No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Sunday, July 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಸರ್ಕಾರಿ ಕೆಲಸ ಅಂದ್ರೆ ಮೈಗಳ್ಳರೇ ಹೆಚ್ಚು: ಆದರೆ, ಭದ್ರಾವತಿ ಅಂಚೆ ಕಚೇರಿಯ ಈ ಸಿಬ್ಬಂದಿಗಳಿಗೆ ಕರ್ತವ್ಯವೇ ದೇವರು

ಉಕ್ಕಿನ ನಗರಿಯ ಈ ಇಬ್ಬರು ಯುವ ನೌಕರರ ಕರ್ತವ್ಯಪರತೆ ಕುರಿತು ನೀವು ತಿಳಿಯಲೇಬೇಕು

kalpa News by kalpa News
March 29, 2020
in ಭದ್ರಾವತಿ
0
ಸರ್ಕಾರಿ ಕೆಲಸ ಅಂದ್ರೆ ಮೈಗಳ್ಳರೇ ಹೆಚ್ಚು: ಆದರೆ, ಭದ್ರಾವತಿ ಅಂಚೆ ಕಚೇರಿಯ ಈ ಸಿಬ್ಬಂದಿಗಳಿಗೆ ಕರ್ತವ್ಯವೇ ದೇವರು
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭದ್ರಾವತಿ: ಸಾಮಾನ್ಯವಾಗಿ ಸರ್ಕಾರಿ ಕಚೇರಿ ಎಂದರೆ ಕೆಲಸದಿಂದ ತಪ್ಪಿಸಿಕೊಳ್ಳುವವರು, ರಜೆಗೆ ಸಣ್ಣ ಕಾರಣ ಸಿಕ್ಕರೆ ಸಾಕು ಮನೆಯಲ್ಲಿ ಕುಳಿತುಕೊಳ್ಳುವವರೇ ಹೆಚ್ಚು ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಲೇ ಇರುತ್ತದೆ. ಅದರಲ್ಲೂ ಒಂದಷ್ಟು ತುರ್ತು ಪರಿಸ್ಥಿತಿ ಸಿಕ್ಕರೆ ಸಾಕು, ಮನೆಯಿಂದ ಹೊರಕ್ಕೆ ಬರಲೇ ಚಿಂತಿಸುತ್ತಾರೆ. ಆದರೆ, ಇವೆಲ್ಲಕ್ಕೂ ಅಪವಾದ ಎಂಬಂತಿದೆ ಭದ್ರಾವತಿ ಮುಖ್ಯ ಅಂಚೆ ಕಚೇರಿಯ ಸಿಬ್ಬಂದಿಗಳ ಕರ್ತವ್ಯಪರತೆ.

ಕೋವಿಡ್ 19 ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಎಪ್ರಿಲ್ 14ರವರೆಗೂ ಲಾಕ್’ಡೌನ್ ಘೋಷಣೆ ಮಾಡಿದ್ದು, ಯಾವುದೇ ಸಾರ್ವಜನಿಕರು ಮನೆಯಿಂದ ಹೊರಕ್ಕೆ ಬಾರದಂತೆ ಕೇಂದ್ರ ಸರ್ಕಾರ ಆದೇಶಿಸಿದೆ. ಇದೇ ವೇಳೆ, ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಅಗತ್ಯ ಸೇವೆಗಳಿಗೆ ಸರ್ಕಾರ ರಿಯಾಯ್ತಿ ನೀಡಿದ್ದು ಇದರಲ್ಲಿ ಅಂಚೆ ಸೇವೆಯೂ ಸಹ ಸೇರಿದೆ. ನಗರದಲ್ಲಿ ಲಾಕ್ ಡೌನ್ ಪರಿಸ್ಥಿತಿಯ ಕುರಿತಾಗಿ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನಗರ ಪ್ರದಕ್ಷಿಣೆ ನಡೆಸಿದ್ದು, ಅಂಚೆ ಕಚೇರಿಗೆ ಭೇಟಿ ನೀಡಿದ ವೇಳೆ ಇಲ್ಲಿನ ಸಿಬ್ಬಂದಿಗಳ ಸಾಮಾಜಿಕ ಕಳಕಳಿ ತಿಳಿಯಿತು.

ಕರ್ಫ್ಯೂ ರೀತಿಯಲ್ಲಿ ತುರ್ತು ಪರಿಸ್ಥಿತಿಯ ಇಂತಹ ಸಂದರ್ಭದಲ್ಲಿ ಭದ್ರಾವತಿ ಮುಖ್ಯ ಅಂಚೆ ಕಚೇರಿಯ ಅರ್ಧದಷ್ಟು ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಇಲ್ಲಿನ ಪಬ್ಲಿಕ್ ರಿಲೇಶನ್ ಆಫೀಸರ್ ಶ್ರೀ ವಿ. ಶಶಿಧರ್ ಅವರೇ ಸದ್ಯ ಉಸ್ತುವಾರಿ ಪೋಸ್ಟ್‌ ಮಾಸ್ಟರ್ ಆಗಿದ್ದು, ಇವರಿಗೆ 58 ವರ್ಷ. ಪ್ರಮುಖವಾಗಿ 50 ವರ್ಷ ದಾಟಿರುವ ಸಿಬ್ಬಂದಿಗಳಿಗೆ ವಿನಾಯ್ತಿ ನೀಡಿದ್ದಾರೆ. ಆದರೆ, ಸ್ವತಃ ಶಶಿಧರ್ ಅವರು ತಮ್ಮ ವಯಸ್ಸನ್ನು ಲೆಕ್ಕಿಸದೇ ಕರ್ತವ್ಯಕ್ಕೆ ಪ್ರತಿನಿತ್ಯ ಹಾಜರಾಗುತ್ತಿದ್ದಾರೆ.

ಈ ಕುರಿತಂತೆ ಅವರನ್ನು ಮಾತನಾಡಿಸಿದರೆ, ನನಗೆ ವಯಸ್ಸು 58 ಅಷ್ಟೆ. ನನ್ನ ಆರೋಗ್ಯ ಚೆನ್ನಾಗಿದೆ. ಹೀಗಿರುವಾಗ ಸುಖಾಸುಮ್ಮನೆ ಮನೆಯಲ್ಲಿ ಕುಳಿತರೆ ಸಾರ್ವಜನಿಕರ ಸೇವೆಗೆ ತೊಂದರೆಯಾಗುತ್ತದೆ. ಹೀಗಾಗಿ, ನಾನು ಕರ್ತವ್ಯಕ್ಕೆ ಹಾಜರಾಗುತ್ತಿದ್ದೇನೆ ಎನ್ನುತ್ತಾರೆ.

ಇನ್ನು, ಇಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಇಬ್ಬರು ಯುವ ಸಿಬ್ಬಂದಿಗಳ ಬಗ್ಗೆ ಹೇಳಲೇಬೇಕು. ಸಾಮಾನ್ಯವಾಗಿ ಸರ್ಕಾರಿ ನೌಕರಿಯಲ್ಲಿರುವ ಯುವಕರಲ್ಲಿ ಹಲವರು ಕೆಲಸದಿಂದ ತಪ್ಪಿಸಿಕೊಳ್ಳಲೇ ಚಿಂತಿಸುವವರು ಹೆಚ್ಚು. ಆದರೆ, ತುರ್ತು ಪರಿಸ್ಥಿತಿಯ ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗಬಾರದು ಎಂದು ಸ್ವಯಂ ಪ್ರೇರಿತರಾಗಿ ಉತ್ಸಾಹದಿಂದ ಕರ್ತವ್ಯ ನಿರ್ವಹಿಸುತ್ತಿರುವ ಇಬ್ಬರು ಯುವ ನೌಕರರ ಕುರಿತು ನೀವು ತಿಳಿಯಲೇಬೇಕು.

ಆ ಯುವ ನೌಕರರೇ ಪ್ರಸನ್ನ ಕುಮಾರ್ ಹಾಗೂ ಬಿ.ಸಿ. ರಾಘವೇಂದ್ರ.

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾದೊಂದಿಗೆ ಮಾತನಾಡಿದ ಪೋಸ್ಟ್‌ ಮಾಸ್ಟರ್ ಶಶಿಧರ್ ಅವರು ಈ ಇಬ್ಬರೂ ಯುವ ಸಿಬ್ಬಂದಿಗಳ ಕುರಿತಾಗಿ ಆಡಿದ ಪ್ರಶಂಸೆ ಮಾತುಗಳು ಯುವಕರಿಗೆ ಪ್ರೇರಣಾದಾಯಕ.

ಈ ವಯಸ್ಸಿನ ಯುವಕರು ಕೆಲಸದಿಂದ ತಪ್ಪಿಸಿಕೊಳ್ಳುವುದೇ ಹೆಚ್ಚು. ಆದರೆ, ಈ ಇಬ್ಬರು ಮಾತ್ರ ಅವರಾಗಿಯೇ ನನ್ನ ಬಳಿ ಬಂದು: ಸರ್, 50 ವರ್ಷ ದಾಟಿರುವ ಹಿರಿಯರಿಗೆ ವಿನಾಯ್ತಿ ನೀಡಿ. ನೀವು ಈ ವಯಸ್ಸಿನಲ್ಲಿ ಬಂದು ಕರ್ತವ್ಯ ನಿರ್ವಹಿಸುತ್ತಿದ್ದೀರಿ. ಇನ್ನು, ನಾವು ಹೇಗೆ ಮನೆಯಲ್ಲಿ ಕೂರುವುದು. ನಮಗೆ ನಮ್ಮ ಹಿತಕ್ಕಿಂತ ಕರ್ತವ್ಯ ಹಾಗೂ ಜನ ಸೇವೆ ಮುಖ್ಯ. ನಾವು ನಿಮ್ಮೊಂದಿಗಿದ್ದೇವೆ ಎಂದು ಈ ಇಬ್ಬರೂ ನನ್ನ ಬಳಿ ಬಂದು ಹೇಳಿದರು ಎನ್ನುತ್ತಾರೆ ಶಶಿಧರ್.

ತುರ್ತು ಪರಿಸ್ಥಿತಿಯ ಈ ಸಂದರ್ಭದಲ್ಲಿ ತಮ್ಮ ಸ್ವಹಿತಕ್ಕಿಂತಲೂ ತಮ್ಮ ಅಗತ್ಯಕ್ಕಾಗಿ ಅಂಚೆ ಕಚೇರಿಗೆ ಬರುವ ನಾಗರಿಕರ ಸೇವೆ ನಮಗೆ ಮುಖ್ಯ ಎನ್ನುವ ಈ ಯುವಕರ ಈ ಮನಃಸ್ಥಿತಿ ಅನುಕರಣೀಯವಾಗಿದೆ.

ಶುಕ್ರವಾರ ಒಂದೇ ದಿನ ವಿವಿಧ ಯೋಜನೆಗಳ ಅಡಿಯಲ್ಲಿ ಹಣ ಪಡೆಯುವ ಫಲಾನುಭವಿಗಳು ಹಾಗೂ ತಮ್ಮ ಹಣ ಪಡೆಯುವ ಸಲುವಾಗಿ 50ಕ್ಕೂ ಅಧಿಕ ಸಾರ್ವಜನಿಕರು ಇಲ್ಲಿಗೆ ಭೇಟಿ ನೀಡಿದ್ದಾರೆ. ಅಲ್ಲದೇ, ಇಲ್ಲಿರುವ ಸಿಬ್ಬಂದಿಗಳಲ್ಲಿ ಅರ್ಧದಷ್ಟು ಮಂದಿಗೆ ವಿನಾಯ್ತಿ ನೀಡಿದ್ದು, ಅಗತ್ಯವಿದ್ದರೆ ಮಾತ್ರ ಕರೆಸಿಕೊಳ್ಳುತ್ತಿದ್ದಾರೆ.

ಬಹಳ ಮುಖ್ಯವಾಗಿ, ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಭಯದಲ್ಲಿಯೇ ಅಂಚೆ ಕಚೇರಿಗೆ ಆಗಮಿಸುವ ಸಾರ್ವಜನಿಕರೊಂದಿಗೆ ಅತ್ಯಂತ ವಿನಯದಿಂದ ವರ್ತಿಸಿ, ಅವರ ಕೆಲಸ ಮಾಡಿಕೊಡುತ್ತಾ ಆತ್ಮಸ್ಥೈರ್ಯ ತುಂಬುತ್ತಿರುವುದು, ಸಾರ್ವಜನಿಕರಿಗೆ ಕಚೇರಿ ಹಾಗೂ ಅಂಚೆ ಎಟಿಎಂನಲ್ಲಿ ಸ್ಯಾನಿಟೈಸರ್ ಇಟ್ಟಿರುವುದು ಶ್ಲಾಘನೀಯ.

Get in Touch With Us info@kalpa.news Whatsapp: 9481252093

Tags: BhadravathiCovid_19indiaemergencyIndian PostKannadaNewsWebsiteLatestNewsKannadaPost MasterSpecialArticleಕೋವಿಡ್-19ತುರ್ತು ಪರಿಸ್ಥಿತಿಪೋಸ್ಟ್‌ ಮಾಸ್ಟರ್ಭದ್ರಾವತಿಭಾರತೀಯ ಅಂಚೆ ಇಲಾಖೆಸರ್ಕಾರಿ ಕಚೇರಿ
Share221Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಾರಕ ರೋಗ ನಿಯಂತ್ರಿಸಿ, ಅನ್ನ ಅರಸಿ ಹೊರಟವರ ಮೂಳೆಗಳ ಮುರಿಯಬೇಡಿ

Next Post

ರೈತರ ಕೃಷಿ ಚಟುವಟಿಕೆಗಳಿಗೆ ಯಾವುದೇ ನಿಬಂಧನೆ ಇಲ್ಲ: ಕೃಷಿ ಸಚಿವ ಬಿ.ಸಿ. ಪಾಟೀಲ್

kalpa News

kalpa News

Next Post
ಭಾರತದ ವಿರುದ್ಧ ಮಾತನಾಡುವವರನ್ನು ಕಂಡಲ್ಲಿ ಗುಂಡಿಟ್ಟು ಕೊಲ್ಲುವ ಕಾನೂನು ಬೇಕಿದೆ: ಸಚಿವ ಬಿ.ಸಿ. ಪಾಟೀಲ್

ರೈತರ ಕೃಷಿ ಚಟುವಟಿಕೆಗಳಿಗೆ ಯಾವುದೇ ನಿಬಂಧನೆ ಇಲ್ಲ: ಕೃಷಿ ಸಚಿವ ಬಿ.ಸಿ. ಪಾಟೀಲ್

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL