ಕಲ್ಪ ಮೀಡಿಯಾ ಹೌಸ್ | ಬೆಂಗಳೂರು/ಭದ್ರಾವತಿ |
ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಪಟ್ಟಿಯಲ್ಲಿ ತಮಗೆ ಅವಕಾಶ ದೊರೆಯದೇ ಇರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಭದ್ರಾವತಿ (Bhadravathi) ಶಾಸಕ ಬಿ.ಕೆ. ಸಂಗಮೇಶ್ವರ್ ಅವರು(B K Sangameshwar) ಕ್ಷೇತ್ರದ ಜನರೊಂದಿಗೆ ಚರ್ಚಿಸಿ ರಾಜೀನಾಮೆ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಸ್ವತಂತ್ರ ಅಭ್ಯರ್ಥಿ ಆದಾಗಿನಿಂದಲೂ ಕ್ಷೇತ್ರದಲ್ಲಿ ಗೆದ್ದು ಬಂದಿದ್ದೇನೆ. ಕಳೆದ ಬಾರಿಯೇ ನನಗೆ ಸಚಿವ ಸ್ಥಾನ ದೊರೆಯಬೇಕಿತ್ತು. ಆದರೆ, ಈ ಬಾರಿಯೂ ಸಹ ನನಗೆ ಅನ್ಯಾಯವಾಗಿದೆ ಎಂದು ಅಸಮಾಧಾನ ಹೊರ ಹಾಕಿದ್ದಾರೆ.
Also Read>> ಶಿವಮೊಗ್ಗದಲ್ಲಿ ಸಂಭ್ರಮ: ಮಧು ಬಂಗಾರಪ್ಪಗೆ ಮತ್ತೆ ಸಚಿವ ಸ್ಥಾನ
ಕ್ಷೇತ್ರದಲ್ಲಿ ಭಾರೀ ಅಂತರದಲ್ಲಿ ಚುನಾವಣೆಯಲ್ಲಿ ಗೆದ್ದಿದ್ದೇನೆ. ಮಾತ್ರವಲ್ಲ ಬಿಜೆಪಿ ಸೇರುವ ಅವಕಾಶ ಬಂದರೂ ಸಹ ನಾನು ಪಕ್ಷ ಬಿಟ್ಟು ಹೊರಹೋಗಲಿಲ್ಲ. ಅಷ್ಟರ ಮಟ್ಟಿಗೆ ನಾನು ಪಕ್ಷನಿಷ್ಠನಾಗಿದ್ದೇನೆ. ಆದರೆ, ಈ ಬಾರಿಯೂ ಸಹ ಸಚಿವ ಸ್ಥಾನ ತಪ್ಪಿರುವುದು ಭದ್ರಾವತಿಗೆ ಆದ ಅನ್ಯಾಯವಾಗಿದೆ. ಪಕ್ಷ ನಿಷ್ಠರಿಗೆ ದೊರೆಯುವ ಉಡುಗೊರೆ ಇದೇನಾ ಎಂದು ಆಕ್ರೋಶ ವ್ಯಕ್ತಪಡಿಸಿದರು.
Bhadravathi : ನಮ್ಮ ಮನೆಗೆ ಬಂದಾಗ ಭರವಸೆ ನೀಡಿದ್ದರು
ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರು ಕಳೆದ ಚುನಾವಣೆಯ ವೇಳೆ ನಮ್ಮ ಮನೆಗೆ ಬಂದಾಗ ಈ ಬಾರಿ ಸಚಿವ ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ, ಅದು ಈಗಲೂ ಸಹ ಈಡೇರಿಲ್ಲ ಎಂದು ಕಿಡಿ ಕಾರಿದರು.
ನನ್ನ ಕ್ಷೇತ್ರ ಜನರೊಂದಿಗೆ ಚರ್ಚಿಸುತ್ತೇನೆ. ಅಭಿಪ್ರಾಯ ಸಂಗ್ರಹ ಮಾಡಿ ನಂತರ ರಾಜೀನಾಮೆ ನೀಡುವ ಕುರಿತಾಗಿ ನಿರ್ಧಾರ ಮಾಡುತ್ತೇನೆ ಎಂದು ತಿಳಿಸಿದರು.
ಹಿರಿಯ ಶಾಸಕನಾಗಿದ್ದರೂ ಸಚಿವ ಸ್ಥಾನ ನೀಡದಿರುವುದಕ್ಕೆ ಕ್ಷೇತ್ರದ ಜನರು, ಕಾರ್ಯಕರ್ತರು ಮತ್ತು ಮುಖಂಡರು ಪ್ರಶ್ನಿಸುತ್ತಿದ್ದಾರೆ. ಭದ್ರಾವತಿಗೆ ತೆರಳಿ ಜನರು ಹಾಗೂ ಮುಖಂಡರೊಂದಿಗೆ ಚರ್ಚಿಸಿ ಅವರ ಅಭಿಪ್ರಾಯಕ್ಕೆ ಸಂಪೂರ್ಣ ಮನ್ನಣೆ ನೀಡುತ್ತೇನೆ.
-ಬಿ.ಕೆ. ಸಂಗಮೇಶ್ವರ್
ಕಳೆದ ಬಾರಿ ಸಚಿವರಾಗಿದ್ದವರಿಗೇ ಮತ್ತೊಮ್ಮೆ ಸಚಿವ ಸ್ಥಾನ ನೀಡಿರುವ ಬಗ್ಗೆ ಶಾಸಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೆಹಲಿಗೆ ತೆರಳಿ ಹೈಕಮಾಂಡ್ಗೆ ಸಮೀಪವಾಗಿರುವವರಿಗೆ ಮಾತ್ರ ಮಂತ್ರಿಗಿರಿ ಸಿಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ನೊಂದಿರುವ ಶಾಸಕರು ಒಟ್ಟಾಗಿ ಸೇರಿ ಮುಂದಿನ ರಾಜಕೀಯ ನಿರ್ಧಾರ ಕೈಗೊಳ್ಳುವ ಬಗ್ಗೆ ಚರ್ಚಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










