No Result
View All Result
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್
English Articles

LinkedIn shares Bengaluru’s Top Companies for career growth in 2026

by ಕಲ್ಪ ನ್ಯೂಸ್
May 20, 2026
0

Kalpa Media House  |  India | LinkedIn, the world's largest professional network, today unveiled its 2026 Top Companies list for...

Read moreDetails
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
Ashwini Vaishnaw Flags Off Bengaluru–Mumbai Express; Announces Vande Bharat Sleeper Soon

Ashwini Vaishnaw Flags Off Bengaluru–Mumbai Express; Announces Vande Bharat Sleeper Soon

May 18, 2026
  • Advertise With Us
  • Grievances
  • About Us
  • Contact Us
Thursday, May 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಬೆಂಗಳೂರ ಬಾನಂಗಳದಲ್ಲಿ ಪ್ರಜ್ವಲಿಸುತ್ತಿರುವ ಕರಾವಳಿ ಬಾಲಪ್ರತಿಭೆ ಆಯುಷ್ ಬಗ್ಗೆ ನೀವು ತಿಳಿಯಲೇಬೇಕು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 18, 2019
in Special Articles
0
ಬೆಂಗಳೂರ ಬಾನಂಗಳದಲ್ಲಿ ಪ್ರಜ್ವಲಿಸುತ್ತಿರುವ ಕರಾವಳಿ ಬಾಲಪ್ರತಿಭೆ ಆಯುಷ್ ಬಗ್ಗೆ ನೀವು ತಿಳಿಯಲೇಬೇಕು
Share on FacebookShare on TwitterShare on WhatsApp

ಕರಾವಳಿಯ ಬಾಲ ಪ್ರತಿಭೆ ಆಯುಷ್ ಎನ್ನುವ ಪುಟ್ಟ ಬಾಲಕನ ಬಗ್ಗೆ ನಿಮಗೆಷ್ಟು ತಿಳಿತಿದೆ. ಹದಿಮೂರರ ಹರೆಯದಲ್ಲಿ ಹತ್ತಾರು ಸಾಧನೆಯ ಶಿಖರವನ್ನೇರಿದ ಹಳ್ಳಿ ಹುಡುಗನ ಯಶಸ್ಸಿನ ನೈಜ ಕಥೆಯಿದು.

ಜಯರಾಮ್ ಶೆಟ್ಟಿ ಹಾಗೂ ರೇಷ್ಮಾ ಶೆಟ್ಟಿ ದಂಪತಿಗಳ ಮಗನಾಗಿ ಆಯುಷ್ 2005ರ ಆಗಸ್ಟ್‌ 28ರಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಜನಿಸಿದರು. ಜಯರಾಮ್ ಶೆಟ್ಟೆಯವರ ಜನ್ಮ ಭೂಮಿ ಪುತ್ತೂರಾದರು ಕರ್ಮಭೂಮಿ ಬೆಂಗಳೂರು.

ಸದ್ಯ ಉದ್ಯೋಗದ ನಿಮಿತ್ತ ಬೆಂಗಳೂರಿನ ಬನಶಂಕರಿ ಎಂಬಲ್ಲಿ ಕುಟುಂಬ ಸಮೇತ ನೆಲೆಸಿದ್ದಾರೆ. ಈ ದಂಪತಿಗಳ ಮುದ್ದಿನ ಮಗ ಆಯುಷ್ ಎನ್ನುವ ಪುಟ್ಟ ಬಾಲಕನ ಬಾಲ ಪ್ರತಿಭೆಯನ್ನು ಇಡೀ ಕರ್ನಾಟವೇ ಮೆಚ್ಚಿ ಹರಸಿದೆ. ಆಯುಷ್ ಕಲರ್ಸ್ ಸೂಪರ್ ಮಾಧ್ಯಮದಲ್ಲಿ ಬರುವ ಮಜಾ ಭಾರತ್ ರಿಯಾಲಿಟಿ ಶೋ ಕಾರ್ಯಕ್ರಮದಲ್ಲಿ ತನ್ನ ಅಭಿನಯ ಹಾಗೂ ಮುಗ್ಧ ಮಾತುಗಳ ಮೂಲಕ ರಾಜ್ಯದಾದ್ಯಂತ ಜನರ ಅಪಾರ ಪ್ರೀತಿ ಗಳಿಸಿದ್ದಾನೆ. ತನ್ನ ಪ್ರತಿಭೆ ಹಾಗೂ ಮುಗ್ಧ ಮಾತುಗಳಿಂದ ರಾಜ್ಯದಾದ್ಯಂತ ಮನೆಮಾತಾಗಿರುವ ಆಯುಷ್ ಬೆಂಗಳೂರಿನ ಬನಶಂಕರಿ ಸಮೀಪದ ಬಿ ಎನ್.ಎಂ ಪಬ್ಲಿಕ್ ಸ್ಕೂಲ್’ನಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ.

ಮೊದಲ ಬಾರಿಗೆ ಆಯುಷ್ ಜೆ ಶೆಟ್ಟಿ ಕಲರ್ಸ್ ಕನ್ನಡ ವಾಹಿನಿಯಲ್ಲಿ ಜನಮನ್ನಣೆ ಪಡೆದ ಕಿನ್ನರಿ ಧಾರಾವಾಹಿಯಲ್ಲಿ ಲೋಕಿ ಎನ್ನುವ ಪಾತ್ರದಲ್ಲಿ ಮನೆ ಮಾತಾಗಿದ್ದರು. ಮಣಿ ಮತ್ತು ಲೋಕಿ ಜೋಡಿಯ ಅಭಿನಯ ಜನರ ಮನಸ್ಸಿನಲ್ಲಿ ಇಂದಿಗೂ ಅಚ್ಚಳಿಯದೆ ಉಳಿದಿದೆ. ಈ ಧಾರಾವಾಹಿಯಲ್ಲಿ ಆಯುಷ್ ಅಭಿನಯವನ್ನು ಮೆಚ್ಚಿಕೊಂಡ ಜನರು ರಸ್ತೆಯಲ್ಲಿ ಹೋಗುವಾಗ ಹೇ ಲೋಕಿ ಮಣಿಯನ್ನು ಚನ್ನಾಗಿ ನೋಡಿಕೋ ಅವಳಿನ್ನು ಚಿಕ್ಕವಳು ಎನ್ನುತಿದ್ದರು.

ಕಲರ್ಸ್ ಸೂಪರ್ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಮಕ್ಕಳ ಮಜಾ ಭಾರತ್ ರಿಯಾಲಿಟಿ ಶೋ ಕಾರ್ಯಕ್ರಮದಲ್ಲಿ ಆಯುಷ್ 8 ರಿಂದ 9 ತಿಂಗಳು ಭಾಗವಹಿಸಿದ್ದರು. ಮಜಾ ಭಾರತ್ ಶೋ ನಲ್ಲಿ ಆಯುಷ್ ಮಾಡಿರುವ ಅತ್ತೆಯ ಪಾತ್ರಕ್ಕೆ ಬೆಸ್ಟ್‌ ಪರ್ಫೋರ್ಮನ್ಸ್‌ ಆಫ್ ದಿ ಡೇ ಹೆಗ್ಗಳಿಕೆ ಕೂಡ ದೊರಕಿದೆ. ಇದುವರೆಗೆ ಆಯುಷ್ ಜೆ ಶೆಟ್ಟಿ ಅವರು ಗಾಂಧಾರಿ, ಮನೆ ದೇವರು, ರಾಗ ಅನುರಾಗ, ಅವನು ಮತ್ತು ಶ್ರಾವಣಿ ಎನ್ನುವ ಸೀರಿಯಲ್ ನಲ್ಲಿ ಬಾಲ ನಟನಾಗಿ ನಟಿಸಿದ್ದಾರೆ.

ಧಾರಾವಾಹಿಗಳಲ್ಲಿ ಆಯುಷ್ ಜೆ. ಶೆಟ್ಟೆಯವರ ಅಭಿನಯವನ್ನು ಗುರುತಿಸಿದ ನಿರ್ಮಾಪಕಿ ಶ್ವೇತಾ ಎನ್. ಶೆಟ್ಟಿ ಅವರು ಆಯುಷ್ ಜೆ ಶೆಟ್ಟಿ ಅವರನ್ನು ಮುಖ್ಯ ಬಾಲನಟನಾಗಿ ಇಟ್ಟುಕೊಂಡು 1098 ಎನ್ನುವ ಚಲನ ಚಿತ್ರ ನಿರ್ಮಾಣ ಮಾಡುತ್ತಾರೆ. ಈ ಚಲನಚಿತ್ರ ಕೇವಲ ಮನೋರಂಜರನೆಗೋಸ್ಕರ ಮಾಡಿದ ಚಿತ್ರವಲ್ಲ. ಬಾಲಕಾರ್ಮಿಕರ ಜೀವನದ ಒಂದೊಂದು ಮಜಲುಗಳನ್ನು ಇಲ್ಲಿ ಎಳೆ ಎಳೆಯಾಗಿ ತೋರಿಸಲಾಗಿದೆ.

ಕರ್ನಾಟಕ ಸರ್ಕಾರದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಾದ ಮಾನ್ಯ ಎನ್. ಮಹೇಶ್ ಅವರು ಅತಿಯಾಗಿ ಮೆಚ್ಚಿಕೊಂಡ ಚಿತ್ರವಿದು. ಈ ಚಿತ್ರವನ್ನು ನೋಡಿದ ಸಚಿವರು ಕರ್ನಾಟಕದ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳು ಈ ಚಿತ್ರವನ್ನು ನೋಡಲು ಅವಶ್ಯವಿರುವ ಸಹಾಯನ್ನು ನಾನು ಮಾಡುತ್ತೇನೆ ಎಂದು ಭರವಸೆಯನ್ನು ನೀಡಿದ್ದರು. ಕರ್ನಾಟಕದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಇಂದಿಗೂ ಮಕ್ಕಳ ವ್ಯಕ್ತಿತ್ವ ವಿಕಸನದ ದೃಷ್ಟಿಕೋನವನ್ನು ಇಟ್ಟುಕೊಂಡು ಈ ಚಿತ್ರವನ್ನು ತೋರಿಸಲಾಗುತ್ತಿದೆ.

ಕೆ. ಶಿವರುದ್ರಯ್ಯ ಅವರ ನಿರ್ದೇಶನದಲ್ಲಿ ಸೊಗಸಾಗಿ ಮೂಡಿಬಂದ ರಾಮನ ಸವಾರಿ ಎನ್ನುವ ಸಿನಿಮಾದಲ್ಲಿ ಆಯುಷ್ ಜೆ ಶೆಟ್ಟಿಯವರು ಬಾಲ ನಟನಾಗಿ ಅಭಿನಯಿಸಿದ್ದರು. ಗಂಡ ಹೆಂಡಿರ ಜಗಳದಲ್ಲಿ ಮಕ್ಕಳ ಭವ್ಯ ಭವಿಷ್ಯತ್ತಿಗೆ ಹೇಗೆ ಕೊಡಲಿ ಏಟು ಬೀಳುತ್ತದೆ ಎನ್ನುವ ಸಂದೇಶವನ್ನು ಅತ್ಯಂತ ಮಾರ್ಮಿಕವಾಗಿ ಈ ಚಿತ್ರದಲ್ಲಿ ತೋರಿಸಲಾಗಿದೆ. ರಾಮನ ಸವಾರಿ ಚಿತ್ರಕ್ಕೆ ಅಂತಾರಾಷ್ಟ್ರೀಯ ಚಲನಚಿತ್ರ ಅಕಾಡೆಮಿ ಪ್ರಶಸ್ತಿ ದೊರಕಿರುವುದು ನಾವು ಅತ್ಯಂತ ಸಂತೋಷ ಪಡುವ ವಿಷಯ.

ಸ್ವಚ್ಛ ಭಾರತ್ ಅಭಿಯಾನದ ಅಡಿಯಲ್ಲಿ ತೆಗೆದ ಒಂದು ಶಾರ್ಟ್ ಮೂವಿಯಲ್ಲಿ ಆಯುಷ್ ಜೆ. ಶೆಟ್ಟಿ ಅವರು ಅಭಿನಯಿಸಿದ್ದಾರೆ. ಕಿರಿಕ್ ಲವ್ ಸ್ಟೋರಿ, ಯದಾಯ-ಯದಾಯ ಧರ್ಮಸ್ಯ ಎನ್ನುವ ವಿಜಯ ರಾಘವೇಂದ್ರ ನಟಿಸಿರುವ ಚಿತ್ರ, ದುನಿಯಾ ವಿಜಯ್ ಅವರು ಬಾಲಕನಾಗಿರುವ ಸನ್ನಿವೇಶಕ್ಕೆ, ಕನ್ನಡ ಚಿಂಟು ಚಾನಲ್’ನಲ್ಲಿ ಬರುವ ಪಾತ್ರಗಳಿಗೆ ಆಯುಷ್ ಜೆ. ಶೆಟ್ಟಿ ತಮ್ಮ ಧ್ವನಿಯನ್ನು ನೀಡಿದ್ದಾರೆ.

ಇದುವರಿಗೆ 100 ಕ್ಕೂ ಅಧಿಕ ಸಾರ್ವಜನಿಕ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ತನ್ನ ಪ್ರತಿಭೆಯನ್ನು ಪ್ರಚುರಪಡಿಸಿದ ಹೆಮ್ಮೆ ಆಯುಷ್ ಅವರದ್ದು. ಆಯುಷ್ ಮಾಡಿರುವ ಮೋಕೆದ ತುಡರ್ ಎನ್ನುವ ಆಲ್ಬಮ್ ಸಾಂಗ್ ಕರಾವಳಿಗರ ಮನಸ್ಸು ಸೂರ್ಯಗೊಂಡಿದೆ. ಆಯುಷ್ ಅವರ ಬಹುಮುಖ ಪ್ರತಿಭೆಗೆ ಇದು ಕನ್ನಡಿಯಂತಿದೆ.

ಎಲ್ಲಿ ಪ್ರತಿಭೆ ಇದೆಯೋ ಅಲ್ಲಿಗೆ ಪುರಸ್ಕಾರಗಳು ಅರಸಿ ಬರುವುದು ಸ್ವಾಭಾವಿಕ ಆಯುಷ್ ಜೆ. ಶೆಟ್ಟಿ ತನ್ನ ಎಳೆಯ ಪ್ರಾಯದಲ್ಲಿ ಮಾಡಿರುವ ಬಹುದೊಡ್ಡ ಸಾಧನೆಯನ್ನು ಗುರುತಿಸಿ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಕರ್ನಾಟಕದ ಮೂಲೆ-ಮೂಲೆಗಳಲ್ಲಿ ಸನ್ಮಾನಿಸಿ ಗೌರವಿಸಲಾಗಿದೆ.

ಕರಾವಳಿ ಯಕ್ಷ ಮಿತ್ರರು ಹಾಗೂ ಬಹುಮುಖ ಪ್ರತಿಭೆಗಳ ಸಂಗಮ ಇವರು ಕರಾವಳಿ ಸಿರಿ ಎಂಬ ಬಿರುದು ನೀಡಿ ಗೌರವಿಸಿದರು. ಬೆಳದಿಂಗಳ ಸಾಹಿತ್ಯ ಸಮ್ಮೇಳನ ಇವರಿಂದ ಕರ್ನಾಟಕ ಪ್ರತಿಭಾರತ್ನ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ನವ ಕರ್ನಾಟಕ ಯುವಶಕ್ತಿ ಅವರಿಂದ ಕುವೆಂಪು ಉತ್ಸವ ಅವಾರ್ಡ್ ನೀಡಿ ಪ್ರತಿಭೆಗೆ ಬೆಂಬಲ ನೀಡಲಾಯಿತು. ಆಯುಷ್ ಅವರ ಬಾಲ ಪ್ರತಿಭೆಯನ್ನು ಗುರುತಿಸಿ 50 ರಿಂದ 60 ಕಡೆ ಸಾರ್ವಜನಿಕ ಸಭಾ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಗಿದೆ.

ಪಠ್ಯೇತರ ಚಟುವಟಿಕೆಯಲ್ಲಿ ಮುಂಚೂಣಿಯಲ್ಲಿ ಇರುವ ಆಯುಷ್ ಪಠ್ಯದಲ್ಲಿಯೂ ಕಡಿಮೆ ಇಲ್ಲ. ಒಂದರಿಂದ ಹತ್ತನೆಯ ತರಗತಿ ಒಳಗಿನ ಮಕ್ಕಳ ರಾಷ್ಟ್ರ ಮಟ್ಟದ ಸಾಮಾನ್ಯ ಜ್ಞಾನ ಪರೀಕ್ಷೆಯಲ್ಲಿ ಸತತ 4 ಬಾರಿ ರಾಂಕ್ ಪಡೆದುಕೊಂಡಿದ್ದಾನೆ. ಪ್ರತಿ ವರ್ಷ ತರಗತಿಯಲ್ಲಿ 90% ಅಧಿಕ ಅಂಕವನ್ನು ಪಡೆದು ತೇರ್ಗಡೆಯನ್ನು ಹೊಂದುತ್ತಿದ್ದಾನೆ.

ನನ್ನ ಮಗ ಡಾಕ್ಟರ್ ಆಗ್ಬೇಕು, ನನ್ನ ಮಗ ಇಂಜಿನಿಯರ್ ಆಗ್ಬೇಕು ಎಂದು ಕೇವಲ ಓದು ಬರಹಗಳಿಗೆ ಮಹತ್ವವನ್ನು ಕೊಡುವ ತಂದೆ ತಾಯಿಗಳ ನಡುವೆ ನನ್ನ ಮಗ ಕಲಾವಿದನಾಗಬೇಕು ಎಂದು ಪಠ್ಯದ ಜೊತೆಗೆ ಮಕ್ಕಳಿಗೆ ಪಠ್ಯೇತರ ಚಟುವಟಿಕೆಗಳಿಗೆ ಬೆಂಬಲ ನೀಡುವ ಪೋಷಕರು ದೊರಕುವುದು ಬಹಳ ವಿರಳ.

ಆಯುಷ್ ಚಿಕ್ಕ ಪ್ರಾಯದಲ್ಲಿರುವಾಗ ಆತನ ಆಸಕ್ತಿಯನ್ನು ಗಮನಿಸಿ ಗುರುತಿಸಿ ಬೆಂಬಲವನ್ನು ನೀಡಿರುವುದರಿಂದ ಇಂದು ರಾಜ್ಯ ಮಟ್ಟದ ಬಾಲ ಪ್ರತಿಭೆಯೊಂದನ್ನು ನಾವು ನೋಡುವುದಕ್ಕೆ ಸಾಧ್ಯವಾಗಿದೆ. ಪ್ರತಿಭೆ ಪ್ರತಿಯೊಬ್ಬರ ಬಳಿಯೂ ಇರುತ್ತದೆ ಆದರೆ ಪ್ರತಿಭೆಯನ್ನು ಗುರುತಿಸಿ ಬೆಂಬಲಿಸುವ ತಂದೆತಾಯಿಗಳು ಎಲ್ಲಾ ಮಕ್ಕಳಿಗೂ ದೊರಕುವುದಿಲ್ಲ. ಆ ವಿಚಾರದಲ್ಲಿ ಆಯುಷ್ ನಿಜವಾಗಿಯೂ ಅದೃಷ್ಟವಂತನೇ ಸರಿ.

ಅನೇಕ ಮಂದಿ ಕಲಾವಿದರನ್ನು ಸಾಹಿತಿಗಳನ್ನು, ಚಲನಚಿತ್ರ ನಟರನ್ನು ನೀಡಿದ ಹೆಮ್ಮೆ ನಮ್ಮ ಕರಾವಳಿಯದ್ದು. ಇಗ ಆಯುಷ್ ಎನ್ನುವ ಬಾಲ ಪ್ರತಿಭೆ ಕರ್ನಾಟಕದಲ್ಲಿ ಪ್ರಜ್ವಲಿಸುತ್ತಿದೆ. ಆದರೆ ಆ ಪ್ರತಿಭೆಯ ತಾಯಿ ಬೇರು ನಮ್ಮ ಕರಾವಳಿ ಎಂದು ಹೇಳುವುದಕ್ಕೆ ಅಪಾರವಾದ ಹೆಮ್ಮೆಯಾಗುತ್ತಿದೆ. ಆಯುಷ್ ತನ್ನ ಎಳೆಯ ಪ್ರಾಯದಲ್ಲೇ ಮುಂದಿನ ಗುರಿಯನ್ನು ನಿರ್ಧರಿಸಿಕೊಂಡಿದ್ದಾನೆ. ಸಮಾಜದಲ್ಲಿ ಒಂದು ಹೊತ್ತಿನ ತುತ್ತು ಅನ್ನಕ್ಕೂ ಪರದಾಡುವ ಸ್ಥಿತಿಯಲ್ಲಿ ಇರುವ ಬಡವರಿಗೆ ಸಹಾಯ ಮಾಡುವ ಒಬ್ಬ ಸಮಾಜ ಸೇವಕನಾಗಬೇಕು ಎನ್ನುವುದು ಈ ಬಾಲಕನ ಜೀವನ ಪರಮೋಚ್ಚ ಕನಸಂತೆ.

ಆಯುಷ್ ನಿಮ್ಮ ಮುಂದಿನ ಜೀವನ ಉಜ್ವಲವಾಗಲಿ, ಭಗವಾನ್ ಭಾಸ್ಕರನಂತೆ ಅನುಗಾಲವೂ ಪ್ರಜ್ವಲಿಸುತ್ತಿರಲಿ. ನಿಮ್ಮ ಸಾಧನೆಯ ಮಾರ್ಗ ಸುಖಕರವಾಗಲಿ. ಮುಂದೊಂದು ದಿನ ಜಗಮೆಚ್ಚುವ ಕಲಾವಿದನಾಗಿ ಹೆತ್ತ ತಾಯಿಗೆ ಹೊತ್ತ ಭೂಮಿಗೆ ಕೀರ್ತಿ ತರುವ ವ್ಯಕ್ತಿ ನೀವಾಗಿ. ಆ ಭಾಗವನಂತ ನಿಮಗೆ ಅರೋಗ್ಯ ಭಾಗ್ಯವನಿತ್ತು ಸದಾ ಹರಸಲಿ ಇದು ನಮ್ಮೆಲ್ಲರ ಕೋರಿಕೆ.

ಲೇಖನ-ಬರವಣಿಗೆ: ಗೌರೀಶ್ ಆವರ್ಸೆ
ಸಲಹೆ-ಸೂಚನೆ-ಚಿತ್ರಕೃಪೆ-ವೀಡಿಯೋ: ಸತೀಶ ಶೆಟ್ಟಿ ಚೇರ್ಕಾಡಿ ದೊಡ್ಡಮನೆ

Tags: coastal newsKannada NewsKannada TV ShowSpecial Articleಆಯುಷ್ ಶೆಟ್ಟಿಉತ್ತರ ಕನ್ನಡಕರಾವಳಿ ಬಾಲಪ್ರತಿಭೆಕಲರ್ಸ್ ಸೂಪರ್ದಕ್ಷಿಣ ಕನ್ನಡಸ್ವಚ್ಛ ಭಾರತ್ ಅಭಿಯಾನ
Share196Tweet123Send
Previous Post

Watch Video: ಮಂತ್ರಾಲಯದಲ್ಲಿ ರಾಯರ ಪವಾಡ-ವೀಡಿಯೋ ವೈರಲ್

Next Post

ನೇತ್ಯಾತ್ಮಕ ಭಾವನೆಗಳ ಬಡಿದೆಬ್ಬಿಸಿದ ’ಬುದ್ಧ’ನಿಗೆ ಅನಂತಾನಂತ ನಮನಗಳು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನೇತ್ಯಾತ್ಮಕ ಭಾವನೆಗಳ ಬಡಿದೆಬ್ಬಿಸಿದ ’ಬುದ್ಧ’ನಿಗೆ ಅನಂತಾನಂತ ನಮನಗಳು

ನೇತ್ಯಾತ್ಮಕ ಭಾವನೆಗಳ ಬಡಿದೆಬ್ಬಿಸಿದ ’ಬುದ್ಧ’ನಿಗೆ ಅನಂತಾನಂತ ನಮನಗಳು

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸಿಎಂ ಸಿದ್ಧರಾಮಯ್ಯ ಸಕಾರಾತ್ಮಕ ಸ್ಪಂದನೆ: ರಾಘವೇಂದ್ರ ಸ್ವಾಮಿ

ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸಿಎಂ ಸಿದ್ಧರಾಮಯ್ಯ ಸಕಾರಾತ್ಮಕ ಸ್ಪಂದನೆ: ರಾಘವೇಂದ್ರ ಸ್ವಾಮಿ

May 21, 2026
ಶಿವಮೊಗ್ಗದಲ್ಲೇ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕು: ಕೆಡ್ಲ್ಯೂಜೆ ಆಗ್ರಹ

ಶಿವಮೊಗ್ಗದಲ್ಲೇ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕು: ಕೆಡ್ಲ್ಯೂಜೆ ಆಗ್ರಹ

May 21, 2026
ಹೈಕೋರ್ಟ್‌ ಸಂಚಾರ ಪೀಠ ಸ್ಥಾಪನೆಗೆ ಡಿ. ಮಂಜುನಾಥ್ ಒತ್ತಾಯ

ಹೈಕೋರ್ಟ್‌ ಸಂಚಾರ ಪೀಠ ಸ್ಥಾಪನೆಗೆ ಡಿ. ಮಂಜುನಾಥ್ ಒತ್ತಾಯ

May 21, 2026
ಬೆಂಗಳೂರು | ಲ್ಯಾಂಡಿಂಗ್ ವೇಳೆ ರನ್ ವೇಗೆ ಅಪ್ಪಳಿಸಿದ ವಿಮಾನ | ತಪ್ಪಿದ ಭಾರೀ ಅನಾಹುತ

ಬೆಂಗಳೂರು | ಲ್ಯಾಂಡಿಂಗ್ ವೇಳೆ ರನ್ ವೇಗೆ ಅಪ್ಪಳಿಸಿದ ವಿಮಾನ | ತಪ್ಪಿದ ಭಾರೀ ಅನಾಹುತ

May 21, 2026
ಅಪರಿಚಿತ ವ್ಯಕ್ತಿಗಳ ಗುಂಡಿನ ದಾಳಿ | ಪುಲ್ವಾಮ ದಾಳಿ ಮಾಸ್ಟರ್ ಮೈಂಡ್ ಫಿನೀಶ್

ಅಪರಿಚಿತ ವ್ಯಕ್ತಿಗಳ ಗುಂಡಿನ ದಾಳಿ | ಪುಲ್ವಾಮ ದಾಳಿ ಮಾಸ್ಟರ್ ಮೈಂಡ್ ಫಿನೀಶ್

May 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL