ಕಲ್ಪ ಮೀಡಿಯಾ ಹೌಸ್ | ಲಖ್ನೋ |
ಯೋಗಿ ಆದಿತ್ಯನಾಥ್ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡದೇ ಇದ್ದರೆ ಎನ್ಸಿಪಿ ನಾಯಕ ಬಾಬಾ ಸಿದ್ದಿಕ್ ರೀತಿಯಲ್ಲೇ ಅವರನ್ನು ಸಹ ಹತ್ಯೆ ಮಾಡಲಾಗುವುದು ಎಂದು ದುಷ್ಕರ್ಮಿಗಳು ಬೆದರಿಗೆ ಹಾಕಿರುವ ಕುರಿತು ವರದಿಯಾಗಿದೆ.
ಈ ಕುರಿತಂತೆ ಮುಂಬೈ ಪೊಲೀಸರಿಗೆ ಬೆದರಿಕೆ ಸಂದೇಶ ದುಷ್ಕರ್ಮಿಗಳಿಂದ ಬಂದಿದ್ದು, ತನಿಖೆ ನಡೆದಿದೆ.

ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಎನ್ಸಿಪಿ ನಾಯಕ ಬಾಬಾ ಸಿದ್ದಿಕ್ ಅವರನ್ನು ಅಕ್ಟೋಬರ್ 12 ರಂದು ಮುಂಬೈನ ನಿರ್ಮಲ್ ನಗರ ಪ್ರದೇಶದಲ್ಲಿ ಅವರ ಪುತ್ರ, ಶಾಸಕ ಜೀಶನ್ ಸಿದ್ದಿಕ್ ಅವರ ಕಚೇರಿ ಬಳಿ ಮೂವರು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post