No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Saturday, April 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ನಾದ ಕಲ್ಪ

ನಾಡಿನ ಹೆಮ್ಮೆಯ ಕಲಾವಿದೆ ಜ್ಯೋತ್ಸ್ನಾ ಮಂಜುನಾಥ್ ಕುರಿತಾಗಿ ನೀವು ತಿಳಿಯಲೇಬೇಕು

ಸಂಗೀತದಲ್ಲಿ ಶ್ರದ್ಧೆ ಇದ್ದರೆ ವೃತ್ತಿ-ಪ್ರವೃತ್ತಿ ಎರಡರಲ್ಲೂ ಸಿದ್ಧಿ ಎಂಬುದನ್ನು ಸಾಕ್ಷಿ ಈ ಸಾಧಕಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 29, 2024
in ನಾದ ಕಲ್ಪ
0
ನಾಡಿನ ಹೆಮ್ಮೆಯ ಕಲಾವಿದೆ ಜ್ಯೋತ್ಸ್ನಾ ಮಂಜುನಾಥ್ ಕುರಿತಾಗಿ ನೀವು ತಿಳಿಯಲೇಬೇಕು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನಾದ ಕಲ್ಪ ವಿಶೇಷ ಲೇಖನ  |

ಹೆಸರಾಂತ ವೈಲಿನ್ ವಾದಕರಾಗಿದ್ದ ದಿವಂಗತ ಟಿ. ಚೌಡಯ್ಯ #TChowdaiah ಅವರ ಆವಿಷ್ಕಾರ ವಿಶೇಷ ಏಳು ತಂತಿಯ ವಯೋಲಿನ್. ಈ ವಯೋಲಿನ್’ನಲ್ಲಿ ಮೊದಲ ಮೂರು ತಂತಿಗಳೂ ದ್ವಿಗುಣವಾಗಿ ಅಳವಡಿಸಲಾಗಿದ್ದು ನಾದವನ್ನು ಹೆಚ್ಚಿಸಬಲ್ಲದು.

ಪಾಶ್ಚಾತ್ಯ ಸಂಗೀತ ವಾದ್ಯಗಳ #MusicalInstrument ತಯಾರಕರಾಗಿದ್ದ ಮಾರ್ಕ್ ವುಡ್ ಏಳು ತಂತಿ ವೈಲಿನ್ ಮೊದಲಿಗೆ ತಯಾರಿಸಿರುವ ಮಾಹಿತಿ ಇದೆ. ಕರ್ನಾಟಕ ಶಾಸ್ತ್ರೀಯ ಸಂಗೀತಕ್ಕೆ ಇದನ್ನು ತಂದಿರುವ ಹೆಮ್ಮೆಯ ಕೊಡುಗೆ ವಿ.ಟಿ. ಚೌಡಯ್ಯನವರಿಗೆ ಸಲ್ಲುತ್ತದೆ. ಏಳು ತಂತಿ ವಯೋಲಿನ್ #Violin ನುಡಿಸಬಲ್ಲ ವಿದ್ವಾಂಸರು ಅತಿ ವಿರಳ.

Also Read>> ಮಂಡ್ಯ | ಜಿಲೆಟಿನ್ ಸ್ಫೋಟಿಸಿಕೊಂಡು ಯುವಕ ಭೀಕರ ಆತ್ಮಹತ್ಯೆ | ದೇಹ ಛಿದ್ರ-ಛಿದ್ರ | ಕಾರಣವೇನು?

ವಯೋಲಿನ್ ಮಾಂತ್ರಿಕ ಸಂಗೀತ ವಿದ್ಯಾ ಸಾಗರ ದಿವಂಗತ ಶ್ರೀ ಆರ್.ಆರ್. ಕೇಶವಮೂರ್ತಿಗಳು ಹಿರಿಯ ಕಲಾವಿದರೂ ಗುರುಗಳೂ ಆಗಿ ಈ ಏಳು ತಂತಿ ವೈಲಿನ್ ಕಲಿಸುತ್ತಿದ್ದರು. ಇವರಿಂದ ಕಲಿತು ಈ ವಾದ್ಯದ ವಿಶೇಷತೆಗಳನ್ನು ಉಳಿಸಿಕೊಂಡು ಹೆಚ್ಚಿನ ಸಾಧನೆಯ ಹಾದಿಯಲ್ಲಿ ತೊಡಗಿರುವವರು, ನಮ್ಮ ನಾಡಿನ ಹೆಮ್ಮೆಯ ಕಲಾವಿದೆ ಜ್ಯೋತ್ಸ್ನಾ ಮಂಜುನಾಥ್. #JyotsnaManjunathಜ್ಯೋತ್ಸ್ನಾ ಅವರು ಎಲ್‌ಐಸಿ #LIC ಪಿಂಚಣಿದಾರರ ಕ್ಷೇಮಾಭಿವೃದ್ಧಿ ಸಂಘದ ಬೆಂಗಳೂರು ಘಟಕದ ಮಾಜಿ ಅಧ್ಯಕ್ಷರಾದ ಶ್ರೀಮತಿ ವಿ. ಭಾಗ್ಯಲಕ್ಷ್ಮೀ ಮತ್ತು ಶ್ರೀ ಕಡಬ ಸುಬ್ರಹ್ಮಣ್ಯ ಅವರ ಸುಪುತ್ರಿ.

ಅವರು ತಮ್ಮ 8 ನೇ ವಯಸ್ಸಿನಲ್ಲಿ ಏಳು ತಂತಿಗಳ ವಯೋಲಿನ್ ಕಲಿಕೆಯನ್ನು ಶ್ರೀಯುತ ಆರ್.ಆರ್. ಕೇಶವಮೂರ್ತಿಗಳಲ್ಲಿ ಪ್ರಾರಂಭಿಸಿದರು.

ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಅನೇಕ ಹಿರಿಯ ಕಲಾವಿದರಿಗೆ ಸಹಕಾರ ನೀಡುತ್ತಿರುವ ದೇಡಿಕೆಯ ಕಲಾವಿದೆ. ವಯೋಲಿನ್ ಸೋಲೋ ಕಛೇರಿಗಳಲ್ಲಿ ಸಹ ಏಳು ತಂತಿ ವಯೋಲಿನ್ ನುಡಿಸುತ್ತಾರೆ. ಬೆಂಗಳೂರಿನ ಸಂಗೀತ ನೃತ್ಯ ಅಕಾಡೆಮಿಯಿಂದ ರಾಜ್ಯ ವಿದ್ಯಾರ್ಥಿವೇತನ ಪಡೆದು, AIR ಮತ್ತು ದೂರದರ್ಶನ, ಬೆಂಗಳೂರಿನ B-ಹೈ ಗ್ರೇಡ್ ಕಲಾವಿದರಾಗಿರುವರು. ಪಿಟೀಲು ವಾದ್ಯ ಕಲಾಭೂಷಣ, ವಂಶಿ ಪುರಸ್ಕಾರ, ಅನನ್ಯ ಯುವ ಪುರಸ್ಕಾರ ಪ್ರಶಸ್ತಿಗಳು ಇವರಿಗೆ ಸಂದಿವೆ.

ಇತ್ತೀಚಿನ ಇವರ ಮೇರು ಸಾಧನೆಗಳು, ದಿ.ಶ್ರೀ ಮೈಸೂರು ಟಿ. ಚೌಡಯ್ಯನವರ ಜನ್ಮ ಶತಮಾನೋತ್ಸವದ ಆಚರಣೆಯ ಸಂದರ್ಭದಲ್ಲಿ ಅಕಾಡೆಮಿ ಆಫ್ ಮ್ಯೂಸಿಕ್’ನಿಂದ ಏಳು ತಂತಿಗಳ ಪಿಟೀಲು ನುಡಿಸುವ ಕಲೆಯ ಸಂರಕ್ಷಣೆ ಮತ್ತು ಪರಿಣತಿಗಾಗಿ ವಿದ್ಯಾರ್ಥಿ ವೇತನ ಪಡೆದಿದ್ದಾರೆ.
ವೃತ್ತಿಯಲ್ಲಿ ಆದಾಯ ತೆರಿಗೆಯ #IncomeTax ಇನ್ಸ್ಪೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತ ಅಲ್ಲಿಯೂ ತಮ್ಮ ಸಂಗೀತ ಕ್ಷೇತ್ರದ ಕೊಡುಗೆಯನ್ನು ಗುರುತಿಸಿಕೊಂಡಿರುವುದು ವಿಶೇಷ.

ಇವರ ಈ ವಿಶೇಷ ಸಾಧನೆಗಾಗಿ ಭಾರತದ ಗೌರವಾನ್ವಿತ ಹಣಕಾಸು ಸಚಿವರಿಂದ ವೈಯಕ್ತಿಕ ಪರ್ಸೂಟ್ಸ್’ನಲ್ಲಿ ಪ್ರತಿಷ್ಠಿತ ಸೆಂಟ್ರಲ್ ಬೋರ್ಡ್ ಆಫ್ ಡೈರೆಕ್ಟ್ ಟ್ಯಾಕ್ಸ್ ಸರ್ಟಿಫಿಕೇಟ್ ಆಫ್ ಎಕ್ಸಲೆನ್ಸ್ ಪಡೆದಿದ್ದಾರೆ.

Also Read>> ಭದ್ರಾವತಿ | ಸುರಕ್ಷಿತವಲ್ಲದ ಸಾವಿರಾರು ಹೆಲ್ಮೆಟ್ ಪೊಲೀಸರಿಂದ ನಾಶ

ವೃತ್ತಿಯಾದ ಇನ್ಕಂ ಟ್ಯಾಕ್ಸ್ ಕ್ಷೇತ್ರದಲ್ಲೂ ಸಾಧನೆಯ ಹೆಜ್ಜೆ ಗುರುತುಗಳನ್ನು ಮೂಡಿಸಿದ್ದಾರೆ. ಶ್ರೀ ಅನಿಲ್ ಕುಂಬ್ಳೆ ಉಪಸ್ಥಿತಿಯಲ್ಲಿ, ಕೇಂದ್ರ ಮತ್ತು ರಾಜ್ಯ ಚುನಾವಣೆಗಳಿಗೆ ಸಂಬಂಧಿಸಿದಂತೆ ಅವರು ಮಾಡಿದ ಅಸಾಧಾರಣ ಗುಪ್ತಚರ ಕಾರ್ಯಗಳಿಗಾಗಿ ಕೇಂದ್ರ ಆದಾಯ ತೆರಿಗೆ ಮಹಾನಿರ್ದೇಶಕರಿಂದ ಪ್ರಶಂಸಾ ಪತ್ರ ಹಾಗೂ ಅನ್ವೇಷಣಾ ಪ್ರಶಸ್ತಿ-2019 ಪಡೆದಿದ್ದಾರೆ.

ಸಂಗೀತದಲ್ಲಿ ಶ್ರದ್ಧೆಯ ಮಹತ್ವವನ್ನು ಬಿಂಬಿಸಿರುವ, ಕರ್ನಾಟಕ ಸಂಗೀತದ ಕೀರ್ತಿಯನ್ನು ಹೆಚ್ಚಿಸಿರುವ ಇವರ ಸಾಧನೆ ಹೀಗೇ ಮುಂದುವರಿಯಲಿ, ಕರ್ನಾಟಕ ಸಂಗೀತದ ವಿನೂತನ ಸಾಧಕರ ಈ ಒಂದು ಕಿರು ಪರಿಚಯದೊಂದಿಗೆ ದೇವರ ಅನುಗ್ರಹದಿಂದ ಇವರಿಗೆ ಇನ್ನೂ ಹೆಚ್ಚಿನ ಕೀರ್ತಿ ಲಭಿಸಲಿ ಎಂದು ಹಾರೈಸುತ್ತೇವೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: AIRBENGALURUIncome TaxJyotsna ManjunathKannada News WebsiteLatest News KannadaMusical instrumentmysoreNada KalpaT. Chowdaiahviolinಆದಾಯ ತೆರಿಗೆಜ್ಯೋತ್ಸ್ನಾ ಮಂಜುನಾಥ್ಟಿ. ಚೌಡಯ್ಯನಾದ ಕಲ್ಪಪಾಶ್ಚಾತ್ಯ ಸಂಗೀತಪಿಟೀಲುವಯೋಲಿನ್ಸಂಗೀತ ವಾದ್ಯ
Share198Tweet123Send
Previous Post

ಭದ್ರಾವತಿ | ಸುರಕ್ಷಿತವಲ್ಲದ ಸಾವಿರಾರು ಹೆಲ್ಮೆಟ್ ಪೊಲೀಸರಿಂದ ನಾಶ

Next Post

ಚಿಕ್ಕಮಗಳೂರು ಪೊಲೀಸರ ಕಾರ್ಯಾಚರಣೆ | ಶಿವಮೊಗ್ಗದಲ್ಲೂ ಕಳ್ಳತನ ಮಾಡಿದ್ದ ಆರೋಪಿಗಳು ಅಂದರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಚಿಕ್ಕಮಗಳೂರು ಪೊಲೀಸರ ಕಾರ್ಯಾಚರಣೆ | ಶಿವಮೊಗ್ಗದಲ್ಲೂ ಕಳ್ಳತನ ಮಾಡಿದ್ದ ಆರೋಪಿಗಳು ಅಂದರ್

ಚಿಕ್ಕಮಗಳೂರು ಪೊಲೀಸರ ಕಾರ್ಯಾಚರಣೆ | ಶಿವಮೊಗ್ಗದಲ್ಲೂ ಕಳ್ಳತನ ಮಾಡಿದ್ದ ಆರೋಪಿಗಳು ಅಂದರ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL