No Result
View All Result
MODEL DEMOCRACY AT KRCS
English Articles

Model Democracy At KRCS | Student Council Election Concluded Successfully

by ಕಲ್ಪ ನ್ಯೂಸ್
June 22, 2026
0

Kalpa Media House  |  Shikaripura  | Kumadvathi Residential Central School (KRCS) conducted its Student Council Election for the academic year...

Read moreDetails
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Periodicity of Bhubaneswar–Yesvantpur Special Train Extended

June 19, 2026
Blood Donation Camp Successfully Organised at Mysuru Division

Blood Donation Camp Successfully Organised at Mysuru Division

June 16, 2026
  • Advertise With Us
  • Grievances
  • About Us
  • Contact Us
Tuesday, June 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ಯಡಿಯೂರಪ್ಪನವರಿಗೆ ಸಿಎಂ ಆಗಲು ಇರುವ ಆಸಕ್ತಿ, ರೈತರ ಬಗ್ಗೆ ಇಲ್ಲ: ಸಿಎಂ ಎಚ್’ಡಿಕೆ ಕಿಡಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 18, 2019
in ಶಿಕಾರಿಪುರ
0
ಯಡಿಯೂರಪ್ಪನವರಿಗೆ ಸಿಎಂ ಆಗಲು ಇರುವ ಆಸಕ್ತಿ, ರೈತರ ಬಗ್ಗೆ ಇಲ್ಲ: ಸಿಎಂ ಎಚ್’ಡಿಕೆ ಕಿಡಿ
Share on FacebookShare on TwitterShare on WhatsApp

ಶಿಕಾರಿಪುರ: ತಾಲೂಕಿನ ಶಾಶ್ವತ ನೀರಾವರಿ ಯೋಜನೆ ಜಾರಿಗಾಗಿ ಎಂದಿಗೂ ಯಡಿಯೂರಪ್ಪನವರು ನನ್ನ ಬಳಿ ಬರಲಿಲ್ಲ, ಸಚಿವ ಡಿ.ಕೆ. ಶಿವಕಮಾರ್ ಮನೆಗೆ ತೆರಳಿದ್ದು ನೀರಾವರಿ ಯೋಜನೆ ಜಾರಿಗಾಗಿ ಮನವಿ ಸಲ್ಲಿಸಲು ಅಲ್ಲ. ಅವರ ಬಳಿ ಇದ್ದ ಡೈರಿಯನ್ನು ಬಿಡುಗಡೆ ಮಾಡದಂತೆ ಮನವಿ ಸಲ್ಲಿಸಲು ತೆರಳಿದ್ದರು ಎಂದು ರಾಜ್ಯದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಪಟ್ಟಣದ ನರಸಪ್ಪ ಬಯಲು ರಂಗಮಂದಿರದಲ್ಲಿ ಮೈತ್ರಿ ಕೂಟದ ಅಭ್ಯರ್ಥಿ ಮಧು ಬಂಗಾರಪ್ಪ ಪರವಾಗಿ ನಡೆದ ಬೃಹತ್ ಬಹಿರಂಗ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದಿನ ನಿತ್ಯ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸಿ ಪತನಗೊಳಿಸಿ ಪುನಃ ಮುಖ್ಯಮಂತ್ರಿಯಾಗಲು ಹೆಚ್ಚಿನ ಆಸಕ್ತಿಯನ್ನು ಹೊಂದಿರುವ ಯಡಿಯೂರಪ್ಪನವರಿಗೆ ತಾಲೂಕಿನ ಜನತೆಯ ರೈತರ ಪರವಾಗಿ ಕೆಲಸ ಮಾಡಲು ಸಮಯವಿಲ್ಲವಾಗಿದೆ ಎಂದು ಆರೋಪಿಸಿದರು.


ಮುಂಬೈನಲ್ಲಿ ದೊಡ್ಡ ಹೋಟೆಲ್ ಬುಕ್ ಮಾಡಿ ಶಾಸಕರನ್ನು ಕರೆದುಕೊಂಡು ಹೋಗಿ ಖರೀದಿಸಲು ಸಮಯದ ಅಭಾವವಾಗಿದ್ದು ಇನ್ನು ತಾಲೂಕಿನ ನೀರಾವರಿ ಬಗ್ಗೆ ಯೋಚಿಸಲು ಸಮಯ ಎಲ್ಲಿ ಇತ್ತು ಎಂದು ವ್ಯಂಗ್ಯವಾಡಿದ ಅವರು, ವಿಧಾನಸಭೆಯಲ್ಲಿ ತಂದೆ ದೇವೇಗೌಡ ಹಾಗೂ ಕುಟುಂಬದ ತೇಜೋವಧೆಗಾಗಿ ಬಳಸಿದ ಪದವನ್ನು ಜನತೆ ಒಪ್ಪಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಮುಖ್ಯಮಂತ್ರಿಯಾಗಿ ಹಸಿರು ಶಾಲು ಹೊದ್ದು ಪ್ರಮಾಣ ವಚನ ಸ್ವೀಕರಿಸಿದ ಕೂಡಲೇ ಗೊಬ್ಬರಕ್ಕಾಗಿ ರೈತರ ಮೇಲೆ ಗುಂಡು ಹಾರಿಸಿದ ಯಡಿಯೂರಪ್ಪ ಜಿಲ್ಲೆಯ ಅಭಿವೃದ್ದಿ ನೆಪದಲ್ಲಿ ಸರ್ಕಾರದ ಹಣ ಲೂಟಿ ಮಾಡಿದ್ದಾರೆ. ಮಂಡ್ಯದಲ್ಲಿ ನಿಖಿಲ್ ಗೆಲ್ಲಿಸಲು ಸರ್ಕಾರದ ಖಜಾನೆ ಖಾಲಿಯಾಗಿಸಲಾಗಿದೆ ಎಂದು ಆರೋಪಿಸುವ ಯಡಿಯೂರಪ್ಪನವರೇ ಖಜಾನೆ ಭದ್ರವಾಗಿ ಆತಂಕ ಬೇಡ ಎಂದು ಕುಟುಕಿದರು.

ಅಧಿಕಾರ ದೊರೆತ 24 ಗಂಟೆಗಳಲ್ಲಿ ರೈತರ ಸಾಲ ಮನ್ನಾಗೊಳಿಸುವ ವಾಗ್ದಾನದ ರೀತಿ ಈಗಾಗಲೇ 11 ತಿಂಗಳಲ್ಲಿ 11 ಸಾವಿರ ಕೋಟಿ ಮನ್ನಾಗೊಳಿಸಿದ್ದು, ಜನತೆಯ ತೆರಿಗೆ ಹಣದಿಂದ ಹಂತಹಂತವಾಗಿ ಅವಧಿ ಪೂರ್ಣವಾಗುವ ವೇಳೆಗೆ ಪೂರ್ಣ ಸಾಲಮನ್ನಾಗೊಳಿಸುವುದಾಗಿ ತಿಳಿಸಿದರು. ಸರ್ಕಾರ ರೈತರ ಸಾಲಮನ್ನಾಕ್ಕೆ ಮಾತ್ರ ಸೀಮಿತವಾಗಿಲ್ಲ, ಪ್ರತಿ ಕುಟುಂಬಕ್ಕೆ ಆರ್ಥಿಕ ಶಕ್ತಿ ತುಂಬಬೇಕು ಎಂಬ ಗುರಿ ಹೊಂದಿದೆ. ಈ ದಿಸೆಯಲ್ಲಿ ಹಲವು ಯೋಜನೆ ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು.

ಸತತ 3 ವರ್ಷ ಮುಖ್ಯಮಂತ್ರಿಯಾದ ಅವಧಿಯಲ್ಲಿ ತಾಲೂಕು ಜಿಲ್ಲೆಯ ನೀರಾವರಿ ಯೋಜನೆ ಬಗ್ಗೆ ಕ್ರಮ ಕೈಗೊಳ್ಳದೆ, ನಂತರದಲ್ಲಿ ಕೇಂದ್ರ ಸಚಿವ ಗಡ್ಕರಿ ಜತೆ ಚರ್ಚಿಸಿ ಒಪ್ಪಿಸಲಾಗಿದೆ ಎನ್ನಲು ಅವರೇನು ಹಣ ನೀಡುತ್ತಾರಾ ರಾಜ್ಯದ ಮುಖ್ಯಮಂತ್ರಿ ಆರ್ಥಿಕ ಸಚಿವ ನಾನು. ನೀರಾವರಿಗೆ ರಾಜ್ಯ ಸರ್ಕಾರ ಹಣ ನೀಡಬೇಕು ಸಚಿವ ಡಿಕೆಶಿ ಮನೆಗೆ ಯಡಿಯೂರಪ್ಪ ಹೋಗಿದ್ದು ಡೈರಿ ಬಗ್ಗೆ ಪ್ರಸ್ಥಾಪಿಸಿ ಬಿಡುಗಡೆಗೊಳಿಸದಂತೆ ಮನವಿ ಸಲ್ಲಿಸಲು ಮಾತ್ರ ಎಂದು ತಿಳಿಸಿದರು.

ತಾಲೂಕಿನ ಸಮಗ್ರ ನೀರಾವರಿ ಯೋಜನೆಗೆ ಅಭ್ಯರ್ಥಿ ಮಧು ಹಾಗೂ ಸ್ಥಳೀಯ ಜೆಡಿಎಸ್, ಕಾಂಗ್ರೆಸ್, ರೈತ ಮುಖಂಡರ ಒತ್ತಡ ಮುಖ್ಯ ಕಾರಣವಾಗಿದ್ದು 6-8 ತಿಂಗಳಲ್ಲಿ ಯೋಜನೆ ಪೂರ್ಣಗೊಳಿಸುವುದಾಗಿ ಭರವಸೆ ನೀಡಿದ ಅವರು, ಪದೇಪದೇ ಚುನಾವಣಾ ಫಲಿತಾಂಶದ ನಂತರ ರಾಜ್ಯ ಸರ್ಕಾರ ಪತನಗೊಳ್ಳಲಿದೆ. ಮೇ 24 ನಂತರ ಮುಖ್ಯಮಂತ್ರಿಯಾಗುವೆ ಎಂದು ಹಗಲು ಕನಸು ಕಾಣಲು ಯಾವ ಜ್ಯೋತಿಷಿ ಹೇಳಿದ್ದಾರೆ ಎಂದು ಪ್ರಶ್ನಿಸಿದರು. ಅವರಿಗೆ ಅಧಿಕಾರ ಮುಂಬೈ ದೆಹಲಿಯಲ್ಲಿ ಹೋಟೆಲ್ ಇಂಜಿನಿಯರ್ ಕಾಲೇಜು ನಿರ್ಮಿಸಲು ನಮಗೆ ಬಡವರ ಹಿಂದುಳಿದವರ ಅಭಿವೃದ್ದಿಗಾಗಿ ಮಾತ್ರ ಎಂದು ತಿಳಿಸಿದರು.


ಬೀದಿ ಬದಿ ಸಣ್ಣ ಸಣ್ಣ ಹಣ್ಣು ಹೂವು ವ್ಯಾಪಾರಿಗಳಿಗೆ 10 ಸಾವಿರದವರೆಗೆ ಬಡ್ಡಿ, ಜಾಮೀನು ರಹಿತ ಸಾಲ ನೀಡುವ ಯೋಜನೆ ಜಾರಿಗೊಳಿಸಿದ್ದು, 60 ವರ್ಷ ಮೀರಿದ ಹಿರಿಯರಿಗೆ ಮಾಸಿಕ 2 ಸಾವಿರದಿಂದ 5 ಸಾವಿರ ರೂ. ಮಾಸಾಶನ ಹೆಚ್ಚಳಗೊಳಿಸಲಾಗಿದೆ ಎಂದು ತಿಳಿಸಿದರು.

ಅಭ್ಯರ್ಥಿ ಮಧು ಬಂಗಾರಪ್ಪ ಮಾತನಾಡಿ, ಕಳೆದ ಉಪಚುನಾವಣೆಯಲ್ಲಿ ಬಿಜೆಪಿ ಅಂತರ 52 ಸಾವಿರಕ್ಕೆ ಕುಗ್ಗಲು ಕಾರಣಕರ್ತರಾದ ತಾಲೂಕು ಜಿಲ್ಲೆಯ ಜನತೆಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು. ಆಮದು ಅಭ್ಯರ್ಥಿ ಎಂದು ಟೀಕಿಸುವ ಬಿಜೆಪಿಗೆ ಈ ಬಾರಿ ರಾಘವೇಂದ್ರರನ್ನು ರಫ್ತು ಮಾಡಲು ಮತದಾರರು ಸಿದ್ದರಾಗಿದ್ದಾರೆ. ಬರಗಾಲದಲ್ಲಿ ಬಂಗಾರಪ್ಪ ನೀಡಿದ ಅಕ್ಕಿ ಗೊಬ್ಬರದ ಋಣ ಮರೆಯದೆ ತಾಲೂಕಿನ ಜನತೆ ಶಕ್ತಿ ನೀಡಿದ್ದಾರೆ ಪುಕ್ಕಟೆ ವಿದ್ಯುತ್ ಉಪಯೋಗ ಯಡಿಯೂರಪ್ಪ ಪಡೆದಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಿಪ ಸದಸ್ಯ ಪ್ರಸನ್ನಕುಮಾರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸುಂದರೇಶ್, ಮುಖಂಡ ತೀ.ನಾ ಶ್ರೀನಿವಾಸ್, ಬಿ.ಎನ್. ಮಹಾಲಿಂಗಪ್ಪ, ಮಂಜುನಾಥಗೌಡ, ಎಚ್.ಟಿ. ಬಳಿಗಾರ್, ನಗರದ ಮಹಾದೇವಪ್ಪ, ಗೋಣಿ ಮಾಲತೇಶ, ಮಹೇಶ್ ಹುಲ್ಮಾರ್, ನರಸಿಂಗನಾಯ್ಕ, ದರ್ಶನ್ ಉಳ್ಳಿ ಮತ್ತಿತರರು ಉಪಸ್ಥಿತರಿದ್ದರು.

(ವರದಿ: ರಾಜಾರಾವ್ ಜಾಧವ್, ಪ್ರತಿನಿಧಿ, ಶಿಕಾರಿಪುರ)

Tags: CM H D KumaraswamyKannada NewsLok Sabha election 2019Malnad NewsShikaripuraಎಚ್.ಡಿ. ಕುಮಾರಸ್ವಾಮಿಡಿ.ಕೆ. ಶಿವಕಮಾರ್ಬಿ.ಎಸ್. ಯಡಿಯೂರಪ್ಪಮಧು ಬಂಗಾರಪ್ಪಲೋಕಸಭಾ ಚುನಾವಣೆ-2019ಶಿಕಾರಿಪುರ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಲ್ಪ ನ್ಯೂಸ್ ‘ಲೋಕಾ’ಯಾತ್ರೆ: ಬೈಂದೂರಿನ ಕಡಲತೀರದ ಮಂದಿ ಯಾರಿಗೆ ಒಲಿಯಲಿದ್ದಾರೆ ಗೊತ್ತಾ?

Next Post

ರಬ್ಬರ್ ಸ್ಟಾಂಪ್ ಪ್ರಧಾನಿ ಸಿಂಗ್ ಹೆಸರು ಹೇಳಲು ಕಾಂಗ್ರೆಸ್’ಗೆ ಸಾಧ್ಯವಿಲ್ಲ: ಬಿಎಸ್’ವೈ ಕಟಕಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರಬ್ಬರ್ ಸ್ಟಾಂಪ್ ಪ್ರಧಾನಿ ಸಿಂಗ್ ಹೆಸರು ಹೇಳಲು ಕಾಂಗ್ರೆಸ್’ಗೆ ಸಾಧ್ಯವಿಲ್ಲ: ಬಿಎಸ್’ವೈ ಕಟಕಿ

ರಬ್ಬರ್ ಸ್ಟಾಂಪ್ ಪ್ರಧಾನಿ ಸಿಂಗ್ ಹೆಸರು ಹೇಳಲು ಕಾಂಗ್ರೆಸ್’ಗೆ ಸಾಧ್ಯವಿಲ್ಲ: ಬಿಎಸ್’ವೈ ಕಟಕಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ಮನೆಯಲ್ಲಿ ಮಲಗಿದ್ದಾಗಲೇ ಕಳ್ಳತನಕ್ಕೆ ಯತ್ನ | ಸಿಸಿಟಿವಿ ಒಡೆದು ಬಾಗಿಲು ಮುರಿಯಲು ಯತ್ನ

June 23, 2026
Veera Kathakara Sambhrama

ಸುಷ್ಮಾ ವೀರ್ ಸಾರಥ್ಯದಲ್ಲಿ “ವೀರ ರಂಗ ಸಂಭ್ರಮ K5” | ಕಂಬಾರರ ಗೀತೆಗೆ ಹೊಸ ಜೀವ

June 23, 2026
ಅರ್ಥಗರ್ಭಿತ ಮಹಿಳಾ ದಿನಾಚರಣೆ: ಎಸ್‌ಪಿ ನಿಖಿಲ್ ಸಂತಸ

ಶಿವಮೊಗ್ಗ | ಸುತ್ತುಕೋಟೆ ಕೊಲೆ ಪ್ರಕರಣ, ಎಸ್ಪಿ ನಿಖಿಲ್ ಹೇಳಿದ್ದೇನು?

June 23, 2026
RPF Mysuru Division Rescues Two Runaway Children

ನೈರುತ್ಯ ರೈಲ್ವೆ ಪ್ರಯಾಣಿಕರ ಜಾಗೃತಿ ಅಭಿಯಾನ: ಓಡಿಹೋದ ಇಬ್ಬರು ಮಕ್ಕಳನ್ನು ರಕ್ಷಿಸಿದ RPF

June 23, 2026
ಮಾನಸಿಕ ಒತ್ತಡ ಕಡಿಮೆ ಮಾಡಲು ಯೋಗ ಸಹಕಾರಿ | ಪ್ರಾಚಾರ್ಯ ವಿಶ್ವನಾಥ್ ಅಭಿಮತ

ಮಾನಸಿಕ ಒತ್ತಡ ಕಡಿಮೆ ಮಾಡಲು ಯೋಗ ಸಹಕಾರಿ | ಪ್ರಾಚಾರ್ಯ ವಿಶ್ವನಾಥ್ ಅಭಿಮತ

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL