ ಕರ್ತುವಾದ ಆನಂದ ವಸಿಷ್ಟ 10. ಮದನ ರತ್ನ ಕರ್ತುವಾದ ನಾರದ 11. ಬೃಹಸ್ಪತಿ ಪ್ರೋಕ್ತ ಪಾರಿಜಾತ 12.ರಾಜಮಾರ್ತಾಂಡ 13. ವೃದ್ಧ ಗಾರ್ಗ್ಯ ಪ್ರೋಕ್ತ ಕಾಲಾದರ್ಶ 14.ಮೈತ್ರೇಯಿ ಸೂತ್ರ 15. ಸುದರ್ಶನ ಭಷ್ಯ 16. ಜ್ಯೋತಿ ರ್ನಿಬಂಧ 17. ಧನುರ್ವಿಧ್ಯಾ ದೀಪಿಕ

ಅಲ್ಲದೇ ಇನ್ನೂ ಹಲವಾರು ಪುರಾತನ ಪ್ರಕಟಣಾ ಗ್ರಂಥಗಳು ಹೇಳಿದ ಮುಖ್ಯ ಸಮಾನಭಿಪ್ರಾಯಿಕ ಅಥವಾ ಭಾವಾಭಿಪ್ರಾಯ ವಿಚಾರಗಳನ್ನು ಇಲ್ಲಿ ಮಂಡಿಸಲು ಇಚ್ಛಿಸುತ್ತೇವೆ. ಇದು ಚಾಲ್ತಿಯಲ್ಲಿರಬಹುದು ಅಥವಾ ಸುಪ್ತವಾಗಿರಬಹುದು. ಅವುಗಳಲ್ಲಿ ಮುಖ್ಯವಾದ ಗೌಣ ಸೂತ್ರವನ್ನು ಗಮನಿಸಬೇಕೇ ವಿನಃ ವಾಕ್ಯಾರ್ಥಗಳಲ್ಲ! ಹಾಗೆ ನೋಡಿದಾಗ ಉಪನಯನಕ್ಕೆ ಎಲ್ಲರ ಅಭಿಮತವೂ ಒಂದು ರೀತಿಯಲ್ಲಿ ಒಮ್ಮತವಿರುವುದು ಕಂಡುಬರುತ್ತದೆ. ಅದರಂತೆ ಗರ್ಭಾಷ್ಟಮ, ಅಷ್ಟಮ, ಪಂಚಮ, ಸಪ್ತಮ ಈ ಕಾಲಗಳು ತುಂಬ ಸೂಕ್ತ ಎಂದೇ ಅಭಿಪ್ರಾಯವಾಗುತ್ತದೆ.

ಗರ್ಭಾಷ್ಟಮೈಷ್ಟಮೇ ವಾಬ್ದೇ ಪಂಚಮೇ ಸಪ್ತಮೇ ಪಿವ
ದ್ವಿಜತ್ವಂ ಪ್ರಾಪ್ನುಯಾದ್ವಿಪ್ರೇ ವರ್ಷೇತ್ವೇಕಾದಶೇನೃಪಃ ॥
ಎಂಬಂತೆ ಗ್ರಂಥಾಂತರಗಳಲ್ಲಿ ಬೇರೆ ಬೇರೆ ರೀತಿಯ ಅಭಿಪ್ರಾಯಗಳು ಇರಬಹುದು. ಆದರೆ ಅವೆಲ್ಲವೂ ಪುರಾಕೃತವೆಂದೇ ಅಥವಾ ಶೃತ್ಯುಕ್ತ ವಚನವೆಂದೇ ಧೃಡೀಕರಿಸಲು ಸಾಧ್ಯವಿಲ್ಲ.

ಆದ್ದರಿಂದ ಹಲವಾರು ಗ್ರಂಥಗಳ ಸಾಭಿಪ್ರಾಯ ಅಥವಾ ಏಕಾಭಿಪ್ರಾಯ ಇರುವಂತಾದ್ದನ್ನೇ ಸೂಕ್ತ ಮತ್ತು ಅನುಕರಣೀಯವೆಂದು ಕಂಡುಬರುತ್ತದೆ. ಆತ್ರೇಯ ತತ್ವ ಎಂಬ ಬಹು ಪ್ರಾಚೀನವಾದ ಸೂತ್ರಗ್ರಂಥವೊಂದು ಸೂತ್ರಭೇದವಿಲ್ಲದೇನೆ ಎಲ್ಲರೂ ಸಮಾನವಾಗಿ ಸ್ವೀಕರಿಸಬೇಕಾದ ಕೆಲವು ಮಾನವೀಯ ನಿಬಂಧನೆಗಳು,

ಮನುಷ್ಯನ ಆಧ್ಯಾತ್ಮಿಕ, ದೈವೀಕ ಮತ್ತು ಭೌತಿಕ ಉನ್ನತಿಗಾಗಿ ಬರೆದಿಟ್ಟಿದ್ದು ಕಂಡುಬರುತ್ತದೆ. ಉಳಿದ ಸೂತ್ರಗಳೆಲ್ಲಾ ಅದರ ನಂತರದ್ದಾಗಿಯೂ ಒಂದು ರೀತಿಯಲ್ಲಿ ಆ ಗ್ರಂಥಕ್ಕೆ ಅವಿನಾಭಾವ ಸಂಬಂಧ ಹೊಂದಿರುವುದನ್ನು ಕಾಣಬಹುದು.

ಆದ್ದರಿಂದ ಸರ್ವಮಾನ್ಯವಾದ ಮಾನವೀಯ ಬದುಕಿನ ಮೂಲೋದ್ದೇಶವಾದ ವಿಧ್ಯಾರ್ಥಿ ಜೀವನಕ್ಕೆ ಕಾಲಿಡಲು 5ನೇ ವರ್ಷವೇ ಸೂಕ್ತವಾದರೂ 11 ವರ್ಷದವರೆಗೆ ಎಲ್ಲಾ ವರ್ಷಗಳು ಅತ್ಯುಪಯುಕ್ತವಾಗಿರುತ್ತದೆ. ಆ ಕಾಲದಲ್ಲಿ ಉಪನಯನ ಮಾಡುವ ಕರ್ತವ್ಯವನ್ನು ತಂದೆಯು ನಿರ್ವಹಿಸದೆ ಬೇಜವಾಬ್ದಾರಿಯಿಂದ ನಡೆದುಕೊಳ್ಳುವುದು ತಪ್ಪಾಗುತ್ತದೆ ಎಂದು ಸಭೆಯ ಮತ್ತು ಧರ್ಮಶಾಸ್ತ್ರಗಳ ಅಭಿಪ್ರಾಯವಾಗಿರುತ್ತದೆ.

ಇನ್ನು ಉಪನಯನ ಪ್ರಕ್ರಿಯೆ ವಿಚಾರದಲ್ಲಿ ಹೇಳುವುದಾದರೆ ಒಬ್ಬ ಮನುಷ್ಯನಿಗೆ ವಿದ್ಯಾರ್ಥಿಯಾಗಿ ಜ್ಞಾನವೃದ್ಧಿ ಮಾಡಿಕೊಳ್ಳಬೇಕೆಂಬ ವಿಶೇಷ ಆಕಾಂಕ್ಷೆಗಳನ್ನು ಹುಟ್ಟಿಸುವುದೇ ಈ ಉಪನಯನ ಕರ್ಮದ ಮೂಲೋದ್ದೇಶ ಆಗಿರುತ್ತದೆ.

ಪ್ರಪಂಚದಲ್ಲಿ ಮಖ್ಯವಾಗಿರುವ ಅಗ್ನಿವಿಧ್ಯೆ ಮತ್ತು ಮೃತ್ಯುವಿಧ್ಯೆ ಎಂಬ ಎರಡು ಪ್ರಾಕಾರಗಳಿರುವುದು ಸರ್ವವಿದಿತ. ಮೃತ್ಯುವಿಧ್ಯೆಯಲ್ಲಿ ಸೃಷ್ಟಿವಿಚಾರ, ರಕ್ಷಣಾತತ್ವ, ಅಭಿಚಾರಿಕಾದಿ ತತ್ವಗಳು, ಶಕ್ತಿ ಮತ್ತು ಶಕ್ತಿಯ ಬಳಕೆ, ಜನ್ಮಾಂತರ ವಿಚಾರಗಳು, ಆತ್ಮ-ಪರಮಾತ್ಮ ವಿಚಾರಗಳು ಹೇಗೆ ಅರಿಯಬಹುದೋ, ಅದರಂತೆಯೇ ಅಗ್ನಿವಿಧ್ಯೆಯೂ ಮಾನವನಿಗೆ ಜ್ಞಾನವನ್ನು, ಜೀವನಧರ್ಮವನ್ನು, ಶ್ರೌತಾದಿ ಚತುರ್ದಶ ತಾತ್ವಿಕ ವಿಜ್ಞಾನವನ್ನು ಅಲ್ಲದೆ ಚತುರ್ದಶ ವಿಧ್ಯೆಯನ್ನು, ಚತುಃಷಷ್ಠಿ ಕಲೆಯನ್ನು ಸಾಕ್ಷಾತ್ಕರಿಸಿಕೊಳ್ಳಲು ಸಾಧ್ಯವಾಗುವ ಒಂದು ಉತ್ತಮ ವಿಧ್ಯಾ ಪ್ರಾಕಾರವಾಗಿರುತ್ತದೆ.

ಆ ಅಗ್ನಿವಿಧ್ಯೆಯನ್ನು ವಿದ್ಯುಕ್ತವಾಗಿ ಸಂಸ್ಕಾರಪೂರ್ವಕವಾಗಿ ಕೊಡುವುದರ ಸಂಕೇತವಾಗಿ ಮೇಧಾನಾಮಕ ಅಧಿಷ್ಠಾನ ದೇವತೆಯ ಪೂಜೆಯೊಂದಿಗೆ ವಿದ್ಯಾರ್ಜನೆಯಲ್ಲಿ ಹೆಚ್ಚಿನ ಶ್ರದ್ಧೆ ಹುಟ್ಟಲಿ, ತಾನು ವಿದ್ಯಾರ್ಥಿಯಾಗಬೇಕೆಂಬ ಅತೀವ ಆಕಾಂಕ್ಷೆ ಹುಟ್ಟಲಿ, ಆ ಮಾರ್ಗದಲ್ಲಿಯೇ ತನ್ನ ಬುದ್ಧಿಗೆ ಪ್ರಚೋದನೆ ಸಿಗಲಿ. ಈ ನಿಟ್ಟಿನಲ್ಲಿಯೇ ಗಾಯತ್ರಿ ಮಂತ್ರದ ಉಪದೇಶವು ವಟುವಿಗೆ ಅಲ್ಲಿ ಸಿಗುತ್ತದೆ. ವಟುವಾಗಲು ಸ್ತ್ರೀ ಪುರುಷ, ಜಾತಿ-ಮತ-ಪಂಥ-ಸಿದ್ಧಾಂತ, ಭೇದವಿಲ್ಲ. ಉಪನಯನವು ಸರ್ವರಿಗೂ ಅವಶ್ಯಕವಾದ ಸಂಸ್ಕಾರವಾಗಿದೆ. ಗಾಯತ್ರಿಯ ಉಪದೇಶದಿಂದ ವಟುವಿಗೆ ವಿದ್ಯಾರ್ಥಿಯಾಗಬೇಕೆಂಬ ಅತೀವ ಆಕಾಂಕ್ಷೆಯೊಂದು ಹುಟ್ಟುತ್ತದೆಯೇ ವಿನಃ ಆತನು ವಿಧ್ಯಾವಂತನಾಗುತ್ತಾನೆ ಎಂದಲ್ಲ. ಸತತ ಪರಿಶ್ರಮದಿಂದ ಸಕಲ ಶಾಸ್ತ್ರಾಧ್ಯಯನ ಮಾಡಿದಾಗಲೂ ಪರಿಪೂರ್ಣನಾಗಲಾರ.

ದೇಶ ಸಂಚಾರ, ಕಲಿತ ವಿಧ್ಯೆಯ ಪ್ರಾಯೋಗಿಕ ಉಪಯೋಗ. ತತ್ಸಂಬಂಧವಾಗಿ ಜನತಾ ಜನಾರ್ಧನ ಸೇವೆ ಮಾಡಿಕೊಳ್ಳುವುದರ ಮುಖೇನ ಸತ್ಯ, ಜ್ಞಾನ, ಧರ್ಮ, ದಯಾ, ಶಾಂತಿ, ಕ್ಷಮೆಗಳಿಂದ ಷಡ್ಗುಣಗಳನ್ನು ಮೈಗೂಡಿಸಿಕೊಂಡಲ್ಲಿ ಅವನು ವಿದ್ಯಾವಂತನಾಗುತ್ತಾನೆ ಎಂದು ಶೃತಿ ಸ್ಮೃತಿಗಳೆಲ್ಲಾ ಸಾರಿ ಹೇಳುತ್ತದೆ. ವಿದ್ಯಾ ದಧಾತಿ ವಿನಯಂ ವಿನಯ ಸಹಿತವಾದ ಸದ್ಗುಣಗಳನ್ನು ಮೈಗೂಡಿಸಿಕೊಂಡು ಯಾರು ತಾನು ಕಲಿತ ವಿಧ್ಯೆಯಿಂದ ಪರೋಪಕಾರಿಯಾಗಿ ಜೀವಿಸುತ್ತಾನೋ ಅವನೇ ನಿಜವಾದ ವಿಧ್ಯಾವಂತ ಎಂದು ಘೋಷಿಸಬಹುದು.

ಆದ್ದರಿಂದ ತಂದೆಯಾದವನ ಮುಖ್ಯ ಕರ್ತವ್ಯವೆಂದರೆ ಯಾವುದೇ ಆಡಂಬರವಿಲ್ಲದೆ ಸೂಕ್ಷ್ಮವಾಗಿಯಾದರೂ ಶಾಸ್ತ್ರೀಯ ರೀತಿಯಲ್ಲಿ ತನ್ನ ಮಕ್ಕಳಿಗೆ ಅಗ್ನಿವಿದ್ಯಾ ಪ್ರಧಾನ ಮಾಡುವ ಉದ್ದೇಶದಿಂದ ಸಕಲ ಜ್ಞಾನಾಕಾಂಕ್ಷೆಯನ್ನು ಹುಟ್ಟಿಸತಕ್ಕ ಗಾಯತ್ರಿ ಉಪದೇಶವನ್ನು ಮಾಡಿ ಸತ್ಪ್ರಜೆಗಳಾಗಿ ರೂಪಿಸಿ ದೇಶಕ್ಕೆ ಸಮರ್ಪಿಸಿ ಕೃತಕೃತ್ಯರಾಗಿ ಎಂದು ಹಾರೈಸುತ್ತೇನೆ.

ಇಲ್ಲವಾದಲ್ಲಿ ಸೂಕ್ತ ವಿದ್ಯಾಭ್ಯಾಸವಿಲ್ಲದ ಒಬ್ಬ ಮನುಷ್ಯನು ಸಾಕ್ಷರಾ ವಿಪರೀತಾಶ್ಚೇತ್ ರಾಕ್ಷಸಾ ಎಂಬಂತೆ ಸರಿಯಾದ ಮಾರ್ಗದರ್ಶನವಿಲ್ಲದೆ, ಉಪಯುಕ್ತ ವಿಧ್ಯಾಭ್ಯಾಸವಿಲ್ಲದೆ, ಉತ್ತಮ ಸಂಸ್ಕಾರವಿಲ್ಲದೆ ದುಷ್ಟ ಸಹವಾಸವನ್ನು ಹೊಂದಿ ಮನುಷ್ಯನೊಬ್ಬನು ಬೆಳೆದಲ್ಲಿ ಹಿಂದೆ ಸೂಕ್ತಿಯಲ್ಲಿ ತಿಳಿಸಿದಂತೆ ಸಾಕ್ಷರಾ ಎಂಬ ಶಬ್ದವು ಹಿಂದುಮುಂದಾಗಿ ಓದಲ್ಪಟ್ಟು ರಾಕ್ಷಸಾ ಆಗಲು ಸಾಧ್ಯ! ಹಾಗಾಗದಂತೆ ನಿಮ್ಮದ್ದಾದಂತಹಾ ಕರ್ತವ್ಯವನ್ನು ಶ್ರದ್ಧೆಯಿಂದ ನಿರ್ವಹಿಸಿ ಲೋಕಕ್ಕೆ ಉತ್ತಮ ಪ್ರಜೆಯನ್ನು ಒದಗಿಸುವ ಕಂಕಣಬದ್ಧರಾಗಿ ಎಂದು ಇನ್ನೊಮ್ಮೆ ಹಾರೈಸುತ್ತಾ ಈ ಪುರಾಣ ಶಾಸ್ತ್ರ ಗ್ರಂಥಗಳು ವೇದ ಸ್ಮೃತಿಗಳು ಕುಲಾಚಾರಗಳು ನಿಮಗೆ ಆಯುರಾರೋಗ್ಯ ಮಂಗಳವನ್ನು ಉಂಟುಮಾಡಲಿ ಎಂದು ಆ ವೇದ ಪುರುಷನಲ್ಲಿ ಪ್ರಾರ್ಥಿಸುತ್ತೇನೆ.

ನಾಳೆ: ಉಪನಯನ ಎಂದರೇನು? ಲೇಖನ ಸರಣಿ-3: ಚಿತ್ರಾವತಿ ಹೇಗೆ? ಎಷ್ಟು ಬಲಿ ಹಾಕಬೇಕು?


Get in Touch With Us info@kalpa.news Whatsapp: 9481252093

Tags: Dr Gururaj PoshettihalliKannadaNewsWebsiteLatestNewsKannadaUpanayanaಉಪನಯನಡಾ.ಗುರುರಾಜ ಪೋಶೆಟ್ಟಿಹಳ್ಳಿ
Share254Tweet123Send
Previous Post

ಲಾಕ್ ಡೌನ್ ವಿಸ್ತರಣೆ: ನಾಳೆಯಿಂದ ಏನಿರತ್ತೆ? ಏನಿರಲ್ಲ?

Next Post

ಸಾಧಕರ ಸಾಧನೆಗೆ ಕಷ್ಟ ಬಂದಾಗ ನಂಬಿ ನಡೆವ ತಾಣ: ಅಬ್ಬೂರಿನ ಬ್ರಹ್ಮಣ್ಯತೀರ್ಥ ಸನ್ನಿಧಾನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಾಧಕರ ಸಾಧನೆಗೆ ಕಷ್ಟ ಬಂದಾಗ ನಂಬಿ ನಡೆವ ತಾಣ: ಅಬ್ಬೂರಿನ ಬ್ರಹ್ಮಣ್ಯತೀರ್ಥ ಸನ್ನಿಧಾನ

ಸಾಧಕರ ಸಾಧನೆಗೆ ಕಷ್ಟ ಬಂದಾಗ ನಂಬಿ ನಡೆವ ತಾಣ: ಅಬ್ಬೂರಿನ ಬ್ರಹ್ಮಣ್ಯತೀರ್ಥ ಸನ್ನಿಧಾನ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

April 11, 2026
ಸಿರಿಂಜ್ ಹಿಡಿಯುವ ಕೈ ಪೆನ್ನು ಹಿಡಿದಾಗ – ಆವೃತ್ತಿ ಎರಡು ಪುಸ್ತಕ ಬಿಡುಗಡೆ

ಸಿರಿಂಜ್ ಹಿಡಿಯುವ ಕೈ ಪೆನ್ನು ಹಿಡಿದಾಗ – ಆವೃತ್ತಿ ಎರಡು ಪುಸ್ತಕ ಬಿಡುಗಡೆ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL