Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಮೈಸೂರು

ನಮ್ಮ ಸಂಸ್ಕೃತಿ, ಧರ್ಮ, ಆಚಾರ ವಿಚಾರ ಎಲ್ಲಿಗೆ ಹೋಗಿ ನಿಂತಿದೆ? ಆದಿಚುಂಚನಗಿರಿ ಶ್ರೀ ಬೇಸರ

ರಾಮಕೃಷ್ಣ-ವಿವೇಕಾನಂದ ಭಾವಪ್ರಚಾರ ಪರಿಷತ್ತಿನ 9ನೇ ಸಮ್ಮೇಳನಕ್ಕೆ ತೆರೆ

January 8, 2024
in ಮೈಸೂರು
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ರಾಮಕೃಷ್ಣ-ವಿವೇಕಾನಂದ ಭಾವಪ್ರಚಾರ ಪರಿಷತ್ತಿನಿಂದ ನಗರದಲ್ಲಿ ಮೂರು ದಿನಗಳ ಕಾಲ ಆಯೋಜಿಸಿದ್ದ 9ನೇ ವಾರ್ಷಿಕ ಸಮ್ಮೇಳನಕ್ಕೆ ಭಾನುವಾರ ರಾತ್ರಿ ಮಂಗಳ ಹಾಡಲಾಯಿತು.

ಆದಿಚುಂಚನಗಿರಿ ಮಠದ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಸಮಾರೋಪ ಭಾಷಣ ಮಾಡಿ,  ಸ್ವಾಮಿ ವಿವೇಕಾನಂದರು ಷಿಕಾಗೋ ಧಾರ್ಮಿಕ ಸಮ್ಮೇಳನಕ್ಕೆ ತೆರಳುವ ಮುನ್ನ ಮೈಸೂರಿನಲ್ಲಿ ತಂಗಿದ್ದ ಸ್ಥಳದಲ್ಲಿ ಯುವಕರ ಮನಸ್ಸನ್ನು ವಿಕಸನಗೊಳಿಸುವ ಸೌಧ ನಿರ್ಮಿಸಲು ಹೋದಾಗ ಹಲವು ಅಡ್ಡಿಗಳು ಉಂಟಾಗಿ ಕಾರ್ಯ ನಿಧಾನವಾಗುತ್ತಿದೆ. ಆದರೆ ಯುವ ಜನಾಂಗವನ್ನು ವಿಕೃತಿಗೆ ತಳ್ಳುವ ಮಾಲ್‌ಗಳು ಅಲ್ಲಲ್ಲಿ ತಲೆ ಎತ್ತುತ್ತಿದ್ದರೂ ಯಾವುದೇ ಚಕಾರ ಎತ್ತುತ್ತಿಲ್ಲ. ನಮ್ಮ ಸಂಸ್ಕೃತಿ, ಧರ್ಮ, ಆಚಾರ ವಿಚಾರ ಎಲ್ಲಿಗೆ ಹೋಗಿ ನಿಂತಿದೆ ಎನ್ನುವುದು ಕಂಡು ಬೇಸರವಾಗುತ್ತದೆ ಎಂದರು.
ಭಾರತವನ್ನು ಮತ್ತೆ ಕಟ್ಟಬೇಕಿದೆ
ಅಧ್ಯಕ್ಷತೆ ವಹಿಸಿದ್ದ ಮೈಸೂರು ಶ್ರೀರಾಮಕೃಷ್ಣ ಆಶ್ರಮದ #RamakrishnaAshrama ಅಧ್ಯಕ್ಷರಾದ ಸ್ವಾಮಿ ಮುಕ್ತಿದಾನಂದಜೀ ಮಹಾರಾಜ್ ಮಾತನಾಡಿ, ಧರ್ಮ ನೆಲೆಯಲ್ಲಿ ಭವ್ಯವಾಗಿದ್ದ ಭಾರತವನ್ನು ನಾವು ಮತ್ತೆ ಕಟ್ಟಬೇಕಿದೆ. ಪ್ರಜಾಪ್ರಭುತ್ವದಲ್ಲಿ ಆಳುವ ವರ್ಗದವರ ದಾಸ್ಯ, ಆಮಿಷಕ್ಕೆ ಬಲಿಯಾಗಿ ಧರ್ಮ, ಐಕ್ಯತೆ, ಸಂಸ್ಕೃತಿ ಕ್ಷೀಣಿಸುತ್ತದೆ ಎಂದು ಬೇಸರಿಸಿದರು.

ಇನ್ನೂ ಜಾಗೃತವಾಗಿಲ್ಲ
ಗದಗ-ವಿಜಯಪುರ ರಾಮಕೃಷ್ಣ-ವಿವೇಕಾನಂದ ಆಶ್ರಮದ ಅಧ್ಯಕ್ಷರಾದ ಸ್ವಾಮಿ ನಿರ್ಭಯಾನಂದ ಸರಸ್ವತಿ ಮಾತನಾಡಿ, ನಮ್ಮ ಸರ್ಕಾರಗಳು ಇನ್ನೂ ಜಾಗೃತ ಆಗಿಲ್ಲ. ಹೀಗಾಗಿ, ಪ್ರಜ್ಞಾವಂತ ಸಮಾಜದವರೇ ಇಂತಹ ಧಾರ್ಮಿಕ ಕಾರ್ಯಕ್ರಮಗಳ ಆಯೋಜನೆಯ ಸದುದ್ದೇಶವನ್ನು ಮನಗಾಣಬೇಕು. ಸಮಾಜಕ್ಕೆ ಉಪಯುಕ್ತವಾದ ಆಲೋಚನೆ, ಯೋಜನೆಗಳನ್ನು ನೀಡಬೇಕು ಎಂದರು.

ಸಂದೇಶ ಎಲ್ಲರನ್ನೂ ತಲುಪಲಿ
ರಾಣೆಬೆನ್ನೂರಿನ ಸ್ವಾಮಿ ಪ್ರಕಾಶಾನಂದಜೀ ಮಾತನಾಡಿ, ಸಮಾಜಕ್ಕೆ ಮಹಾತ್ಮರ ಸಂದೇಶಗಳು ಹಿಂದಿಗಿಂತ ಹೆಚ್ಚು ಅಗತ್ಯ ಇದೆ. ಯಾವುದೇ ಜಾತಿ ಭೇದವಿಲ್ಲದೆ ವಿವೇಕಾನಂದರ ಸಂದೇಶಗಳು ಎಲ್ಲರನ್ನೂ ತಲುಪಬೇಕಿದೆ. ಕುವೆಂಪು ಅವರಿಗೆ ವಿಶ್ವಮಾನವ ತತ್ವಕ್ಕೆ ವಿವೇಕಾನಂದರೇ ಪ್ರೇರಣೆ. ವಿವೇಕಾನಂದರ ಸಂಪರ್ಕಕ್ಕೆ ಬಂದ ಎಲ್ಲರೂ ವಿಶ್ವಮಾನವರಾಗಬೇಕು. ಆಗಮಾತ್ರ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
Kalahamsa Infotech private limitedತ್ಯಾಗ ಬಹಳ ಮುಖ್ಯ
ಮನುಷ್ಯತ್ವದಿಂದ ದೈವತ್ವಕ್ಕೇರಲು ತ್ಯಾಗ ಬಹಳ ಮುಖ್ಯ ಎಂದು ಮೈಸೂರು ಶ್ರೀ ರಾಮಕೃಷ್ಣ ಆಶ್ರಮದ ಸ್ವಾಮಿ ಜ್ಞಾನಯೋಗಾನಂದಜೀ ಮಹಾರಾಜ್ ಹೇಳಿದರು.  ಸಮ್ಮೇಳನದಲ್ಲಿ ‘ಶ್ರೀ ರಾಮಕೃಷ್ಣ ವಚನವೇದದ ಸಾರಸೂಚಿ’ ಕುರಿತು ಉಪನ್ಯಾಸ ನೀಡಿದರು.

ಪ್ರಪಂಚದಲ್ಲಿ ಅನೇಕ ಸಂಗತಿಗಳಿವೆ. ಆದರೆ, ಅವುಗಳು ಮನುಷ್ಯನನ್ನು ಬಲವಾಗಿ ಬಂಧಿಸುವುದಿಲ್ಲ. ‘ನಾನು- ನನ್ನದು ಎನ್ನುವುದನ್ನು ಅನುಸರಿಸಿಕೊಂಡು ಇಡೀ ಪ್ರಪಂಚವೇ ನಡೆಯುತ್ತದೆ. ಆದ್ದರಿಂದ ‘ನಾನು- ನನ್ನದು ಎನ್ನುವುದು ಮನುಷ್ಯನನ್ನು ಬಂಧಿಸುವ ವಸ್ತು’ ಎಂದು ಶಂಕರ ಭಗವತ್ಪಾದರು ಹೇಳಿದ್ದಾರೆ. ಅದನ್ನು ಶ್ರೀರಾಮಕೃಷ್ಣರು ಮತ್ತೊಂದು ರೀತಿ ‘ಕಾಮ- ಕಾಂಚನ’ ಎಂದು ಹೇಳಿದ್ದಾರೆ. ಪ್ರಪಂಚದಲ್ಲಿನ ಎಲ್ಲ ವಸ್ತುಗಳನ್ನೂ ತನ್ನದಾಗಿ ಮಾಡಿಕೊಳ್ಳಲು ಇರುವ ಸಾಮಗ್ರಿಯೇ ಕಾಂಚನ (ಹಣ). ಹಾಗಾಗಿ, ‘ಕಾಮ- ಕಾಂಚನ’ ಎರಡನ್ನೂ ತ್ಯಜಿಸಿದರೆ ನಿಜವಾದ ತ್ಯಾಗ ಮಾಡಿದಂತಾಗುತ್ತದೆ ಎಂದರು.

ಅನೇಕ ದ್ವಂದ್ವ, ವಿರುದ್ಧ ಭಾವ, ದೃಷ್ಟಿಕೋನಗಳು ನಮ್ಮಲ್ಲಿ ಇವೆ. ಅವುಗಳನ್ನು ಸಮನ್ವಯಗೊಳಿಸಿ, ಏಕದೃಷ್ಟಿಯಿಂದ ನೋಡಬೇಕು. ಕಲಿಯುಗಕ್ಕೆ ಭಕ್ತಿಮಾರ್ಗವೇ ಸೂಕ್ತ ಎಂದು ರಾಮಕೃಷ್ಣರು ಪ್ರತಿಪಾದಿಸಿದ್ದಾರೆ. ಒಂದೊಂದು ಯುಗಕ್ಕೆ ಒಂದೊಂದು ಮಾರ್ಗ ವಿಶೇಷ. ಕಲಿಯುಗದಲ್ಲಿ ನಮ್ಮ ದೃಷ್ಟಿ ದೇಹದ ಕಡೆಗೆ ಇರುತ್ತದೆ. ಭಕ್ತಿಮಾರ್ಗ ಸುಲಭ ಹಾಗೂ ಸರಳ. ಅದನ್ನು ಅನುಸರಿಸಿ. ಧರ್ಮಗಳ ನಡುವೆ ಕಲಹ ಬೇಡ. ಧರ್ಮಗಳು ಪರಸ್ಪರ ಗೌರವದಿಂದ ಇರಬೇಕು. ಒಳ್ಳೆಯ ಅಂಶ ಎಲ್ಲಿದ್ದರೂ ಸ್ಪೀಕರಿಸಬೇಕು. ಇತರರನ್ನು ಗೌರವಿಸಬೇಕು ಎಂಬುದೇ ರಾಮಕೃಷ್ಣರ ಉಪದೇಶ ಸಾರ ಎಂದು ತಿಳಿಸಿದರು.

ಉಪನ್ಯಾಸ
ರಾಣೆಬೆನ್ನೂರು ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಸ್ವಾಮಿ ಪ್ರಕಾಶಾನಂದಜೀ ‘ಶ್ರೀ ರಾಮಕೃಷ್ಣರ ದೈವತ್ವ-ನೇರ ಶಿಷ್ಯರು ಕಂಡಂತೆ’ ಕುರಿತು, ಪಾವಗಡ ತಾಲೂಕಿನ ವೆಂಕಟಾಪುರ ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಅಮೂರ್ತಾನಂದಜೀ ಅವರು ‘ಸ್ವಾಮಿ ವಿವೇಕಾನಂದರು ಪರಿವ್ರಾಜಕರಾಗಿ ಕಂಡ ಭಾರತ’ ವಿಷಯ ಕುರಿತು ಉಪನ್ಯಾಸ ನೀಡಿದರು. ವಿವಿಧ ಮಠಾಧೀಶರು, ಮಾತಾಜಿಯವರು ಹಾಜರಿದ್ದರು.

ಆಂಧ್ರಪ್ರದೇಶ ವಿಜಯವಾಡದ ರಾಮಕೃಷ್ಣ ಮಿಷನ್‌ನ ಸ್ವಾಮಿ ವಿನಿಶ್ಚಲಾನಂದಜೀ, ದಾವಣಗೆರೆ ರಾಮಕೃಷ್ಣ ಮಿಷನ್ ಅಧ್ಯಕ್ಷ ಸ್ವಾಮಿ ತ್ಯಾಗೀಶ್ವರಾನಂದಜೀ, ತುಮಕೂರು ರಾಮಕೃಷ್ಣ-ವಿವೇಕಾನಂದ ಆಶ್ರಮದ ಸ್ವಾಮಿ ವೀರೇಶಾನಂದ ಸರಸ್ವತಿ, ಹಲಸೂರು ಮಠದ ಶ್ರೀ ಬೋಧ ಸ್ವರೂಪಾನಂದಜೀ, ಮಾಜಿ ಮೇಯರ್ ಸುನಂದಾ ಪಾಲನೇತ್ರ, ಶ್ರೀ ರಾಮಕೃಷ್ಣ ಸೇವಾ ಸಂಘದ ಅಧ್ಯಕ್ಷ ಎಂ.ಪಾಪೇಗೌಡ ಇದ್ದರು.
ಕುವೆಂಪು ವಿವಿ ವಿಶ್ರಾಂತ ಕುಲಪತಿ  ಪ್ರೊ. ಕೆ. ಚಿದಾನಂದಗೌಡ, ಶಿವಮೊಗ್ಗದ ಸ್ವಾಮಿ ವಿನಯಾನಂದಜೀ ಇತರರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteLatest News KannadamysoreRamakrishna MissionShimogaಆದಿಚುಂಚನಗಿರಿ ಮಠಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಮೈಸೂರುರಾಮಕೃಷ್ಣ ಮಿಷನ್ವಿವೇಕಾನಂದಶಿವಮೊಗ್ಗ
Previous Post

ಹೊಸ ದಾಖಲೆ ಬರೆದ ಬೆಂಗಳೂರು ಸಬರ್ಬನ್ ರೈಲು: 31 ಮೀ ಉದ್ದದ ಯು-ಗರ್ಡರ್ ಸಿದ್ಧ

Next Post

ಜ.27ರಂದು ಎಮ್‌ಎಲ್‌ಸಿ ರುದ್ರೇಗೌಡರ ಸಾಧನೆ ಆಧಾರಿತ ದಿ ಐರನ್‌ ಮ್ಯಾನ್‌ ಪುಸ್ತಕ ಬಿಡುಗಡೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಜ.27ರಂದು ಎಮ್‌ಎಲ್‌ಸಿ ರುದ್ರೇಗೌಡರ ಸಾಧನೆ ಆಧಾರಿತ ದಿ ಐರನ್‌ ಮ್ಯಾನ್‌ ಪುಸ್ತಕ ಬಿಡುಗಡೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!