ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಕೋವಿಡ್19 ಎದುರಿಸಲು ಆತ್ಮಸ್ಥೈರ್ಯ ಇರಬೇಕು. ರಾಕ್ಷಸರಿಗೆ ಕೊರೋನಾ ವೈರಸ್ ಬರುವುದಿಲ್ಲ. ನನ್ನಂತವನಿಗಂತೂ ಬರುವುದೇ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಕೋವಿಡ್ 19 ಎಂಬ ಭಯದಿಂದ ಶಾಸಕರು, ಸಚಿವರು, ಸಂಸದರು ಮನೆಯಲ್ಲೇ ಇದ್ದರೆ ಅಭಿವೃದ್ಧಿ ಕಾಮಗಾರಿಗಳು ನಡೆಯುವುದು ಹೇಗೆ? ಕೋವಿಡ್ 19 ವನ್ನು ಎದುರಿಸುತ್ತೇನೆ ಎಂಬ ಆತ್ಮಸ್ಥೈರ್ಯ ಇರಬೇಕು ಎಂದರು.
ಇಡೀ ಪ್ರಪಂಚ ನರೇಂದ್ರ ಮೋದಿ ಅವರನ್ನು ನಾಯಕ ಎಂದು ಒಪ್ಪಿಕೊಂಡಿದ್ದು, ಜನ ಲಕ್ಷಾಂತರ ರೂಪಾಯಿ ಹಣವನ್ನು ಪ್ರಧಾನಮಂತ್ರಿ ಪರಿಹಾರ ನಿಧಿಗೆ ದೇಣಿಗೆ ನೀಡುತ್ತಿದ್ದಾರೆ. ಕೋವಿಡ್ 19 ಬಗ್ಗೆ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷ ಒಂದಾಗಿ ಹೋರಾಟ ಮಾಡುತ್ತಿದ್ದೇವೆ. ಇಂಥ ಸಂದರ್ಭದಲ್ಲಿ ಸೋನಿಯಾ ಗಾಂಧಿಯ ಹೇಳಿಕೆಯಿಂದ ಎಲ್ಲರಿಗೂ ನೋವಾಗಿದೆ. ಸೋನಿಯಾ ಗಾಂಧಿ ತಮ್ಮ ಹೇಳಿಕೆ ವಾಪಸ್ ಪಡೆಯಲಿ ಎಂದು ನಾನು ಹೇಳುವುದಿಲ್ಲ. ಸಾಗರ ಒಬ್ಬ ವಕೀಲ ತನ್ನ ಕೆಲಸವನ್ನು ತಾನು ಮಾಡಿದ್ದಾನೆ. ಸಬ್ ಇನ್ಸ್’ಪೆಕ್ಟರ್ ಎಫ್’ಐಆರ್ ಹಾಕಿರುವುದು ಸರಿಯೋ ತಪ್ಪೋ ಎಂಬುದನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸುತ್ತೇವೆ ಎಂದರು.
Get in Touch With Us info@kalpa.news Whatsapp: 9481252093
Discussion about this post