No Result
View All Result
60% of Indians have received an invite to a dating app or site later found to be fake
English Articles

60% of Indians have received an invite to a dating app or site later found to be fake

by ಕಲ್ಪ ನ್ಯೂಸ್
February 12, 2026
0

Kalpa Media House  |  India | Today, McAfee released its annual Valentine’s Day research, revealing how fake profiles, AI‑assisted chats,...

Read moreDetails
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
Deeksha Brahmavara | A Divine Synergy of Artistic Excellence and Intellectual Brilliance

Deeksha Brahmavara | A Divine Synergy of Artistic Excellence and Intellectual Brilliance

February 10, 2026
ಬೇಸಿಗೆಯಲ್ಲಿ ಗಂಟಲು ಒಣಗುತ್ತಿದೆಯೇ? ಧ್ವನಿ ಗರಗರಿಸುತ್ತಿದೆಯೇ? ಹಾಗಾದರೆ ಹೀಗೆ ಮಾಡಿ | ತಜ್ಞರ ಸಲಹೆ

Stay Hydrated to Protect Your Voice This Summer: ENT Expert Advice

February 10, 2026
  • Advertise With Us
  • Grievances
  • About Us
  • Contact Us
Thursday, February 12, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಲಾಕ್ ಡೌನ್ ಹಿನ್ನೆಲೆಯಲ್ಲಿ ಮುಂಬೈ ಹೋಟೆಲ್ ಉದ್ಯಮದ ಭವಿತವ್ಯ ಭಯಾನಕವಾಗಲಿದೆಯೇ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 26, 2020
in Special Articles
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ತುಳುವರ ಮುಂಬೈ ವಲಸೆಗೆ ಸುಮಾರು ಎರಡು ಶತಮಾನಗಳ ಸುದೀರ್ಘ ಇತಿಹಾಸವಿದೆ. ಇಲ್ಲಿ ತುಳುವರು ಎಂದರೆ ದಕ್ಷಿಣದ ನೀಲೇಶ್ವರದಿಂದ ಉತ್ತರದ ಬೈಂದೂರಿನವರೆಗೆ ವ್ಯಾಪಿಸಿರುವ ವಿಶಾಲ ಪ್ರದೇಶದಲ್ಲಿ ವಾಸಿಸುವವರು ಎಂದು ಅರ್ಥೈಸಿಕೊಳ್ಳಬೇಕು. ಮಂಗಳೂರು, ಮಲ್ಪೆ, ಬಂದರುಗಳಿಂದ ಹಡಗಿನಲ್ಲಿ ಮುಂಬೈಗೆ ಬಂದ ಮೊದಲಿಗರು ಸಾಹಸಿಗಳಾದ ಮೊಗವೀರ ಬಂಧುಗಳು.

ಅನಂತರ ಅವರ ಮೂಲಕ ಅಥವಾ ಅವರನ್ನು ಅನುಸರಿಸಿ ಇತರ ಸಮುದಾಯದವರು ಮುಂಬೈಗೆ ವಲಸೆ ಬರತೊಡಗಿದರು. ಮೊಗವೀರರ ನಂತರ ಬಂದ ಗೌಡ ಸಾರಸ್ವತರು, ಬಂಟರು, ಬಿಲ್ಲವರು ಹಾಗೂ ಇನ್ನಿತರರು ಮುಂಬೈಯಲ್ಲಿ ಹೋಟೆಲು ಉದ್ಯಮಲ್ಲಿ ತೊಡಗಿಕೊಂಡರು. ದಕ್ಷಿಣ ಭಾರತೀಯ ಖಾದ್ಯಗಳಾದ ಉದ್ದಿನ (ಮೆಂದು) ವಡೆ, ಇಡ್ಲಿ ಸಾಂಬಾರ್, ದೋಸೆ, ಮಸಾಲೆ ದೋಸೆ, ಉತ್ತಪ್ಪ, ಮುಂತಾದ ಉಪಹಾರಗಳು, ರೈಸ್ ಪ್ಲೇಟ್ ಎನ್ನುವ ಊಟದ ಬಟ್ಟಲು (ತಾಲಿ)ಗಳು ಮುಖ್ಯವಾಗಿ ನಮ್ಮವರ ಹೋಟೆಲು ಉತ್ಪನ್ನಗಳಾಗಿದ್ದವು.

ಉಡುಪಿ ಹೋಟೆಲುಗಳ ಈ ಮಾದರಿಯ ಆಹಾರ ದೇಶದ ಮೂಲೆ ಮೂಲೆಗಳಿಂದ ಉದರ ಪೋಷಣೆಗಾಗಿ ಮುಂಬೈಗೆ ಬಂದಿದ್ದ, ಬರುತ್ತಿರುವ ವಲಸಿಗರಿಗೆ ರುಚಿಸಿತು. ಮುಂಬೈಗೆ ವಲಸಿಗರ ಸಂಖ್ಯೆ ಹೆಚ್ಚುತ್ತ ಹೋದಂತೆ ಉಪನಗರಗಳಲ್ಲಿ ಹೋಟೆಲ್ ಉದ್ಯಮದ ವಿಸ್ತರಣೆಯಾಯಿತು. ನಂಬಿಕಸ್ಥ ಹಾಗೂ ಪರಿಶ್ರಮಿ ಕೆಲಸದವರ ಅವಶ್ಯಕತೆ, ಪರೋಪಕಾರ, ಊರಿನಲ್ಲಿನ ಬಡತನ, ಶಿಕ್ಷಣ, ನಿರುದ್ಯೋಗ ಸಮಸ್ಯೆ ಮುಂತಾದ ಕಾರಣಗಳಿಂದ ವಲಸೆ ತೀವ್ರಗತಿಯಲ್ಲಾಯಿತು. ಭೂಸುಧಾರಣಾ ಕಾಯ್ದೆಯ ಕಾಲಘಟ್ಟದಲ್ಲಿ ವಲಸೆ ವೇಗೋತ್ಕರ್ಷವನ್ನು ಪಡೆಯಿತು. ವಲಸೆ ಹೆಚ್ಚಿದಂತೆ ತುಳುವರು ಮುಂಬೈಯ ನೆರೆಯ ಥಾಣೆ, ನವಿಮುಂಬೈ, ರಾಯ್ಘಡ್ ಜಿಲ್ಲೆಗಳಿಗೆ ತಮ್ಮ ಕಾರ್ಯಕ್ಷೇತ್ರವನ್ನು ವಿಸ್ತರಿಸಿದರು.

ಕಾಲ ಬದಲಾದಂತೆ, ಗಿರಾಕಿಗಳು ಮತ್ತು ಗಿರಾಕಿಗಳ ಅಭಿರುಚಿ ಬದಲಾದಂತೆ ಉಡುಪಿ ಹೋಟೆಲುಗಳು ಹಲವು ಸ್ತರಗಳ ಪಂಜಾಬಿ ಶೈಲಿ, ಬಿಯರ್ ಬಾರ್, ತಾರಾ ಹೋಟೇಲುಗಳಾಗಿ ಮಾರ್ಪಾಡು ಹೊಂದಿವೆ ಬೃಹತ್, ಮಧ್ಯಮ ಹಾಗೂ ಸಣ್ಣ ಪುಟ್ಟ ಕಂಪನಿಗಳ ಕ್ಯಾಂಟೀನ್ ವ್ಯವಹಾರಗಳೂ ಹೋಟೆಲು ಉದ್ಯಮದ ಒಂದು ಭಾಗವಾಗಿದೆ. ಗುರಿ ಮುಟ್ಟುವ ತನಕ ವಿಶ್ರಮಿಸದ, ಕಠಿಣ ಪರಿಶ್ರಮ, ನಾಯಕತ್ವ, ಶುಚಿ ರುಚಿ, ನೈರ್ಮಲ್ಯ, ಒಳಾಂಗಣ ಅಲಂಕಾರ, ವ್ಯವಹಾರಿಕ ಚತುರತೆ, ನಿರ್ಭಯತೆ ಮುಂತಾದ ಗುಣಗಳಿಂದ ತುಳುನಾಡಿನ ಹೋಟೆಲಿಗರು ’ಅಣ್ಣ’ ಎಂಬ ಅಭಿವಾದನಕ್ಕೆ ಪಾತ್ರರಾಗಿದ್ದಾರೆ.

ಮುಂಬೈಯಂಥ ಮಹಾನಗರಗಳ ಯಶಸ್ವೀ ಉದ್ಯಮಗಳಲ್ಲಿ ಹೋಟೆಲ್ ಉದ್ಯಮವೂ ಒಂದು. (ಪುಣೆ, ನಾಸಿಕ್, ಔರಂಗಾಬಾದ್ ಮುಂತಾದ ಜಿಲ್ಲೆಗಳ ಹೋಟೆಲು ಉದ್ಯಮವನ್ನೂ ಸೇರಿಸಿಕೊಂಡು) ಆದರೆ ಕೆಲವೊಮ್ಮೆ ಹೊರಗೆ ಕಾಣುವ ಕಥೆ ಬೇರೆ, ಒಳಗಿನ ವ್ಯಥೆಯೇ ಬೇರೆಯಾಗಿರುತ್ತದೆ. ಲೈಸೆನ್ಸ್‌ ರಾಜ್ ಎಂಬ ಕಪಿ ಮುಷ್ಠಿಯ ಕಾನೂನುಗಳು, ಹಲವಾರು ಅನುಮತಿ ಹಾಗೂ ನಿರಪೇಕ್ಷಣಾ ಪತ್ರಗಳು ಇತ್ಯಾದಿಗಳ ಒಳ ಸುಳಿಗಳೂ ಇವೆ.

ಒಂದು ಕಾಲದಲ್ಲಿ ರಾಜಕೀಯವಾಗಿ ಬಲಿತಿರದ ಶಿವಸೇನೆ ತುಳು ಕನ್ನಡಿಗರ ಹೋಟೆಲುಗಳಿಗೆ ಮುತ್ತಿಗೆ ಹಾಕಿ ಲೂಟಿ ಮಾಡಿದ ದಿನಗಳೂ ಇವೆ. ಬಹಳ ಸಮಯ ಭೂಗತ ದೊರೆಗಳ ಕಬಂಧ ಬಾಹುಗಳಿಗೆ ಸಿಕ್ಕಿ ನಲುಗಿದ ದಿನಗಳೂ ಇದ್ದವು. ಸ್ಥಳೀಯ ಗೂಂಡಾಗಳು, ರಾಜಕೀಯ ಪುಢಾರಿಗಳು, ಭ್ರಷ್ಟ ಅಧಿಕಾರಿಗಳ ಕಾಟಗಳೂ ಹೋಟೆಲು ಉದ್ಯಮವನ್ನು ಕಾಡುವುದೂ ಉಂಟು. ಜಾಗತೀಕರಣದಿಂದಾಗಿ ’ಮೆಕ್-ಡೊನಾಲ್ಡ್’, ’ಬರ್ಗರ-ಕಿಂಗ್’, ’ಕೆಎಫ್’ಸಿ’, ’ಡಾಮಿನೋಜ್’, ’ಪಿಜ್ಜಾಹಟ್’, ’ಒವೆನ್-ಸ್ಟೋರಿ’ ’ಜಂಬೋ-ಕಿಂಗ್’, ಮುಂತಾದ ಬಹುರಾಷ್ಟ್ರೀಯ ಆಹಾರ ಸಂಸ್ಥೆಗಳೂ ಲಗ್ಗೆಯಿಟ್ಟು ಅಲ್ಪಮಟ್ಟಿನ (ತಾತ್ಕಾಲಿಕ) ತೊಂದರೆಯನ್ನೂ ನೀಡುತ್ತಿವೆ. ’ಜೊಮ್ಯಾಟೋ’, ’ಸ್ವಿಗ್ಗಿ’ ಮುಂತಾದ ಸಂಸ್ಥೆಗಳು ’ಉಚಿತ ಮನೆಗೆ ವಿತರಣೆ’ ಮಾಡುವುದರಿಂದ ಪೈಪೋಟಿಯಂತೂ ಇರುವುದು ಸತ್ಯವೇ ಆಗಿದೆ.

ಲಾಕ್ ಡೌನ್ ಹಿನ್ನೆಲೆಯಲ್ಲಿ ಮುಂಬೈ ಹೋಟೆಲ್ ಉದ್ಯಮದ ಭವಿತವ್ಯ ಭಯಾನಕವಾಗಲಿದೆಯೇ? ಎಂಬ ಪ್ರಶ್ನೆಗೆ ಹಿರಿಯ ಉದ್ಯಮಿಗಳು, ಹೋಟೆಲ್ ಕಾರ್ಮಿಕರು, ಹೋಟೆಲ್ ಬಳಕೆದಾರರು, ವ್ಯವಹಾರ ತಜ್ಞರು ಹೌದು, ನಿಜ ಎಂಬ ಉತ್ತರಗಳನ್ನು ನೀಡುತ್ತಲ್ಲಿದ್ದಾರೆ. ಭಾರತ ಸರಕಾರ ಮತ್ತು ಮಹಾರಾಷ್ಟ್ರ ರಾಜ್ಯ ಸರಕಾರ ಮಾರ್ಚ್ ಮೂರನೇ ವಾರದಲ್ಲಿ ಯಾವುದೇ ಪೂರ್ವ ಸೂಚನೆ ಇಲ್ಲದೇ ನಿಂತ ನೆಲೆಯಲ್ಲಿ ಲಾಕ್ ಡೌನ್ ಘೋಷಿಸಿದಾಗಲೇ ಹೋಟೆಲಿಗರು ಬಹಳ ದೊಡ್ಡ ಮೊತ್ತದ ನಷ್ಟವನ್ನು ಅನುಭವಿಸಿದರು. ತಾರಾ ಮತ್ತು ಮಧ್ಯಮ ಮಟ್ಟದ ಹೋಟೆಲಿಗರು ಶೇಖರಿಸಿಟ್ಟಿದ್ದ ದೊಡ್ಡ ಪ್ರಮಾಣದ ಖಚ್ಚಾ ವಸ್ತುಗಳು ಹಾಳಾದವು. ಅವುಗಳಲ್ಲಿ ದುಬಾರಿಯಾಗಿರುವ ಪನ್ನೀರ್, ಆಡಿನ ಮಾಂಸ, ಕೋಳಿ ಮಾಂಸ, ಸಮುದ್ರ ಉತ್ಪನ್ನಗಳು, ನೀರುಳ್ಳಿ, ಬೆಳ್ಳುಳ್ಳಿ, ತರಕಾರಿಗಳು, ಬಿಯರ್, ತಂಪು ಪಾನೀಯ, ಹಾಲು ಇತ್ಯಾದಿ ಇತ್ಯಾದಿಗಳು. ಶೇಖರಣೆಯ ಅನುಪಾತ ಆಯಾ ಹೋಟೆಲಿನ ವ್ಯಾಪಾರ ಮತ್ತು ಶೇಖರಣೆಯ ಜಾಗದ ವ್ಯಾಪ್ತಿಯನ್ನು ಹೊಂದಿರಬಹುದು. ಆ ಪ್ರಕಾರದಲ್ಲಿ ಆಗಿರುವ ನಷ್ಟವನ್ನು ಅಂದಾಜಿಸಬಹುದು.

ಲಾಕ್ ಡೌನ್ ಆರಂಭವಾದ್ದಂದಿನಿಂದ ಹೊಟೇಲಿಗರು ದಿನವೊಂದಕ್ಕೆ ಹಲವು ಸಾವಿರಗಳಿಂದ ಲಕ್ಷಗಟ್ಟಲೆ ರೂಪಾಯಿಗಳ ನಷ್ಟ ಅನುಭವಿಸುತ್ತಿದ್ದಾರೆ. ಕಾರ್ಮಿಕರ ಸಂಬಳ, ಊಟ, ವಸತಿ, ಔಷದೋಪಚಾರ, ನೀರು, ವಿದ್ಯುತ್ ಶುಲ್ಕ, ಸಾಲದ ಕಂತುಗಳು, ಬಡ್ಡಿ, ಲೈಸೆನ್ಸ್‌ ಶುಲ್ಕ, ಬಾಡಿಗೆ ಇತ್ಯಾದಿಗಳು ಲಾಕ್ ಡೌನಲ್ಲಿ ನಿಂತಿಲ್ಲ. ಅವುಗಳು ರಾಕೆಟ್ ವೇಗದಲ್ಲಿ ತಿರುಗುತಿವೆ. ಕಾರ್ಮಿಕರು ಮೈಮನಗಳಿಗೆ ಕೆಲಸವಿಲ್ಲದೆ ನಲುಗಿದ್ದಾರೆ. ಕೆಲವರು ಊರಿನ ಹಾದಿ ಹಿಡಿದಿದ್ದಾರೆ. ಉಳಿದವರನ್ನು ಉಳಿಸಿಕೊಂಡರೂ ಉಪಯೋಗವಿಲ್ಲ. ಏಕೆಂದರೆ ಲಾಕ್ ಡೌನ್ ಈಗಾಗಲೇ ನಾಲ್ಕು ಬಾರಿ ವಿಸ್ತರಿಸಲ್ಪಟ್ಟಿದೆ. ಮಹಾರಾಷ್ಟ್ರ ಹಾಗೂ ಮುಂಬೈಯಲ್ಲಿ ಕೋರೋನ ರೋಗಿಗಳ ಸಂಖ್ಯೆಯೂ ದಿನದಿಂದ ದಿನಕ್ಕೆ ಹೆಚ್ಚುತ್ತ ಹೋಗುತ್ತಿದೆ. ಬೇಗನೆ ಹೋಟೆಲು ಪುನರಾರಂಭಗೊಳ್ಳುವ ಸೂಚನೆ ಕಂಡು ಬರುತ್ತಿಲ್ಲ. ಪುನರಾರಂಭಗೊಂಡರೂ ಸರಕಾರ ಯಾವ ತೆರನಾದ ನಿಯಮಗಳನ್ನು ಜಾರಿಗೊಳಿಸಬಹುದು ಎಂದು ಊಹಿಸುವುದೂ ಕಷ್ಟ. ಹಾಗಿರುವಾಗ ಮೇಲೆ ಕೇಳಿದ ಪ್ರಶ್ನೆಗೆ ಉತ್ತರವಾಗಿ ಹೋಟೆಲ್ ಉದ್ಯಮದ ಭವಿಷ್ಯ ಪ್ರಕಾಶಮಾನವಾಗಿ ಇಲ್ಲ ಎಂಬುದು ವೇದ್ಯವಾಗುತ್ತದೆ.

ತಜ್ಞರ ಸಲಹೆಗಳು
ಮಹಾನಗರಗಳಲ್ಲಿ ಹೋಟೆಲ್ ಉದ್ಯಮ ಪುನರಾರಂಭಗೊಂಡಾಗ ಮಾಲಕರು ಐವತ್ತು ಪ್ರತಿಶತ ಕಾರ್ಮಿಕರಿಂದ ಕಾರ್ಯನಿರ್ವಹಿಸಬೇಕು. ಮಾರುಕಟ್ಟೆಯ ವ್ಯವಹಾರಗಳನ್ನು ಮಾಲಕರು ಸ್ವತಃ ಮಾಡುವುದು ಅತ್ಯಂತ ಅಗತ್ಯ. ಎಲ್ಲ ಕ್ಷೇತ್ರಗಳಲ್ಲೂ ಹೆಚ್ಚುವರಿ ವೆಚ್ಚ ವನ್ನು ಸಂಪೂರ್ಣ ನಿಲ್ಲಿಸಬೇಕು. ಪ್ರತಿಯೊಂದರಲ್ಲೂ ವೆಚ್ಚ ಕಡಿತ ಮಾಡುವುದು ಅನಿವಾರ್ಯ ಆಗಬೇಕು. ಅನಿಲ ಇಂಧನ, ವಿದ್ಯುತ್ ಮೀಟರ್, ಮಾರಾಟದ ಲೆಕ್ಕವನ್ನು ಮಾಲಕರು ಸ್ವತಃ ಪರಿಶೀಲಿಸುವ ಅಗತ್ಯವಿದೆ. ಈ ಎಲ್ಲ ಮುನ್ನೆಚ್ಚರಿಕೆ ವಹಿಸಿಕೊಂಡು ವ್ಯಾಪಾರ ಮಾಡಿದರೂ ಆಗಿರುವ ನಷ್ಟವನ್ನು ಸರಿದೂಗಿಸಲು ಕನಿಷ್ಠ ಎರಡು ವರ್ಷಗಳಾದರೂ ಬೇಕಾದಿತು.

ತುಳುನಾಡಿನಲ್ಲಿ ಪ್ರತಿಫಲನ
ಹಿಂದಿನಿಂದಲೂ ತುಳುನಾಡನ್ನು ಪೋಷಿಸುತ್ತ ಬಂದಿರುವುದು ಮುಂಬೈ ಹೋಟೆಲ್ ಉದ್ಯಮ. ಹೋಟೆಲಿಗರು ತಮ್ಮ ಮನೆ, ಮನೆತನವನ್ನು ಸಲಹುವುತ್ತ ಬಂದಿದ್ದಾರೆ. ಊರು, ಗ್ರಾಮ, ಮಾಗಣೆಯ ದೈವ – ದೇವರ ಗುಡಿ ಗೋಪುರಗಳ ಜೀರ್ಣೋದ್ಧಾರ, ಬಹ್ಮಕಳಶ, ಬ್ರಹ್ಮಮಂಡಲ, ನಾಗಮಂಡಲ, ಸಮುದಾಯ ಭವನ, ವಾರ್ಷಿಕೋತ್ಸವ, ರಾಜಕೀಯ ಪುಢಾರಿಗಳಿಗೆ ನೆರವು ಇತ್ಯಾದಿಗಳಿಗೆ ನೇರವಾಗಿ ಮುಂಬೈ ಹೋಟೆಲು ಉದ್ಯಮ ಕಾರಣವಾಗಿತ್ತು. ಈಗ ಇಲ್ಲಿಯ ಪರಿಸ್ಥಿತಿ ಹೀಗಾಗಿರುವಾಗ ತುಳುನಾಡಿನ ಆರ್ಥಿಕ ಪರಿಸ್ಥಿತಿ ಕನಿಷ್ಠ ಮೂರು ವರ್ಷಗಳಷ್ಟು ಹಿಂದೆ ಸರಿಯಿತು. ಮುಂಬೈಯ ಜಣ ಜಣ ಕಾಂಚನ ಊರಿಗಿಳಿಯದೇ ನಾಗಮಂಡಲ, ಬ್ರಹ್ಮಕಲಶ, ನವೀಕರಣ, ನೇಮ ಕೋಲ, ಅಂಕ ಆಯನಗಳೂ ಸೊರಗಬಹುದು ಅಥವಾ ನಿಲ್ಲಬಹುದು. ಊರಿನಲ್ಲಿ ಎಪ್ರಿಲ್’ನಿಂದ ಜೂನ್’ತನಕ ಮುಂಬೈಗರಿಂದ ನಡೆಯುತ್ತಿದ್ದ ವ್ಯಾಪಾರ ವ್ಯವಹಾರ ನೆಲಕಚ್ಚಬಹುದು. ನಿಶ್ಚಯ, ಮೇಹಂದಿ, ಸಂಗೀತ, ಮದುವೆ, ಆರತಕ್ಷತೆಗಳು ಕಳೆಗುಂದಿ (ಪೇಲವವಾಗಿ) ಸರಳವಾಗಿ ನಡೆಯಬಹುದು.


