No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Thursday, June 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಎಲ್ಲಿ ಹೋಯಿತು ಮಳೆ? ತಾಯಿಯ ಕತ್ತು ಕೊಯ್ದು ಮೊಲೆ ಚೀಪಿದರೆ ಹಾಲಾದರೂ ಹೇಗೆ ಬಂದೀತು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 22, 2019
in Small Bytes, Special Articles
0
ಎಲ್ಲಿ ಹೋಯಿತು ಮಳೆ? ತಾಯಿಯ ಕತ್ತು ಕೊಯ್ದು ಮೊಲೆ ಚೀಪಿದರೆ ಹಾಲಾದರೂ ಹೇಗೆ ಬಂದೀತು?
Share on FacebookShare on TwitterShare on WhatsApp

ಪ್ರತಿ ಮಳೆಗಾಲ ಬಂತೆಂದರೆ ಸಾಕು ಹೋದ ವರ್ಷ ಜಾಸ್ತಿ ಮಳೆಯಾಗಿತ್ತು, ಈ ವರ್ಷ ಕಡಿಮೆ ಮತ್ತೆ ಎಷ್ಟು ತಡವಾಗಿ ಬಂತು ಅಂತ ಮಾತನಾಡುವುದು ಸಾಮಾನ್ಯವಾಗಿಬಿಟ್ಟಿದೆ. ಜೊತೆಗೆ ನಮ್ಮ ಕಾಲದಲ್ಲಿ ಹೀಗೆ ಇರಲಿಲ್ಲ, ಆಗೆಲ್ಲಾ ಆರಿದ್ರಾ ಮಳೆಗೆ ಹಬ್ಬನೇ ಮಾಡ್ತಿದ್ವಿ ಅಂತ ಹೇಳುವ ಹಿರಿಯರು ಇದ್ದೇ ಇರುತ್ತಾರೆ. ಈಗಲೂ ಹಬ್ಬ ಆಚರಿಸ್ತಾರೆ ಮಳೆ ಬರದೇ ಇದ್ದರೂ ಅನ್ನುವುದು ಬೇರೆ ವಿಚಾರ. ಹಾಗಾದರೆ ಮಳೆ ಎಲ್ಲಿ ಹೋಯಿತು?! ಅದೇನು ಗೊತ್ತಿಲ್ಲದ ವಿಷಯ ಏನಲ್ಲ. ತಾಯಿಯ ಕತ್ತು ಕೊಯ್ದು ಮೊಲೆ ಚೀಪಿದರೆ ಹಾಲಾದರೂ ಹೇಗೆ ಬಂದೀತು?

ಮಳೆ ಅಭಾವ ಕಂಡರೂ ಎಚ್ಚೆತ್ತವರು ಕಡಿಮೆ. ಯಾಕೆ ಗೊತ್ತೇ? ಇನ್ನೂ ಅನಿವಾರ್ಯ ಅನ್ನುವ ಪರಿಸ್ಥಿತಿ ಬಂದಿಲ್ಲವಲ್ಲ. ಯಾವಾಗ ಮನೆಯಲ್ಲಿ ಏನೋ ಒಂದು ಪದಾರ್ಥ ಖಾಲಿಯಾದರೆ, ಈ ಕಡೆ ಪಕ್ಕದ ಮನೆಯಲ್ಲಿ ತೆಗೆದುಕೊಳ್ಳುವುದು, ಅದೂ ಖಾಲಿ ಅದರೆ ಆ ಕಡೆ ಪಕ್ಕದ ಮನೆ, ಅದೂ ಆದ ಮೇಲೆ ಎದುರು, ಹಿಂದೆ…. ಊಹೂಂ ಸಾಕಾಗಲಿಲ್ಲ. ಹಾಗಾದರೆ ಇದು ಶಾಶ್ವತ ಪರಿಹಾರವೇ? ಅಲ್ಲ. ಓಹೋ ಆ ಪದಾರ್ಥ ಬಳಸುವುದು ಬಿಡಬೇಕು, ಅದೂ ಆಗಲ್ಲ. ಎಲ್ಲಿಯ ತನಕ ಹೀಗೆ ತುರ್ತುಗಳನ್ನು ಪೂರೈಸುತ್ತಾ, ದೀರ್ಘ ಕಾಲವನ್ನು ತಳ್ಳಲು ಸಾಧ್ಯ? ಕಾವೇರಿ ಬರಿದಾದಳು ಅಂತ ಶರಾವತಿ, ನಂತರ ತುಂಗಭದ್ರಾ ಆಮೇಲೆ ಮತ್ತೊಂದು ಅಂತ ಹೊರಟರೆ ಇಷ್ಟು ವರ್ಷ ನೀರು ಕೊಟ್ಟ ಆ ತಾಯಿಗೆ ಏನು ಕೊಟ್ಟಿರಿ? ಮತ್ತು ಶರಾವತಿ, ತುಂಗಭದ್ರಾ ಅಂತ ಇನ್ನೆಷ್ಟು ಕಾಲ ಮುಂದೂಡುವಿರಿ? ಶಾಶ್ವತ ಪರಿಹಾರ ಎಂದು?

ಇಂತಹ ಆಲೋಚನೆಯ ಎಲ್ಲರಿಗಿಂತ ಮೊದಲು ಅರಿತ ಇಮ್ಮಡಿ ಮೋದಿ ಸರ್ಕಾರ ಜಲಶಕ್ತಿ ಇಲಾಖೆಯನ್ನೇ ಹುಟ್ಟು ಹಾಕಿ, ಸಚಿವರನ್ನು ನೇಮಿಸಿತು. ಗಜೇಂದ್ರ ಸಿಂಗ್ ಶೇಖಾವತ್ ಕೇಂದ್ರ ಜಲಶಕ್ತಿ ಸಚಿವರಾಗಿ ಪದಗ್ರಹಣ ಮಾಡಿದ ದಿನದಿಂದ ಹೊಸ ಸಚಿವಾಲಯದ ಕಾರ್ಯದ ಬಗ್ಗೆ ಎಲ್ಲರೂ ದೃಷ್ಟಿ ನೆಟ್ಟಿದ್ದರು. 256 ಜಿಲ್ಲೆಗಳ 1592 ಬ್ಲಾಕ್‌ಗಳಲ್ಲಿ ನೀರಿನ ಸಂರಕ್ಷಣೆ ಮತ್ತು ಸುರಕ್ಷತೆ ಕುರಿತು ಅಭಿಯಾನ ಆರಂಭಿಸಲಾಯಿತು. ಕೇಂದ್ರ ಸರಕಾರದ ಅಧಿಕಾರಿಗಳು ಮತ್ತು ಜಿಲ್ಲಾಡಳಿತ ನಾಮ ನಿರ್ದೇಶಿತ ಇಬ್ಬರು ಸದಸ್ಯರನ್ನು ಒಳಗೊಂಡ ಸಮಿತಿ ರಚಿಸಿ ಈ ಎಲ್ಲಾ ಗುರುತಿಸಿದ ಪ್ರದೇಶಗಳಿಗೆ ಭೇಟಿ ನೀಡಲಿದೆ‌. ಅಭಿಯಾನವೇ ಜಲಶಕ್ತಿ ಕುರಿತು ಇರುವಾಗ ಆ ಸಮಿತಿಯ ಕಾರ್ಯಗಳು ಹೀಗಿವೆ.

  1. ನೀರಿನ ಸಂರಕ್ಷಣೆ ಮತ್ತು ಮಳೆ ಕೊಯ್ಲು
  2. ಸಾಂಪ್ರದಾಯಿಕ ಮತ್ತು ಅಸಾಂಪ್ರದಾಯಿಕ ಜಲಮೂಲ ನವೀಕರಣ.
  3. ನೀರಿನ ಪುನರ್‌ ಬಳಕೆ ಮತ್ತು ಬೋರ್ ವೆಲ್‌ಗಳ ಭರ್ತಿ.
  4. ಜಲಾನಯನ ಪ್ರದೇಶಗಳ ಅಭಿವೃದ್ದಿ.
  5. ತೀವ್ರವಾದ ಅರಣ್ಯೀಕರಣ.

    ಏನಿದು? ಎಲ್ಲಾ ಮೊದಲೇ ಇದ್ದ ಅಂಶಗಳು ಎನಿಸಬಹುದು. ಸ್ವಚ್ಛವಾಗಿರಬೇಕು ಎಂಬುದೂ ಗೊತ್ತಿತ್ತು ಆದರೆ ಸ್ವಚ್ಛ ಭಾರತ ಬಂದ ಮೇಲೆ ಅದರ ಪರಿಯೇ ಬದಲಾಯಿತು. ಹಾಗೆಯೇ ಜಲಶಕ್ತಿಯ ಒಂದು ಸಚಿವಾಲಯ ರೂಪುಗೊಂಡು ಜಲ ಸಂರಕ್ಷಣೆ ಮತ್ತು ನಿರ್ವಹಣೆಯ ಒಳ ಹೊರಗು ಕುರಿತು ನೋಡಲು ಕುಳಿತರೆ ಅಲ್ಲಿ ಗಮನಾರ್ಹ ಪ್ರಗತಿ ಕಾಣಲು ಸಾಧ್ಯ. ದೂರದೃಷ್ಟಿ ಹೊತ್ತಿರುವ ಜಲಶಕ್ತಿ ಅಭಿಯಾನ ಎರಡು ಹಂತಗಳಲ್ಲಿ ಕಾರ್ಯ ನಿರ್ವಹಿಸುತ್ತದೆ.

    ಮಳೆಗಾಲ – ಜುಲೈ 01, 2019 ರಿಂದ ಸೆಪ್ಟೆಂಬರ್ 15, 2019 ರ ವರೆಗೆ.
    ಹೆಚ್ಚುವರಿಯಾಗಿ, ಅಕ್ಟೋಬರ್ 01, 2019 ರಿಂದ ನವೆಂಬರ್ 30, 2019 ರ ತನಕ.

    ಪ್ರಧಾನಿ ನರೇಂದ್ರ ಮೋದಿಯವರು ಇಂತಹ ಸಾವಿರಾರು ಅಭಿಯಾನಗಳ ಹೊತ್ತು ತಂದರೂ ಅವುಗಳ ಯಶಸ್ಸು ಇರುವುದು ಜನರ ಕೈಯಲ್ಲಿ. ಹಾಗೆಯೇ ಇಲ್ಲಿ ಕೂಡ ಹಲವಾರು ಸಿನಿಮಾ ಮತ್ತು ಕ್ರೀಡಾ ರಂಗದ ಪ್ರಸಿದ್ಧರು ಈಗಾಗಲೇ ಮೆಚ್ಚುಗೆ ಮಾತುಗಳಾಡಿದ್ದಾರೆ. ಅಂತೆಯೇ ಸಾರ್ವಜನಿಕರಲ್ಲದೇ ಸ್ವಸಹಾಯ ಸಂಘಗಳು, NSS, NCC, ಶಾಲಾ ಕಾಲೇಜುಗಳು, ಪಂಚಾಯಿತಿಗಳು, ಮಾಜಿ ಸೈನಿಕರು ಮತ್ತು ಪಿಂಚಣಿದಾರರಂತಹ ವಲಯದಿಂದ ಹೆಚ್ಚಿನ ಪ್ರಮಾಣದಲ್ಲಿ ಸಹಯೋಗ ನಿರೀಕ್ಷಿಸಲಾಗಿದೆ.

    ಭಾರತದ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ದೂರದೃಷ್ಟಿಯ ಫಲವಾಗಿ ಅತ್ಯಮೂಲ್ಯ ಸಂಪನ್ಮೂಲಗಳಲ್ಲಿ ಒಂದಾದ ನೀರಿನ ಕುರಿತು ಒಂದು ಸದೃಢ ಇಲಾಖೆ ಮತ್ತು ಯೋಜನೆ ಆರಂಭವಾಗಿದೆ. ಅಲ್ಲದೆ ನೇಮಕವಾದ ಸಚಿವರು ಸಹ ಹೆಚ್ಚು ಉತ್ಸಾಹಿಗಳು ಹಾಗೂ ಸಕ್ಷಮರು. ಈ ಯೋಜನೆಯು ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಡಿ ಕಾರ್ಯ ನಿರ್ವಹಿಸಲಿದ್ದು, ಅಭಿಯಾನವಾಗಿ ರೂಪುಗೊಂಡಿದ್ದು ಹೆಚ್ಚಿನ ಸಾರ್ಥಕತೆ ಹೊಂದಲು ನೆರವಾಗಿದೆ. ಎಲ್ಲ ಅಂದುಕೊಂಡಂತೆ ಆದರೆ ಈಗಿನ ಮಕ್ಕಳು ಅವರ ಕಾಲಕ್ಕೆ ಆರಿದ್ರಾ ಮಳೆಯ ಹಬ್ಬವನ್ನು ತೋರಿಕೆಗಲ್ಲ, ವಿಜೃಂಭಣೆಯಿಂದ ಆಚರಿಸಬಹುದು.

    ಲೇಖನ: ಸಚಿನ್ ಪಾರ್ಶ್ವನಾಥ್

Tags: DeforestationKannada ArticleRain harvestingRainy SeasonSharavathi RiverSpecial ArticleTunga Bhadra RiverWater power campaignಅರಣ್ಯೀಕರಣಜಲಶಕ್ತಿ ಅಭಿಯಾನತುಂಗಭದ್ರಾಮಳೆ ಕೊಯ್ಲುಮಳೆಗಾಲಶರಾವತಿ
Share196Tweet123Send
Previous Post

ಓಂಕಾರ ಆಶ್ರಮ: ಈ ವಿಶಿಷ್ಟ ದ್ವಾದಶ ಜ್ಯೋರ್ತಿಲಿಂಗ ದೇವಾಲಯಕ್ಕೊಮ್ಮೆ ತಪ್ಪದೇ ಭೇಟಿ ನೀಡಿ

Next Post

ಚಳ್ಳಕೆರೆ ಬಳಿ ಭೀಕರ ಅಪಘಾತ: ಓರ್ವ ಸಾವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಚಳ್ಳಕೆರೆ ಬಳಿ ಭೀಕರ ಅಪಘಾತ: ಓರ್ವ ಸಾವು

ಚಳ್ಳಕೆರೆ ಬಳಿ ಭೀಕರ ಅಪಘಾತ: ಓರ್ವ ಸಾವು

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

June 10, 2026
ಸೊರಬ | 10 ವರ್ಷದ ಚಿರತೆ ಸಾವು | ವಿದ್ಯುತ್ ಹರಿಸಿ ಕೊಂದರಾ?

ಸೊರಬ | 10 ವರ್ಷದ ಚಿರತೆ ಸಾವು | ವಿದ್ಯುತ್ ಹರಿಸಿ ಕೊಂದರಾ?

June 10, 2026
ಬಾಯಿ ತೆರೆಯಲಾಗದೆ 14 ತಿಂಗಳು ಹೋರಾಟ | ಶಸ್ತ್ರಚಿಕಿತ್ಸೆಯಿಂದ ಶಿವಮೊಗ್ಗ ಮಹಿಳೆಗೆ ಹೊಸ ಜೀವನ

ಬಾಯಿ ತೆರೆಯಲಾಗದೆ 14 ತಿಂಗಳು ಹೋರಾಟ | ಶಸ್ತ್ರಚಿಕಿತ್ಸೆಯಿಂದ ಶಿವಮೊಗ್ಗ ಮಹಿಳೆಗೆ ಹೊಸ ಜೀವನ

June 10, 2026
ಶಿಕ್ಷಣದಿಂದ ಸಮಾಜ ನಿರ್ಮಾಣ ಸಾಧ್ಯ: ಡಾ. ವಾಸುದೇವ ಕೆ. ಆತ್ರೆ

ಶಿಕ್ಷಣದಿಂದ ಸಮಾಜ ನಿರ್ಮಾಣ ಸಾಧ್ಯ: ಡಾ. ವಾಸುದೇವ ಕೆ. ಆತ್ರೆ

June 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL