ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ದೇಶ ವಿದೇಶಗಳಲ್ಲಿ ಭರ್ಜರಿ ಯಶಸ್ಸು ಕಂಡ ಉರಿ ಸಿದ್ದವಾಗಲಿದ್ದು, ಡಿ ಬಾಸ್ ದರ್ಶನ್ ಇದರಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಹೌದು.. ನಿರ್ಮಾಪಕ ಮುನಿರತ್ನ ಈ ಪ್ರಯತ್ನಕ್ಕೆ ಮುಂದಾಗಿದ್ದು, ಚಿತ್ರದಲ್ಲಿ ಅಭಿನಂದನ್ ಪಾತ್ರವನ್ನು ದರ್ಶನ್ ಮಾಡಲಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಈಗಾಗಲೇ ದರ್ಶನ್ ಅವರ ಜೊತೆಯಲ್ಲಿ ಮಾತನಾಡಿದ್ದೇನೆ. ಅವರು ಪೌರಾಣಿಕ, ಸಾಮಾಜಿಕ ಸೇರಿದಂತೆ ಅವರು ಎಲ್ಲ ತರಹದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಆದರೆ ಅವರನ್ನೊಬ್ಬ ಸೈನಿಕನನ್ನಾಗಿ ನೋಡಬೇಕೆಂಬ ಆಸೆ ಇದೆ. ಇದಕ್ಕಾಗಿ ಈ ಪ್ರಯತ್ನ ಎಂದಿದ್ದಾರೆ.
ಈ ಚಿತ್ರ ಅಭಿನಂದನ್ ಜೀವನಾಧಾರಿತವೋ ಅಲ್ಲ ಪ್ರೇರಣೆಯಿಂದ ನಿರ್ಮಿಸುತ್ತಿರುವುದೋ ಎಂದು ಮುಂದಿನ ದಿನಗಳಲ್ಲಿ ತಿಳಿಸಲಿದ್ದೇನೆ. ಆದರೆ ಈ ಚಿತ್ರದಲ್ಲಿ ದರ್ಶನ್ ಅವರ ಪಾತ್ರದ ಹೆಸರು ಮಾತ್ರ ವಿಂಗ್ ಕಮಾಂಡರ್ ಅಭಿನಂದನ್ ಎಂದೇ ಇರುತ್ತದೆ ಎಂದಿದ್ದಾರೆ.
Get in Touch With Us info@kalpa.news Whatsapp: 9481252093
Discussion about this post