ಬೆಂಗಳೂರು: ಹೌದು, ತಮ್ಮ ಪ್ರಚಾರದ ಕುರಿತಾಗಿ ಸತ್ಯಕ್ಕೆ ದೂರವಾದ ವಿಚಾರಗಳನ್ನು ಪ್ರಕಟಿಸಿದ ಮಾಧ್ಯಮಗಳನ್ನು ನಟ ಹಾಗೂ ಪ್ರಜಾಕೀಯ ಪಕ್ಷದ ಸಂಸ್ಥಾಪಕ ಉಪೇಂದ್ರ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.
ನಿನ್ನೆ ಚಿತ್ರದುರ್ಗದಲ್ಲಿ ತಮ್ಮ ಅಭ್ಯರ್ಥಿಗಳ ಪರವಾಗಿ ಪ್ರಚಾರ ಕೈಗೊಂಡಿದ್ದ ಉಪೇಂದ್ರ, ಎತ್ತಿನ ಗಾಡಿಯ ಮೇಲೆ ನಿಂತು ಎರಡು ನಿಮಿಷ ಮಾತನಾಡಿ ಅಲ್ಲಿಂದ ತೆರಳಿದ್ದರು. ಈ ವಿಚಾರ ಕುರಿತಂತೆ, ಉಪೇಂದ್ರ ಬಿಸಿಲಿಗೆ ಹೆದರಿ ಒಂದೇ ನಿಮಿಷಕ್ಕೆ ಭಾಷಣ ಮುಗಿಸಿ ಹೊರಟಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಉಪೇಂದ್ರ, ನಾವು Rally ಮಾಡಿ ಜನರಿಗೆ ತೊಂದರೆ ಕೊಡುವುದಿಲ್ಲ. ಇದು ಪ್ರಜಾಪ್ರಭುತ್ವದ ವಿಚಾರಗಳ ಪ್ರಚಾರ ಎಂದು ಹೇಳುತ್ತಲೇ ಬಂದಿದ್ದೇವೆ. ಆದರೂ ಕೆಲವು ಅಬ್ಯರ್ಥಿಗಳು ತಿಳಿಯದೇ ಗಾಡಿ ರೆಡಿ ಮಾಡಿಕೊಂಡಿದ್ದರು. ಎರಡು ಮಾತಾಡಿ ಎಂದಿದ್ದಕ್ಕೆ ಗಾಡಿ ಹತ್ತಿ ಎರಡು ಮಾತಾಡಿ ಕೆಳಗೆ ಇಳಿದೆ… ಬಿಸಿಲಿಗೆ ಭಯ ಪಟ್ಟು ಅಲ್ಲ ಎಂದಿದ್ದಾರೆ.
ನಾವು Rally ಮಾಡಿ ಜನರಿಗೆ ತೊಂದರೆ ಕೊಡುವುದಿಲ್ಲ. ಇದು ಪ್ರಜಾಪ್ರಭುತ್ವದ ವಿಚಾರಗಳ ಪ್ರಚಾರ ಎಂದು ಹೇಳುತ್ತಲೇ ಬಂದಿದ್ದೇವೆ. ಆದರೂ ಕೆಲವು ಅಬ್ಯರ್ಥಿಗಳು ತಿಳಿಯದೇ ಗಾಡಿ ರೆಡಿ ಮಾಡಿಕೊಂಡಿದ್ದರು. ಎರಡು ಮಾತಾಡಿ ಎಂದಿದ್ದಕ್ಕೆ ಗಾಡಿ ಹತ್ತಿ ಎರಡು ಮಾತಾಡಿ ಕೆಳಗೆ ಇಳಿದೆ… ಬಿಸಿಲಿಗೆ ಭಯ ಪಟ್ಟು ಅಲ್ಲ. pic.twitter.com/GFN9JNm4Cn
— Upendra (@nimmaupendra) April 4, 2019
’ಪ್ರಜಾಕೀಯದಲ್ಲಿ ಗೆಲ್ಲಬೇಕಿರುವುದು ಪ್ರಜೆಗಳು. ಇಲ್ಲಿರುವ ಅಭ್ಯರ್ಥಿಗಳಿಗೆ ಸೋಲು ಗೆಲ್ಲುವ ಆತಂಕವೇ ಇರಬಾರದು. ಪ್ರಜೆಗಳು ಗೆದ್ದರೆ ನಮಗೆ ಕೆಲಸ ! ಇಲ್ಲದಿದ್ದರೆ ಆತ್ಮ ತೃಪ್ತಿ !! ಇದಕ್ಕಿನ್ನಾ ಇನ್ನೇನು ಬೇಕು.. ಎಂದು ಹೇಳಿದ್ದಾರೆ.
ಪ್ರಜಾಕೀಯದಲ್ಲಿ ಗೆಲ್ಲಬೇಕಿರುವುದು ಪ್ರಜೆಗಳು. ಇಲ್ಲಿರುವ ಅಭ್ಯರ್ಥಿಗಳಿಗೆ ಸೋಲು ಗೆಲ್ಲುವ ಆತಂಕವೇ ಇರಬಾರದು. ಪ್ರಜೆಗಳು ಗೆದ್ದರೆ ನಮಗೆ ಕೆಲಸ ! ಇಲ್ಲದಿದ್ದರೆ ಆತ್ಮ ತ್ರಪ್ತಿ !! ಇದಕ್ಕಿನ್ನಾ ಇನ್ನೇನು ಬೇಕು ?#upp #prajaakeeya #uttamaprajaakeeyaparty
— Upendra (@nimmaupendra) April 4, 2019
Discussion about this post