Get in Touch With Us info@kalpa.news Whatsapp: 9481252093

Tags: China HotelsCorona LockDownGSB HotelHotels in MumbaiKannadaNewsWebsiteLatestNewsKannadaMumbaiSouth KendraTulu Naduತುಳುನಾಡುಮುಂಬೈಮುಂಬೈ ಹೋಟೆಲು ಉದ್ಯಮಲಾಕ್ ಡೌನ್
Share221Tweet123Send
Previous Post

ಜಿಲ್ಲೆಯಲ್ಲೇ ಮೊದಲು: ಮಂಡ್ಲಿ ಬಳಿ ನಿರ್ಮಾಣವಾಗಲಿದೆ ರಾಕ್ ಕ್ಲೈಂಬಿಂಗ್, ಜಿಪ್ ಲೈನಿಂಗ್

Next Post

ಪ್ರೀಮಿಯಂ ವಾಪಸು ಬರದಿದ್ದರೂ ಆರೋಗ್ಯ ವಿಮೆ ಏಕೆ ಬೇಕು? ಅದರ ಅಗತ್ಯ-ಅನಿವಾರ್ಯತೆ ಏನಿದೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪ್ರೀಮಿಯಂ ವಾಪಸು ಬರದಿದ್ದರೂ ಆರೋಗ್ಯ ವಿಮೆ ಏಕೆ ಬೇಕು? ಅದರ ಅಗತ್ಯ-ಅನಿವಾರ್ಯತೆ ಏನಿದೆ?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಸಂಕ್ರಾಂತಿ ಹಬ್ಬದ ಪ್ರಯುಕ್ತ ಮೈಸೂರು – ಟುಟಿಕೊರಿನ್ ನಡುವೆ ಎರಡು ವಿಶೇಷ ರೈಲುಗಳು

ಮಹಾಶಿವರಾತ್ರಿ | ಯಶವಂತಪುರ – ಕಲಬುರಗಿ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು ಸಂಚಾರ

February 12, 2026
ಈ ದಿನಗಳು ಬೆಂಗಳೂರು-ಶಿವಮೊಗ್ಗ ಜನಶತಾಬ್ದಿ, ತುಮಕೂರು ಎಕ್ಸ್’ಪ್ರೆಸ್ ರೈಲುಗಳು ರದ್ದು

ಈ ದಿನಗಳು ಬೆಂಗಳೂರು-ಶಿವಮೊಗ್ಗ ಜನಶತಾಬ್ದಿ, ತುಮಕೂರು ಎಕ್ಸ್’ಪ್ರೆಸ್ ರೈಲುಗಳು ರದ್ದು

February 12, 2026
ಮಹಾ ಶಿವರಾತ್ರಿ | ಫೆ.15 ರಂದು ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ವಿಶೇಷ ಪೂಜೆ

ಮಹಾ ಶಿವರಾತ್ರಿ | ಫೆ.15 ರಂದು ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ವಿಶೇಷ ಪೂಜೆ

February 12, 2026
ಕಂಪ್ಲಿ ಉತ್ಸವ | ವೈಭವದ ತುಂಗಾರತಿ | 18 ವೇದಿಕೆಗಳಲ್ಲಿ ಭರತನಾಟ್ಯ ಪ್ರದರ್ಶನ

ಕಂಪ್ಲಿ ಉತ್ಸವ | ವೈಭವದ ತುಂಗಾರತಿ | 18 ವೇದಿಕೆಗಳಲ್ಲಿ ಭರತನಾಟ್ಯ ಪ್ರದರ್ಶನ

February 12, 2026
ಧಾರವಾಡ | ನೂತನ ಜಿಲ್ಲಾಧಿಕಾರಿಯಾಗಿ ಸ್ನೇಹಲ್ ಅಧಿಕಾರ ಸ್ವೀಕಾರ

ಧಾರವಾಡ | ನೂತನ ಜಿಲ್ಲಾಧಿಕಾರಿಯಾಗಿ ಸ್ನೇಹಲ್ ಅಧಿಕಾರ ಸ್ವೀಕಾರ

February 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL