ಕಲ್ಪ ಮೀಡಿಯಾ ಹೌಸ್ | ಸಾಗರ |
ಕೆ.ಎಸ್. ಈಶ್ವರಪ್ಪ ಅವರ ರಾಜೀನಾಮೆ ಬೆನ್ನಲ್ಲೇ ಸಂಪುಟ ವಿಸ್ತರಣೆ ಕುರಿತಾಗಿ ಬೆಳವಣಿಗೆಗಳು ಗರಿಗೆದರಿದ್ದು, ಆಕಾಂಕ್ಷಿಗಳ ಪಟ್ಟಿಯೂ ಸಹ ದೊಡ್ಡದಿದೆ.
Also Read: ಕುವೆಂಪು ವಿವಿಯಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಅವರ 131ನೇ ಜಯಂತಿ ಆಚರಣೆ
ಈ ನಡುವೆಯೇ ಸಾಗರ ಶಾಸಕ ಹರತಾಳು ಹಾಲಪ್ಪ ಅವರಿಗೆ ಸಚಿವ ಸ್ಥಾನ ದೊರೆಯುತ್ತದೆಯೇ ಎಂಬ ಕುರಿತಾಗಿ ಚರ್ಚೆಗಳು ನಡೆಯುತ್ತಿವೆ. ಸದ್ಯ ಎಂಎಸ್’ಐಎಲ್ ಅಧ್ಯಕ್ಷರಾಗಿ ಸಮರ್ಥವಾಗಿ ಕಾರ್ಯ ನಿರ್ವಹಿಸುತ್ತಿರುವ ಹಾಲಪ್ಪ ಅವರು, ತಮ್ಮ ಕ್ಷೇತ್ರದಲ್ಲೂ ಸಹ ಅತ್ಯಂತ ಕ್ರಿಯಾಶೀಲ ಹಾಗೂ ಜನಪರ ಶಾಸಕರಾಗಿದ್ದಾರೆ.
ಕ್ಷೇತ್ರದ ಮೂಲೆ ಮೂಲೆಗೂ ಭೇಟಿ ನೀಡಿ ಜನರ ಸಂಕಷ್ಟವನ್ನು ಆಲಿಸುವ ಹಾಲಪ್ಪನವರು, ಕಟ್ಟಕಡೆಯ ವ್ಯಕ್ತಿಗೂ ಸುಲಭವಾಗಿ ಭೇಟಿಯಾಗುವ ಜನನಾಯಕರಾಗಿದ್ದಾರೆ. ಇನ್ನು, ಅಭಿವೃದ್ಧಿ ಕಾರ್ಯಗಳ ವಿಚಾರದಲ್ಲಿ ಸಾಗರ ಒಂದು ರೀತಿಯಲ್ಲಿ ಮಾದರಿಯಾಗುವತ್ತ ದಾಪುಗಾಲು ಹಾಕುತ್ತಿದ್ದು, ಎಲ್ಲ ಕಾಮಗಾರಿಗಳ ಗುಣಮಟ್ಟಕ್ಕೆ ಶಾಸಕರು ಆದ್ಯತೆ ನೀಡುತ್ತಾರೆ. ಇದಕ್ಕಾಗಿ, ಕಾಮಗಾರಿಗಳು ನಡೆಯುವ ಸ್ಥಳಕ್ಕೆ ನಿಯಮಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಾರೆ.
Also Read: ಅತಿಶೀಘ್ರದಲ್ಲೇ ಈಶ್ವರಪ್ಪ ಆರೋಪ ಮುಕ್ತರಾಗಲಿ: ವಿಶೇಷ ಪೂಜೆ ಸಲ್ಲಿಕೆ
ಇಂತಹ ಜನನಾಯಕನಿಗೆ ಈಗ ಸಚಿವ ಸ್ಥಾನ ದೊರೆಯುತ್ತದೆ ಎಂಬ ಮಾತುಗಳು ಕೇಳಿಬರುತ್ತಿದೆ.
ಈ ಬಗ್ಗೆ ಇಂದು ಮಾತನಾಡಿರುವ ಹಾಲಪ್ಪನವರು, ನಾನು ಮಂತ್ರಿ ಸ್ಥಾನಕ್ಕೆ ಬೇಡಿಕೆ ಇಟ್ಟಿಲ್ಲ. ಪಕ್ಷದ ಪ್ರಮುಖರು ಹಾಗೂ ಮುಖ್ಯಮಂತ್ರಿಗಳು ನನಗೆ ಸಚಿವ ಸ್ಥಾನ ನೀಡಿದರೆ ಸಮರ್ಥವಾಗಿ ನಿರ್ವಹಿಸುತ್ತೇನೆ. ಆದರೆ, ಪಕ್ಷದ ಅಂತಿಮ ತೀರ್ಮಾನಕ್ಕೆ ನಾನು ಬದ್ದನಾಗಿದ್ದೇನೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post