No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
  • Advertise With Us
  • Grievances
  • About Us
  • Contact Us
Sunday, August 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಕನ್ನಡ ನಿರ್ಲಕ್ಷ್ಯ ಮಾಡುವ ಶಾಲೆಗಳ ವಿರುದ್ಧ ಕಠಿಣ ಕ್ರಮ: ಸಚಿವ ಸುರೇಶ್ ಕುಮಾರ್

kalpa News by kalpa News
May 28, 2020
in Small Bytes, ರಾಷ್ಟ್ರೀಯ
0
ಮುಖ್ಯಮಂತ್ರಿಗಳೇ, ಚಾಮರಾಜನಗರವೂ ನಿಮ್ಮ ಆಡಳತದ ವ್ಯಾಪ್ತಿಯಲ್ಲಿದೆ ಎಂಬುದು ನೆನಪಿದೆಯೇ?

File Image

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಕನ್ನಡ ನೆಲದಲ್ಲಿ ನಡೆಯುವಂತಹ ಯಾವುದೇ ಶಾಲೆಯಾಗಿರಲಿ ಅಲ್ಲಿ ಕನ್ನಡ ಭಾಷೆಯ ಬೋಧನೆ ಕಡ್ಡಾಯವಾಗಿ ಆಗಲೇಬೇಕು. ಈ ಸಂಬಂಧದ ಕಡ್ಡಾಯ ಕನ್ನಡ ಕಲಿಕಾ ವಿಧೇಯಕ-2015ರ ಅನುಷ್ಠಾನಕ್ಕೆ ಅನಾದರ ಇಲ್ಲವೇ ನಿರ್ಲಕ್ಷ್ಯ ತೋರುವ ಶಿಕ್ಷಣಸಂಸ್ಥೆಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‍ಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಆಶ್ರಯದಲ್ಲಿ ಬುಧವಾರ ಕಡ್ಡಾಯ ಕನ್ನಡ ಕಲಿಕಾ ವಿಧೇಯಕ-2015ರ ಅನುಷ್ಠಾನದ ಪರಾಮಾರ್ಶೆ ಕುರಿತು ರಾಜ್ಯದ ಎಲ್ಲ ಡಿಡಿಪಿಐಗಳೊಂದಿಗೆ ನಡೆದ ವಿಡಿಯೋ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಇದಕ್ಕಾಗಿ 2015ರಲ್ಲಿ ಜಾರಿಗೆ ತರಲಾದ ಕನ್ನಡ ಕಲಿಕಾ ಕಾಯ್ದೆಯ ಕಟ್ಟುನಿಟ್ಟಿನ ಅನುಷ್ಠಾನಕ್ಕೆ ಶಿಕ್ಷಣ ಇಲಾಖೆ ಕಟಿಬದ್ಧವಾಗಿದೆ ಎಂದು ಹೇಳಿದರು.

ಈ ನೆಲದ ಕಾನೂನಿನ ಅನುಷ್ಠಾನದ ವಿಷಯದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಶಿಕ್ಷಣ ಇಲಾಖೆಯೊಂದಿಗೆ ನಿರ್ವಹಿಸುತ್ತಿರುವ ಸಮನ್ವಯ ಜವಾಬ್ದಾರಿ ನಿಜಕ್ಕೂ ಪ್ರೇರಣಾದಾಯಕ ಸಂಗತಿಯಾಗಿದೆ. ಈ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಮತ್ತು ಕನ್ನಡ ಅಭಿವೃದ್ಧಿ ಪ್ರಾಧಿಕಾರಗಳು ಜೋಡೆತ್ತಿನಂತೆ ಕೆಲಸ ಮಾಡಲಿವೆ ಎಂದರು.

ಕನ್ನಡ ನೆಲದಲ್ಲಿ ಓದುವ ಪ್ರತಿಯೊಂದು ಮಗುವೂ ಕನ್ನಡವನ್ನು ಕಲಿಯಬೇಕು. ಅರ್ಹ ಶಿಕ್ಷಕರು ಈ ಮಕ್ಕಳಿಗೆ ಕನ್ನಡ ಕಲಿಸಬೇಕು. ಇದನ್ನು ಕರ್ನಾಟಕದ ಎಲ್ಲ ಖಾಸಗಿ ಶಿಕ್ಷಣ ಸಂಸ್ಥೆಗಳು ಅರ್ಥೈಸಿಕೊಂಡು ಮಕ್ಕಳ ಹಿತದೃಷ್ಟಿಯಿಂದ ಸರ್ಕಾರದ ಈ ಕ್ರಮವನ್ನು ಬೆಂಬಲಿಸಬೇಕು ಎಂದರು.

ಸರ್ಕಾರಿ ಶಾಲೆಗಳ ಸಬಲೀಕರಣ ಕುರಿತಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವರದಿಯಂತೆ ನಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಲ್ಲೇ ಉಳಿಸಿಕೊಳ್ಳಲು ತಮ್ಮದೇ ಆದ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ. ಈಗ ಕೂಲಿ ಮಾಡಿ ಜೀವನ ಸಾಗಿಸುವವರೂ ಸಹ ತಮ್ಮ ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸಲು ಮುಂದಾಗಿದ್ದಾರೆ. ಅದಕ್ಕೆ ಅವರು ತಮ್ಮ ದುಡಿಮೆಯ ಶೇ. 40 ಭಾಗ ವೆಚ್ಚ ಮಾಡುತ್ತಿದ್ದಾರೆ. ಆದರೆ ಸರ್ಕಾರಿ ಶಾಲೆಗಳನ್ನೇ ಸಬಲೀಕರಣ ಮಾಡಿ ಖಾಸಗಿ ಶಾಲೆಗಳಿಗಿಂತ ಹೆಚ್ಚಿನ ಗುಣಮಟ್ಟವನ್ನು ಕಾಪಾಡಿಕೊಂಡರೆ ಅವರು ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸುವುದಕ್ಕೆ ಮುಂದಾದರೆ ಅವರೆಲ್ಲಾ ಖಾಸಗಿ ಶಾಲೆಗಳಿವೆ ವೆಚ್ಚ ಮಾಡುವ ಶೇ. 40 ಭಾಗ ಹಣವನ್ನು ತಮ್ಮ ಕುಟುಂಬದ ಅಭಿವೃದ್ಧಿಗೆ ವಿನಿಯೋಗಿಸಬಹುದಾಗಿದೆ ಎಂದರು.

1000 ಉಭಯ ಮಾಧ್ಯಮ ಶಾಲೆಗಳ ಪ್ರಾರಂಭ:
ಜಾಗತಿಕ ನಿರೀಕ್ಷೆಗೆ ತಕ್ಕಂತೆ ನಮ್ಮ ಸರ್ಕಾರಿ ಶಾಲೆ ಮಕ್ಕಳನ್ನು ತಯಾರು ಮಾಡಬೇಕು ಮತ್ತು ನಮ್ಮ ಸರ್ಕಾರಿ ಶಾಲೆಗಳನ್ನು ಸಬಲೀಕರಣಗೊಳಿಸಿ ಉಳಿಸಿ ಬೆಳೆಸುವ ಮಹೋನ್ನತ ಉದ್ದೇಶದಿಂದ ಈ ವರ್ಷದಿಂದಲೇ ರಾಜ್ಯದಲ್ಲಿ 1000 ‘ಉಭಯ ಮಾಧ್ಯಮ ಶಾಲೆ’ಗಳನ್ನು ಆರಂಭಿಸಲಾಗುವುದೆಂದು ಸಚಿವ ಎಸ್. ಸುರೇಶ್‍ ಕುಮಾರ್ ತಿಳಿಸಿದ್ದಾರೆ.

ನಮ್ಮ ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳಬೇಕಿದೆ, ಹಾಗೆಯೇ ಅವುಗಳ ಗುಣಮಟ್ಟ ಹೆಚ್ಚಿಸಿ ಸರ್ಕಾರಿ ಶಾಲೆ ಮಕ್ಕಳನ್ನು ಜಾಗತಿಕ ನಿರೀಕ್ಷೆಗೆ ತಕ್ಕಂತೆ ಬೆಳೆಸುವ ಉದ್ದೇಶದಿಂದ 1000 ಸರ್ಕಾರಿ ಶಾಲೆಗಳಲ್ಲಿ ಕನ್ನಡ ಮತ್ತು ಆಂಗ್ಲ ಮಾಧ್ಯಮಗಳೆರಡರಲ್ಲೂ ಬೋಧಿಸುವ ಉಭಯ ಮಾಧ್ಯಮ ಶಾಲೆಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಈ ಶಾಲೆಗಳಲ್ಲಿ ಬಳಸಲಾಗುವ ಪಠ್ಯಪುಸ್ತಕಗಳಲ್ಲಿ ಕನ್ನಡ ಮತ್ತು ಆಂಗ್ಲ ಮಾಧ್ಯಮಗಳೆರಡರಲ್ಲೂ ಪಠ್ಯಗಳು ಇರುತ್ತವೆ. ಹಾಗೆಯೇ ಎರಡೂ ಮಾಧ್ಯಮಗಳಲ್ಲೂ ಬೋಧಿಸಲಾಗುತ್ತದೆ. ಆ ಮೂಲಕ ನಮ್ಮ ಮಕ್ಕಳು ಉಭಯ ಮಾಧ್ಯಮಗಳಲ್ಲಿ ಕಲಿತು ಜಾಗತಿಕ ನಿರೀಕ್ಷೆಗೆ ತಕ್ಕಂತೆ ಬೆಳವಣಿಗೆ ಹೊಂದಲು ಎಲ್ಲ ರೀತಿಯ ಕ್ರಮಗಳನ್ನೂ ಕೈಗೊಳ್ಳಲಾಗುತ್ತದೆ ಹಾಗೂ ಸರ್ಕಾರಿ ಶಾಲೆಗಳನ್ನು ಸಬಲೀಕರಣಗೊಳಿಸುವಂತಹ ಇಂತಹ ಉಪಕ್ರಮಕ್ಕೆ ಸಾರ್ವಜನಿಕರ ಬೆಂಬಲ ಮತ್ತು ಸಹಕಾರದ ಅಗತ್ಯವಿದೆ ಎಂದು ಸಚಿವರು ತಿಳಿಸಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ, ಕಾರ್ಯದರ್ಶಿ ಡಾ. ಕೆ. ಮುರಳಿಧರ, ರಾಜ್ಯದ ಎಲ್ಲ ಜಿಲ್ಲೆಗಳ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಭಾಗವಹಿಸಿದ್ದರು.

Get in Touch With Us info@kalpa.news Whatsapp: 9481252093

Tags: Kannada SchoolKannadaNewsWebsiteLatestNewsKannadaMinister Suresh Kumarಕನ್ನಡಸಚಿವ ಎಸ್. ಸುರೇಶ್‍ಕುಮಾರ್ಸರ್ಕಾರಿ ಶಾಲೆ
Share225Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ದೇಶದಲ್ಲೇ ಮಾದರಿಯಾಗಲಿದೆ ನೆಹರೂ ಕ್ರೀಡಾಂಗಣ: ಸಂಸದ ಬಿ.ವೈ. ರಾಘವೇಂದ್ರ

Next Post

ರೈತರೇ ಗಾಬರಿಯಾಗಬೇಡಿ ಕರ್ನಾಟಕಕ್ಕೆ ಮಿಡತೆ ಹಾವಳಿ ಸಾಧ್ಯತೆ ತೀರಾ ಕಡಿಮೆ: ಸಚಿವ ಬಿ.ಸಿ.ಪಾಟೀಲ್

kalpa News

kalpa News

Next Post
ಕೃಷಿಕರಿಗೆ ಕ್ರೆಡಿಟ್ ಕಾರ್ಡ್ ನೀಡಿಕೆ: ಕೃಷಿ ಸಚಿವ ಬಿ.ಸಿ. ಪಾಟೀಲ್

ರೈತರೇ ಗಾಬರಿಯಾಗಬೇಡಿ ಕರ್ನಾಟಕಕ್ಕೆ ಮಿಡತೆ ಹಾವಳಿ ಸಾಧ್ಯತೆ ತೀರಾ ಕಡಿಮೆ: ಸಚಿವ ಬಿ.ಸಿ.ಪಾಟೀಲ್

Leave a Reply Cancel reply

Your email address will not be published. Required fields are marked *

No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL