Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಭಕ್ತಿಯಿಂದ ಬೇಡಿದರೆ ಮನೆ ಕಟ್ಟಲು ಅಭಯ ನೀಡುವ ಭೂವರಾಹ ಸ್ವಾಮಿಯ ಕುರಿತು ನೀವು ತಿಳಿಯಲೇಬೇಕು

June 15, 2020
in Special Articles
0 0
0
Share on facebookShare on TwitterWhatsapp
Read - 3 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆಯ ಕಲ್ಲಹಳ್ಳಿಯಲ್ಲಿ ನೆಲೆಸಿರುವ ಭೂವರಾಹನಾಥ ಸ್ವಾಮಿ ಭಕ್ತರ ಪಾಲಿನ ಕರುಣಾಸಿಂಧು, ಬೇಡಿ ಬಂದವರಿಗೆ ಕರುಣೆಯ ಕಾಮಧೇನು. ಇಂತಹ ಶ್ರೀಸ್ವಾಮಿಯ ಸನ್ನಿಧಾನದ ಕುರಿತಾಗಿ ತಿಳಿಸುವ ಪ್ರಯತ್ನದ ಭಾಗವಾಗಿ ಶ್ರೀಕ್ಷೇತ್ರದ ಆಡಳಿತಾಧಿಕಾರಿ ಶ್ರೀನಿವಾಸನ್ ಅವರೊಂದಿಗೆ ನಡೆಸಿದ ವಿಶೇಷ ಸಂದರ್ಶನದ ವಿಚಾರ ಇಲ್ಲಿದೆ.

ಕಲ್ಪನ್ಯೂಸ್: ರೇವತಿ ಅಭಿಷೇಕಂ ಅಂದರೆ ಏನು ?
ಶ್ರೀನಿವಾಸನ್: ರೇವತಿ ನಕ್ಷತ್ರದಲ್ಲಿ ಅಭಿಷೇಕಾ ಪ್ರದರ್ಶನ ನೀಡಲಾಗುವುದು. ಪ್ರತಿ ತಿಂಗಳು ರೇವತಿ ನಕ್ಷತ್ರದಲ್ಲಿ ಶ್ರೀಮಹಾವಿಷ್ಣು ಪ್ರವೇಶಿಸುತ್ತಾನೆ. ದಶಾವತಾರ ಸರಣಿಯಲ್ಲಿ ಮೂರನೇ ಅವತಾರ ವರಾಹಾವತಾರ, ವರಾಹ ಅಂದರೆ ಕಾಡು ಹಂದಿ ಎಂದರ್ಥ! ವರಾಹಾವತಾರ; ಭೂರಕ್ಷಣೆ, ಭೂದೇವಿಯನ್ನು ರಕ್ಷಿಸಲು ಕಾಡುಹಂದಿ ರೂಪದಲ್ಲಿ ಲೋಕಕಂಟಕ ಹಿರಣ್ಯಾಕ್ಷನ ವಧೆ ಮಾಡುತ್ತಾನೆ.


ಕಲ್ಪನ್ಯೂಸ್: ಭಗವಂತನ ಶಿಲಾ ಮೂರ್ತಿ ದರ್ಶನದ ಕುರಿತು?
ಶ್ರೀನಿವಾಸನ್: ಹರಕೆ ಹೊತ್ತು ಶ್ರೀಕ್ಷೇತ್ರಕ್ಕೆ ಆಗಮಿಸುವ ಭಕ್ತರ ಇಷ್ಠಾರ್ಥಗಳನ್ನು ಕರುಣಿಸಿ ಆಶೀರ್ವಧಿಸುತ್ತಿರುವ ಭೂವರಾಹಸ್ವಾಮಿಯ ಉತ್ಸವ ಮೂರ್ತಿಯನ್ನು ಮಾತ್ರ ದರ್ಶನ ಪಡೆಯಲು ಭಕ್ತರಿಗೆ ಸಾಮಾಜಿಕ ಅಂತರ ಕಾಪಾಡುತ್ತಲೇ, ಅವಕಾಶ ಹಾಗೂ ಬರುವ ಭಕ್ತರು ಮಾಸ್ಕ್‌ ಧರಿಸಿ ಬರಬೇಕು ಹಾಗೂ ದೇವಾಲಯದ ಮುಂಭಾಗದಲ್ಲಿ ಅವರ ಕೈ ಮತ್ತು ಕಾಲುಗಳಿಗೆ ಸ್ಯಾನಿಟೈಸರ್ ಸಿಂಪಡಿಸಿ ದರ್ಶನ ಪಡೆಯಲು ಅವಕಾಶವನ್ನು ನೀಡಲಾಗುತ್ತದೆ, ಕೋವಿಡ್ 19, ಕೊರೋನಾ ಪೆಡಂಭೂತವಿರುವ ಕಾರಣ ಭಗವಂತನ ಶಿಲಾ ಮೂರ್ತಿ ದರ್ಶನ ಇರುವುದಿಲ್ಲ.

ಕಲ್ಪನ್ಯೂಸ್: ಪುಣ್ಯಕ್ಷೇತ್ರದ ವಿಶಿಷ್ಟತೆಯ ಬಗ್ಗೆ?
ಶ್ರೀನಿವಾಸನ್: ವರಾಹಾವತಾರದ ವಿಷ್ಣುವಿನ ಆಜಾನುಬಾಹು ದೇಹ, ಬಲಿಷ್ಠ ತೋಳುಗಳು, ಎತ್ತರವಾದ ನಿಲುವಿನ ಭಂಗಿಯಲ್ಲಿರುವ ಮೂರ್ತಿ, ಎಡತೊಡೆಯ ಮೇಲೆ ಪತ್ನಿ ಲಕ್ಷ್ಮೀ ಭೂದೇವಿಯನ್ನು ಕೂರಿಸಿಕೊಂಡಿರುವ ಭಂಗಿಯಲ್ಲಿದೆ. ಕೈಯಲ್ಲಿ ಕಮಲದ ಹೂವು. ವರಾಹಸ್ವಾಮಿಯ ಒಂದು ಕೈಯಲ್ಲಿ ಚಕ್ರ, ಮತ್ತೊಂದು ಕೈಯಲ್ಲಿ ಶಂಖ, ಎಡತೊಡೆಯ ಮೇಲೆ ಕುಳಿತಿರುವ ಪತ್ನಿ ಲಕ್ಷ್ಮಿಯನ್ನು (ಭೂದೇವಿ) ಎಡಗೈನಿಂದ ತಬ್ಬಿಕೊಂಡಿರುವಂತೆ ಕೆತ್ತಿರುವ ವಿಗ್ರಹವಿದು. 15 ಅಡಿ ಎತ್ತರದ ಸಾಲಿಗ್ರಾಮದ ಏಕಶಿಲೆಯಿಂದ ಕೆತ್ತಿದ್ದಾರೆ. ದೇವಾಲಯ ಪ್ರವೇಶಿಸುತ್ತಲೇ ಸಭಾ ಮಂಟಪದ ಎದರು ಗರ್ಭಗುಡಿ ಇದೆ. ಒಳಗಡೆ ಪೀಠದ ಮೇಲೆ ವರಾಹಸ್ವಾಮಿ ವಿಗ್ರಹವಿದೆ.

ಕಲ್ಪನ್ಯೂಸ್: ಭಕ್ತರ ನಂಬಿಕೆ; ಮನೆ ಕಟ್ಟಲು ಅಭಯ ನೀಡುವ ಸ್ವಾಮಿ ಕುರಿತಾಗಿ ತಿಳಿಸಿ?
ಶ್ರೀನಿವಾಸನ್: ಭಕ್ತಿ ಭಾವದಿಂದ ಬೇಡಿದರೆ – ಮನೆ ಕಟ್ಟಲು ಅಭಯ ನೀಡುವ ಸ್ವಾಮಿ, ಈ ಭೂವರಾಹಸ್ವಾಮಿಗೆ ಹರಕೆ ಹೊತ್ತರೆ, ಭೂವಿವಾದಗಳು ಇತ್ಯರ್ಥವಾಗುತ್ತವೆ. ಮರಳು, ಮಣ್ಣು ಅಥವಾ ಇಟ್ಟಿಗೆಯನ್ನು ದೇವರ ಮುಂದಿಟ್ಟು ಪೂಜೆ ಸಲ್ಲಿಸಿ, ದೇವಾಲಯದ ಪಕ್ಕದಲ್ಲಿ ಅದೇ ಸಾಮಗ್ರಿಗಳಿಂದ ಗೂಡು ಕಟ್ಟಿ ಹರಿಕೆ ಸಲ್ಲಿಸಿದರೆ, ಗೃಹನಿರ್ಮಾಣದ ಬಯಕೆ ಸಿದ್ಧಿಸುತ್ತದೆ ಎಂಬುದು ಭಕ್ತರ ನಂಬಿಕೆ.

ಕಲ್ಪನ್ಯೂಸ್: ಪುರಾಣದ ಕಥೆ?
ಶ್ರೀನಿವಾಸನ್: ಹಿರಣ್ಯಕಶಿಪುವಿನ ಸೋದರ ಹಿರಣ್ಯಾಕ್ಷನು ಭೂದೇವಿಯನ್ನು ಹೊತ್ತೊಯ್ದು ಸಮುದ್ರದಲ್ಲಿ ಬಂಧಿಸಿಡುತ್ತಾನೆ. ಮಹಾವಿಷ್ಣುವು ವರಾಹಾವತಾರವನ್ನು ತಾಳಿ ಹಿರಾಣ್ಯಾಕ್ಷನನ್ನು ಕೊಂದು ಭೂದೇವಿಯನ್ನು ರಕ್ಷಿಸಿದ ಎಂಬುದು ಪುರಾಣದ ಕಥೆ.

ಕಲ್ಪನ್ಯೂಸ್: ಪೂಜೆ ವಿಶೇಷಗಳು ಹೇಗೆ ನಡೆಯುತ್ತದೆ?
ಶ್ರೀನಿವಾಸನ್: ಭೂವರಾಹಸ್ವಾಮಿ. ಹಾಲು, ಮೊಸರು, ಎಳನೀರು, ಜೇನುತುಪ್ಪ, ಕಬ್ಬಿನಹಾಲು, ಗಂಗಾಜಲ, ಶ್ರೀಗಂಧ, ಅರಿಶಿನ ಕುಂಕುಮ ಸೇರಿದಂತೆ 25 ವಿವಿಧ ಬಗೆಯ ಹೂವುಗಳಿಂದ ಸ್ವಾಮಿಗೆ ವಿಶೇಷ ಅಭಿಷೇಕ ನಡೆಯುತ್ತದೆ. ನರಸಿಂಹ ಜಯಂತಿ, ವೈಕುಂಠ ಏಕಾದಶಿಯಲ್ಲಿ ಮಾತ್ರವಲ್ಲದೆ, ಪ್ರತಿ ಶನಿವಾರ ಈ ದೇವಾಲಯದಲ್ಲಿ ವಿಶೇಷ ಪೂಜೆ ನಡೆಯುತ್ತದೆ.


ಕಲ್ಪನ್ಯೂಸ್: ದೋಣಿ ವಿಹಾರ-ಪ್ರಸಾದದ ವಿತರಣೆ ಬಗ್ಗೆ ತಿಳಿಸಿ?
ಶ್ರೀನಿವಾಸನ್: ದೇವಸ್ಥಾನದ ಪಕ್ಕದಲ್ಲಿಯೇ ಪಶ್ಚಿಮಾಭಿಮುಖವಾಗಿ ಹರಿಯುತ್ತಿರುವ ಹೇಮಾವತಿ ನದಿಯಲ್ಲಿ ಪ್ರವಾಸಿಗರು ಮತ್ತು ಭಕ್ತಾಧಿಗಳಿಗೆ ದೋಣಿ ವಿಹಾರ, ತೆಪ್ಪದಲ್ಲಿ ದೋಣಿವಿಹಾರ, ದಾಸೋಹ ಭವನದಲ್ಲಿ ಭಕ್ತಾಧಿಗಳಿಗೆ ಉಚಿತ ದಾಸೋಹ ಪ್ರಸಾದದ ವಿತರಣೆ ನಡೆಯುತ್ತದೆ.

ಕಲ್ಪನ್ಯೂಸ್: ಈ ದೇವಾಲಯದ ಆಡಳಿತ?
ಶ್ರೀನಿವಾಸನ್: ಈ ದೇವಾಲಯವು ಮೈಸೂರಿನ ಶ್ರೀಬ್ರಹ್ಮತಂತ್ರ ಸ್ವತಂತ್ರ ಪರಕಾಲ ಮಠದಿಂದ ದೇವಾಲಯದ ಆಡಳಿತ ಮಂಡಳಿಯ ವ್ಯಾಪ್ತಿಗೆ ಒಳಪಟ್ಟಿದೆ.

ಕಲ್ಪನ್ಯೂಸ್: ಅನ್ನ ದಾಸೋಹ?
ಶ್ರೀನಿವಾಸನ್: ಭಕ್ತರಿಗೆ ಪ್ರತಿನಿತ್ಯ ಅನ್ನದಾಸೋಹ ನಡೆಯುತ್ತದೆ.

ಕಲ್ಪನ್ಯೂಸ್: ಪೂಜೆ ಸಮಯ?
ಶ್ರೀನಿವಾಸನ್: ಪ್ರತಿ ನಿತ್ಯ ಬೆಳಗ್ಗೆ 8ರಿಂದ ಮಧ್ಯಾಹ್ನ 2 ಗಂಟೆ ಹಾಗೂ ಸಂಜೆ 4ರಿಂದ 7ಗಂಟೆಯವರೆಗೆ ಪೂಜೆ ನಡೆಯುತ್ತದೆ.

ಕಲ್ಪನ್ಯೂಸ್: ದೋಷಗಳಿಗೆ ಪರಿಹಾರ?
ಶ್ರೀನಿವಾಸನ್: ರಾಹು – ಕೇತುಗಳ ದೋಷಗಳಿಗೆ ಸ್ವಾಮಿಯ ಅನುಗ್ರಹದಿಂದ ಪರಿಹಾರ ಶತ ಸಿದ್ದ! ವಿವಾಹ ಹಾಗೂ ಸಂತಾನ ಭಾಗ್ಯ ಲಭಿಸುತ್ತದೆ.

ಕಲ್ಪನ್ಯೂಸ್: ಶ್ರೀ ಕ್ಷೇತ್ರದ ವಿಶೇಷತೆ ಕುರಿತು?
ಶ್ರೀನಿವಾಸನ್: ಇಲ್ಲಿರುವ ಮೂರ್ತಿ ಅತ್ಯಂತ ಮನಮೋಹಕವಾಗಿದ್ದರೂ ಇತರ ಹೊಯ್ಸಳರ ಕಾಲದ ದೇವಾಲಯಗಳಂತೆ ಶಿಲ್ಪಕಲಾ ಶ್ರೀಮಂತಿಕೆಯಿಂದ ಕೂಡಿಲ್ಲ. ಈಗ ಹಳೆಯ ಗುಡಿಯನ್ನು ಕೆಡವಿ ಹೊಸ ದೇಗುಲವನ್ನು ನಿರ್ಮಿಸಲಾಗಿದೆ. ಹೊಯ್ಸಳ ರಾಜ ಸ್ಥಾಪಿಸಿದ ದೇಗಲವನ್ನು ಮುಂದೆ ಚೋಳರು, ವಿಜಯನಗರದ ಅರಸು ಪೋಷಿಸುತ್ತಾರೆ, ಬಳಿಕ ಮೈಸೂರು ಅರಸರ ಆಳ್ವಿಕೆಗೆ ಒಳಪಡುತ್ತದೆ, ಮೈಸೂರಿನ ಬ್ರಹ್ಮತಂತ್ರ ಸ್ವತಂತ್ರ ಪರಕಾಲ ಮಠದ ಉಸ್ತುವಾರಿಯಲ್ಲಿ ಸಮಗ್ರವಾಗಿ ಅಭಿವೃದ್ಧಿ ಹೊಂದುತ್ತಿರುವ ಶ್ರೀ ಕ್ಷೇತ್ರ.

ಎಲ್ಲಿದೆ ಶ್ರೀಕ್ಷೇತ್ರ?
ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆಯ ಕಲ್ಲಹಳ್ಳಿ ಊರಿನ ದೇವಾಲಾಪುರದಲ್ಲಿದೆ ಈ ದೇಗುಲ. ಶಾಸನವೊಂದರ ಪ್ರಕಾರ ಹೊಯ್ಸಳರ ಮುಮ್ಮುಡಿ ಬಲ್ಲಾಳನ ಕಾಲದಲ್ಲಿ ಹೇಮಾವತಿಯ ನದಿಯ ದಂಡೆಯ ಮೇಲೆ ಪುಟ್ಟದಾಗಿ ನಿರ್ಮಾಣವಾದ ದೇವಾಲಯವಿದು. ಸುಮಾರು ಕ್ರಿ.ಶ. 1334ರಲ್ಲಿ ಈ ದೇವಾಲಯ ನಿರ್ಮಾಣವಾಗಿರಬಹುದು ಎಂದು ಹೇಳಲಾಗುತ್ತದೆ.

ಬೆಂಗಳೂರಿನಿಂದ 180 ಕಿಮೀ, ಮೈಸೂರಿನಿಂದ 53 ಕಿಮೀ, ಕೆ.ಆರ್.ಪೇಟೆ ಮಾರ್ಗವಾಗಿ 18 ಕಿಮೀ ದೂರದಲ್ಲಿ ಈ ದೇವಾಲಯವಿದೆ. ಕೆ.ಆರ್.ಪೇಟೆ ಮೇಲುಕೋಟೆ – ಕಲ್ಲಹಳ್ಳಿಗೆ ಬಸ್ ಸೌಲಭ್ಯವಿದೆ. ಸ್ವಂತ ವಾಹನದಲ್ಲಿ ಬರುವವರು ಈ ದೇವಾಲಯ ಭೇಟಿಯೊಂದಿಗೆ ಸುತ್ತಲಿನ ಪ್ರವಾಸಿ ತಾಣಗಳಿಗೂ ಭೇಟಿ ನೀಡಬಹುದು.


Get In Touch With Us info@kalpa.news Whatsapp: 9481252093

Tags: Bhoo Varaahanatha SwamyHindu TempleKannadaNewsWebsiteLatestNewsKannadaLord VishnuMandyaTemples in Mandyaಕೃಷ್ಣರಾಜಪೇಟೆಭೂವರಾಹನಾಥ ಸ್ವಾಮಿಮಂಡ್ಯಮೈಸೂರುವರಾಹಾವತಾರ
Previous Post

ಶರಾವತಿ ಉಗಮ ಸ್ಥಳ ಅಂಬುತೀರ್ಥಕ್ಕೆ ಅಭಿವೃದ್ಧಿಯ ಭಾಗ್ಯ

Next Post

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಗೆ ಅಧಿಕೃತ ಚಾಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಗೆ ಅಧಿಕೃತ ಚಾಲನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!