No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
  • Advertise With Us
  • Grievances
  • About Us
  • Contact Us
Friday, August 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಭಕ್ತಿಯಿಂದ ಬೇಡಿದರೆ ಮನೆ ಕಟ್ಟಲು ಅಭಯ ನೀಡುವ ಭೂವರಾಹ ಸ್ವಾಮಿಯ ಕುರಿತು ನೀವು ತಿಳಿಯಲೇಬೇಕು

kalpa News by kalpa News
June 15, 2020
in Special Articles
0
ಭಕ್ತಿಯಿಂದ ಬೇಡಿದರೆ ಮನೆ ಕಟ್ಟಲು ಅಭಯ ನೀಡುವ ಭೂವರಾಹ ಸ್ವಾಮಿಯ ಕುರಿತು ನೀವು ತಿಳಿಯಲೇಬೇಕು
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆಯ ಕಲ್ಲಹಳ್ಳಿಯಲ್ಲಿ ನೆಲೆಸಿರುವ ಭೂವರಾಹನಾಥ ಸ್ವಾಮಿ ಭಕ್ತರ ಪಾಲಿನ ಕರುಣಾಸಿಂಧು, ಬೇಡಿ ಬಂದವರಿಗೆ ಕರುಣೆಯ ಕಾಮಧೇನು. ಇಂತಹ ಶ್ರೀಸ್ವಾಮಿಯ ಸನ್ನಿಧಾನದ ಕುರಿತಾಗಿ ತಿಳಿಸುವ ಪ್ರಯತ್ನದ ಭಾಗವಾಗಿ ಶ್ರೀಕ್ಷೇತ್ರದ ಆಡಳಿತಾಧಿಕಾರಿ ಶ್ರೀನಿವಾಸನ್ ಅವರೊಂದಿಗೆ ನಡೆಸಿದ ವಿಶೇಷ ಸಂದರ್ಶನದ ವಿಚಾರ ಇಲ್ಲಿದೆ.

ಕಲ್ಪನ್ಯೂಸ್: ರೇವತಿ ಅಭಿಷೇಕಂ ಅಂದರೆ ಏನು ?
ಶ್ರೀನಿವಾಸನ್: ರೇವತಿ ನಕ್ಷತ್ರದಲ್ಲಿ ಅಭಿಷೇಕಾ ಪ್ರದರ್ಶನ ನೀಡಲಾಗುವುದು. ಪ್ರತಿ ತಿಂಗಳು ರೇವತಿ ನಕ್ಷತ್ರದಲ್ಲಿ ಶ್ರೀಮಹಾವಿಷ್ಣು ಪ್ರವೇಶಿಸುತ್ತಾನೆ. ದಶಾವತಾರ ಸರಣಿಯಲ್ಲಿ ಮೂರನೇ ಅವತಾರ ವರಾಹಾವತಾರ, ವರಾಹ ಅಂದರೆ ಕಾಡು ಹಂದಿ ಎಂದರ್ಥ! ವರಾಹಾವತಾರ; ಭೂರಕ್ಷಣೆ, ಭೂದೇವಿಯನ್ನು ರಕ್ಷಿಸಲು ಕಾಡುಹಂದಿ ರೂಪದಲ್ಲಿ ಲೋಕಕಂಟಕ ಹಿರಣ್ಯಾಕ್ಷನ ವಧೆ ಮಾಡುತ್ತಾನೆ.


ಕಲ್ಪನ್ಯೂಸ್: ಭಗವಂತನ ಶಿಲಾ ಮೂರ್ತಿ ದರ್ಶನದ ಕುರಿತು?
ಶ್ರೀನಿವಾಸನ್: ಹರಕೆ ಹೊತ್ತು ಶ್ರೀಕ್ಷೇತ್ರಕ್ಕೆ ಆಗಮಿಸುವ ಭಕ್ತರ ಇಷ್ಠಾರ್ಥಗಳನ್ನು ಕರುಣಿಸಿ ಆಶೀರ್ವಧಿಸುತ್ತಿರುವ ಭೂವರಾಹಸ್ವಾಮಿಯ ಉತ್ಸವ ಮೂರ್ತಿಯನ್ನು ಮಾತ್ರ ದರ್ಶನ ಪಡೆಯಲು ಭಕ್ತರಿಗೆ ಸಾಮಾಜಿಕ ಅಂತರ ಕಾಪಾಡುತ್ತಲೇ, ಅವಕಾಶ ಹಾಗೂ ಬರುವ ಭಕ್ತರು ಮಾಸ್ಕ್‌ ಧರಿಸಿ ಬರಬೇಕು ಹಾಗೂ ದೇವಾಲಯದ ಮುಂಭಾಗದಲ್ಲಿ ಅವರ ಕೈ ಮತ್ತು ಕಾಲುಗಳಿಗೆ ಸ್ಯಾನಿಟೈಸರ್ ಸಿಂಪಡಿಸಿ ದರ್ಶನ ಪಡೆಯಲು ಅವಕಾಶವನ್ನು ನೀಡಲಾಗುತ್ತದೆ, ಕೋವಿಡ್ 19, ಕೊರೋನಾ ಪೆಡಂಭೂತವಿರುವ ಕಾರಣ ಭಗವಂತನ ಶಿಲಾ ಮೂರ್ತಿ ದರ್ಶನ ಇರುವುದಿಲ್ಲ.

ಕಲ್ಪನ್ಯೂಸ್: ಪುಣ್ಯಕ್ಷೇತ್ರದ ವಿಶಿಷ್ಟತೆಯ ಬಗ್ಗೆ?
ಶ್ರೀನಿವಾಸನ್: ವರಾಹಾವತಾರದ ವಿಷ್ಣುವಿನ ಆಜಾನುಬಾಹು ದೇಹ, ಬಲಿಷ್ಠ ತೋಳುಗಳು, ಎತ್ತರವಾದ ನಿಲುವಿನ ಭಂಗಿಯಲ್ಲಿರುವ ಮೂರ್ತಿ, ಎಡತೊಡೆಯ ಮೇಲೆ ಪತ್ನಿ ಲಕ್ಷ್ಮೀ ಭೂದೇವಿಯನ್ನು ಕೂರಿಸಿಕೊಂಡಿರುವ ಭಂಗಿಯಲ್ಲಿದೆ. ಕೈಯಲ್ಲಿ ಕಮಲದ ಹೂವು. ವರಾಹಸ್ವಾಮಿಯ ಒಂದು ಕೈಯಲ್ಲಿ ಚಕ್ರ, ಮತ್ತೊಂದು ಕೈಯಲ್ಲಿ ಶಂಖ, ಎಡತೊಡೆಯ ಮೇಲೆ ಕುಳಿತಿರುವ ಪತ್ನಿ ಲಕ್ಷ್ಮಿಯನ್ನು (ಭೂದೇವಿ) ಎಡಗೈನಿಂದ ತಬ್ಬಿಕೊಂಡಿರುವಂತೆ ಕೆತ್ತಿರುವ ವಿಗ್ರಹವಿದು. 15 ಅಡಿ ಎತ್ತರದ ಸಾಲಿಗ್ರಾಮದ ಏಕಶಿಲೆಯಿಂದ ಕೆತ್ತಿದ್ದಾರೆ. ದೇವಾಲಯ ಪ್ರವೇಶಿಸುತ್ತಲೇ ಸಭಾ ಮಂಟಪದ ಎದರು ಗರ್ಭಗುಡಿ ಇದೆ. ಒಳಗಡೆ ಪೀಠದ ಮೇಲೆ ವರಾಹಸ್ವಾಮಿ ವಿಗ್ರಹವಿದೆ.

ಕಲ್ಪನ್ಯೂಸ್: ಭಕ್ತರ ನಂಬಿಕೆ; ಮನೆ ಕಟ್ಟಲು ಅಭಯ ನೀಡುವ ಸ್ವಾಮಿ ಕುರಿತಾಗಿ ತಿಳಿಸಿ?
ಶ್ರೀನಿವಾಸನ್: ಭಕ್ತಿ ಭಾವದಿಂದ ಬೇಡಿದರೆ – ಮನೆ ಕಟ್ಟಲು ಅಭಯ ನೀಡುವ ಸ್ವಾಮಿ, ಈ ಭೂವರಾಹಸ್ವಾಮಿಗೆ ಹರಕೆ ಹೊತ್ತರೆ, ಭೂವಿವಾದಗಳು ಇತ್ಯರ್ಥವಾಗುತ್ತವೆ. ಮರಳು, ಮಣ್ಣು ಅಥವಾ ಇಟ್ಟಿಗೆಯನ್ನು ದೇವರ ಮುಂದಿಟ್ಟು ಪೂಜೆ ಸಲ್ಲಿಸಿ, ದೇವಾಲಯದ ಪಕ್ಕದಲ್ಲಿ ಅದೇ ಸಾಮಗ್ರಿಗಳಿಂದ ಗೂಡು ಕಟ್ಟಿ ಹರಿಕೆ ಸಲ್ಲಿಸಿದರೆ, ಗೃಹನಿರ್ಮಾಣದ ಬಯಕೆ ಸಿದ್ಧಿಸುತ್ತದೆ ಎಂಬುದು ಭಕ್ತರ ನಂಬಿಕೆ.

ಕಲ್ಪನ್ಯೂಸ್: ಪುರಾಣದ ಕಥೆ?
ಶ್ರೀನಿವಾಸನ್: ಹಿರಣ್ಯಕಶಿಪುವಿನ ಸೋದರ ಹಿರಣ್ಯಾಕ್ಷನು ಭೂದೇವಿಯನ್ನು ಹೊತ್ತೊಯ್ದು ಸಮುದ್ರದಲ್ಲಿ ಬಂಧಿಸಿಡುತ್ತಾನೆ. ಮಹಾವಿಷ್ಣುವು ವರಾಹಾವತಾರವನ್ನು ತಾಳಿ ಹಿರಾಣ್ಯಾಕ್ಷನನ್ನು ಕೊಂದು ಭೂದೇವಿಯನ್ನು ರಕ್ಷಿಸಿದ ಎಂಬುದು ಪುರಾಣದ ಕಥೆ.

ಕಲ್ಪನ್ಯೂಸ್: ಪೂಜೆ ವಿಶೇಷಗಳು ಹೇಗೆ ನಡೆಯುತ್ತದೆ?
ಶ್ರೀನಿವಾಸನ್: ಭೂವರಾಹಸ್ವಾಮಿ. ಹಾಲು, ಮೊಸರು, ಎಳನೀರು, ಜೇನುತುಪ್ಪ, ಕಬ್ಬಿನಹಾಲು, ಗಂಗಾಜಲ, ಶ್ರೀಗಂಧ, ಅರಿಶಿನ ಕುಂಕುಮ ಸೇರಿದಂತೆ 25 ವಿವಿಧ ಬಗೆಯ ಹೂವುಗಳಿಂದ ಸ್ವಾಮಿಗೆ ವಿಶೇಷ ಅಭಿಷೇಕ ನಡೆಯುತ್ತದೆ. ನರಸಿಂಹ ಜಯಂತಿ, ವೈಕುಂಠ ಏಕಾದಶಿಯಲ್ಲಿ ಮಾತ್ರವಲ್ಲದೆ, ಪ್ರತಿ ಶನಿವಾರ ಈ ದೇವಾಲಯದಲ್ಲಿ ವಿಶೇಷ ಪೂಜೆ ನಡೆಯುತ್ತದೆ.


ಕಲ್ಪನ್ಯೂಸ್: ದೋಣಿ ವಿಹಾರ-ಪ್ರಸಾದದ ವಿತರಣೆ ಬಗ್ಗೆ ತಿಳಿಸಿ?
ಶ್ರೀನಿವಾಸನ್: ದೇವಸ್ಥಾನದ ಪಕ್ಕದಲ್ಲಿಯೇ ಪಶ್ಚಿಮಾಭಿಮುಖವಾಗಿ ಹರಿಯುತ್ತಿರುವ ಹೇಮಾವತಿ ನದಿಯಲ್ಲಿ ಪ್ರವಾಸಿಗರು ಮತ್ತು ಭಕ್ತಾಧಿಗಳಿಗೆ ದೋಣಿ ವಿಹಾರ, ತೆಪ್ಪದಲ್ಲಿ ದೋಣಿವಿಹಾರ, ದಾಸೋಹ ಭವನದಲ್ಲಿ ಭಕ್ತಾಧಿಗಳಿಗೆ ಉಚಿತ ದಾಸೋಹ ಪ್ರಸಾದದ ವಿತರಣೆ ನಡೆಯುತ್ತದೆ.

ಕಲ್ಪನ್ಯೂಸ್: ಈ ದೇವಾಲಯದ ಆಡಳಿತ?
ಶ್ರೀನಿವಾಸನ್: ಈ ದೇವಾಲಯವು ಮೈಸೂರಿನ ಶ್ರೀಬ್ರಹ್ಮತಂತ್ರ ಸ್ವತಂತ್ರ ಪರಕಾಲ ಮಠದಿಂದ ದೇವಾಲಯದ ಆಡಳಿತ ಮಂಡಳಿಯ ವ್ಯಾಪ್ತಿಗೆ ಒಳಪಟ್ಟಿದೆ.

ಕಲ್ಪನ್ಯೂಸ್: ಅನ್ನ ದಾಸೋಹ?
ಶ್ರೀನಿವಾಸನ್: ಭಕ್ತರಿಗೆ ಪ್ರತಿನಿತ್ಯ ಅನ್ನದಾಸೋಹ ನಡೆಯುತ್ತದೆ.

ಕಲ್ಪನ್ಯೂಸ್: ಪೂಜೆ ಸಮಯ?
ಶ್ರೀನಿವಾಸನ್: ಪ್ರತಿ ನಿತ್ಯ ಬೆಳಗ್ಗೆ 8ರಿಂದ ಮಧ್ಯಾಹ್ನ 2 ಗಂಟೆ ಹಾಗೂ ಸಂಜೆ 4ರಿಂದ 7ಗಂಟೆಯವರೆಗೆ ಪೂಜೆ ನಡೆಯುತ್ತದೆ.

ಕಲ್ಪನ್ಯೂಸ್: ದೋಷಗಳಿಗೆ ಪರಿಹಾರ?
ಶ್ರೀನಿವಾಸನ್: ರಾಹು – ಕೇತುಗಳ ದೋಷಗಳಿಗೆ ಸ್ವಾಮಿಯ ಅನುಗ್ರಹದಿಂದ ಪರಿಹಾರ ಶತ ಸಿದ್ದ! ವಿವಾಹ ಹಾಗೂ ಸಂತಾನ ಭಾಗ್ಯ ಲಭಿಸುತ್ತದೆ.

ಕಲ್ಪನ್ಯೂಸ್: ಶ್ರೀ ಕ್ಷೇತ್ರದ ವಿಶೇಷತೆ ಕುರಿತು?
ಶ್ರೀನಿವಾಸನ್: ಇಲ್ಲಿರುವ ಮೂರ್ತಿ ಅತ್ಯಂತ ಮನಮೋಹಕವಾಗಿದ್ದರೂ ಇತರ ಹೊಯ್ಸಳರ ಕಾಲದ ದೇವಾಲಯಗಳಂತೆ ಶಿಲ್ಪಕಲಾ ಶ್ರೀಮಂತಿಕೆಯಿಂದ ಕೂಡಿಲ್ಲ. ಈಗ ಹಳೆಯ ಗುಡಿಯನ್ನು ಕೆಡವಿ ಹೊಸ ದೇಗುಲವನ್ನು ನಿರ್ಮಿಸಲಾಗಿದೆ. ಹೊಯ್ಸಳ ರಾಜ ಸ್ಥಾಪಿಸಿದ ದೇಗಲವನ್ನು ಮುಂದೆ ಚೋಳರು, ವಿಜಯನಗರದ ಅರಸು ಪೋಷಿಸುತ್ತಾರೆ, ಬಳಿಕ ಮೈಸೂರು ಅರಸರ ಆಳ್ವಿಕೆಗೆ ಒಳಪಡುತ್ತದೆ, ಮೈಸೂರಿನ ಬ್ರಹ್ಮತಂತ್ರ ಸ್ವತಂತ್ರ ಪರಕಾಲ ಮಠದ ಉಸ್ತುವಾರಿಯಲ್ಲಿ ಸಮಗ್ರವಾಗಿ ಅಭಿವೃದ್ಧಿ ಹೊಂದುತ್ತಿರುವ ಶ್ರೀ ಕ್ಷೇತ್ರ.

ಎಲ್ಲಿದೆ ಶ್ರೀಕ್ಷೇತ್ರ?
ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆಯ ಕಲ್ಲಹಳ್ಳಿ ಊರಿನ ದೇವಾಲಾಪುರದಲ್ಲಿದೆ ಈ ದೇಗುಲ. ಶಾಸನವೊಂದರ ಪ್ರಕಾರ ಹೊಯ್ಸಳರ ಮುಮ್ಮುಡಿ ಬಲ್ಲಾಳನ ಕಾಲದಲ್ಲಿ ಹೇಮಾವತಿಯ ನದಿಯ ದಂಡೆಯ ಮೇಲೆ ಪುಟ್ಟದಾಗಿ ನಿರ್ಮಾಣವಾದ ದೇವಾಲಯವಿದು. ಸುಮಾರು ಕ್ರಿ.ಶ. 1334ರಲ್ಲಿ ಈ ದೇವಾಲಯ ನಿರ್ಮಾಣವಾಗಿರಬಹುದು ಎಂದು ಹೇಳಲಾಗುತ್ತದೆ.

ಬೆಂಗಳೂರಿನಿಂದ 180 ಕಿಮೀ, ಮೈಸೂರಿನಿಂದ 53 ಕಿಮೀ, ಕೆ.ಆರ್.ಪೇಟೆ ಮಾರ್ಗವಾಗಿ 18 ಕಿಮೀ ದೂರದಲ್ಲಿ ಈ ದೇವಾಲಯವಿದೆ. ಕೆ.ಆರ್.ಪೇಟೆ ಮೇಲುಕೋಟೆ – ಕಲ್ಲಹಳ್ಳಿಗೆ ಬಸ್ ಸೌಲಭ್ಯವಿದೆ. ಸ್ವಂತ ವಾಹನದಲ್ಲಿ ಬರುವವರು ಈ ದೇವಾಲಯ ಭೇಟಿಯೊಂದಿಗೆ ಸುತ್ತಲಿನ ಪ್ರವಾಸಿ ತಾಣಗಳಿಗೂ ಭೇಟಿ ನೀಡಬಹುದು.


Get In Touch With Us info@kalpa.news Whatsapp: 9481252093

Tags: Bhoo Varaahanatha SwamyHindu TempleKannadaNewsWebsiteLatestNewsKannadaLord VishnuMandyaTemples in Mandyaಕೃಷ್ಣರಾಜಪೇಟೆಭೂವರಾಹನಾಥ ಸ್ವಾಮಿಮಂಡ್ಯಮೈಸೂರುವರಾಹಾವತಾರ
Share264Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶರಾವತಿ ಉಗಮ ಸ್ಥಳ ಅಂಬುತೀರ್ಥಕ್ಕೆ ಅಭಿವೃದ್ಧಿಯ ಭಾಗ್ಯ

Next Post

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಗೆ ಅಧಿಕೃತ ಚಾಲನೆ

kalpa News

kalpa News

Next Post

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಗೆ ಅಧಿಕೃತ ಚಾಲನೆ

Leave a Reply Cancel reply

Your email address will not be published. Required fields are marked *

No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL