No Result
View All Result
yoga | Participate online
English Articles

India Launches Worldwide Campaign for International Day of Yoga 2026

by ಕಲ್ಪ ನ್ಯೂಸ್
June 13, 2026
0

Kalpa Media House  |  New Delhi | The Ministry of AYUSH, in collaboration with its partners, has announced a global...

Read moreDetails
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
  • Advertise With Us
  • Grievances
  • About Us
  • Contact Us
Monday, June 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ತಂದೆಯ ಕನಸುಗಳನ್ನು ನನಸು ಮಾಡಲಿರುವ ಯುವ ಕಲಾವಿದೆ | ಕೋಲಾರ ಮೂಲದ ಉದಯೋನ್ಮುಖ ಪ್ರತಿಭೆ

ಎಡಿಎ ರಂಗಮಂದಿರದಲ್ಲಿ ‘ನಾಟ್ಯ ನಿವೇದನಂ’ | ಉದಯೋನ್ಮುಖ ನರ್ತಕಿ ಧೃತಿ ರಂಗಪ್ರವೇಶ 16ರಂದು | ವಿದುಷಿ ಅಂಜಲಿ ಸಾರಥ್ಯದಲ್ಲಿ ಕಾರ್ಯಕ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 15, 2025
in Special Articles
0
ತಂದೆಯ ಕನಸುಗಳನ್ನು ನನಸು ಮಾಡಲಿರುವ ಯುವ ಕಲಾವಿದೆ | ಕೋಲಾರ ಮೂಲದ ಉದಯೋನ್ಮುಖ ಪ್ರತಿಭೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |   ಲೇಖನ: ಶಿವಮೊಗ್ಗ ರಾಮ್  |

ರಾಜಧಾನಿಯ ಅಂಜಲಿ ಸ್ಕೂಲ್ ಆಫ್ ಮ್ಯೂಸಿಕ ಆ್ಯಂಡ್ ಡಾನ್ಸ್‌ನ ವಿದುಷಿ ಕೆ.ಆರ್. ಅಂಜಲಿ ಅವರ ಶಿಷ್ಯೆ ಧೃತಿ ಸಿಂಹ ಭರತನಾಟ್ಯ ರಂಗ ಪ್ರವೇಶಕ್ಕೆ ಅಡಿ ಇಡಲು ಸಿದ್ಧರಾಗಿದ್ದಾರೆ. ಮಾ. 16ರ ಸಂಜೆ 5:30ಕ್ಕೆ ಜೆಸಿ ರಸ್ತೆ ಎಡಿಎ ರಂಗಮಂದಿರದಲ್ಲಿ ‘ನಾಟ್ಯ ನಿವೇದನಂ’ ವಿಜೃಂಭಿಸಲಿದೆ.

ಕೋಲಾರ ಮೂಲದ ಸಮೀರ ಸಿಂಹ- ಸುಕೃತಾ ರಾವ್ ಅವರ ಪುತ್ರಿ ಧೃತಿ ರಂಗಪ್ರವೇಶಕ್ಕೆ ಅನನ್ಯ ಸಂಸ್ಥೆಯ ನಿರ್ದೇಶಕ ಡಾ. ರಾಘವೇಂದ್ರ ರಾವ್, ಭರತನಾಟ್ಯ ವಿದುಷಿ ಮಾಲಿನಿ ರವಿಶಂಕರ್ ಮತ್ತು ಬೆಂಗಳೂರು ನಗರ ವಿವಿ ಕುಲಪತಿ ಲಿಂಗರಾಜ ಗಾಂಧಿ ಸಾಕ್ಷಿಯಾಗಲಿದ್ದಾರೆ. ಆರನೇ ವಯಸ್ಸಿನಿಂದಲೇ ನರ್ತನ ಕಲಿಕೆಗೆ ಮುಂದಾದ ಧೃತಿ ಹಿಂದಿರುಗಿ ನೋಡಿದ್ದೇ ಇಲ್ಲ. ಭರತನಾಟ್ಯ ಜ್ಯೂನಿಯರ್, ಸೀನಿಯರ್ ಮತ್ತು ಗಂಧರ್ವ ಮಹಾವಿದ್ಯಾಲಯದ ಮಧ್ಯಮ ಪರೀಕ್ಷೆಗಳಲ್ಲಿ ಅತ್ಯುನ್ನತ ಶ್ರೇಣಿ ಪಡೆದು ಉತ್ತೀರ್ಣಳಾಗಿರುವುದು ಬಹು ವಿಶೇಷ.

Also Read>> ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಖ್ಯಾತ ನಟ ಪ್ರಭುದೇವ ಭೇಟಿ | ವಿಶೇಷ ಪೂಜೆ ಸಮರ್ಪಣೆ

ಬೆಳೆಯುವ ಸಿರಿ
ಸದ್ಯ ಸಿಎ (ಇಂಟರ್) ಪರೀಕ್ಷೆಗೆ ಅಧ್ಯಯನ ಮಾಡುತ್ತಿರುವ ಧೃತಿ, ಮಣಿಪಾಲ ವಿವಿಯಲ್ಲಿ ಆನ್ಲೈನ್ ಮೂಲಕ ಬಿಕಾಂ ಪರೀಕ್ಷೆಯನ್ನೂ ತೆಗೆದುಕೊಂಡಿದ್ದಾರೆ. ಭರತನಾಟ್ಯ ವಿದ್ವತ್ ಪಾಠಾಂತರವಾಗಿದ್ದು, ಆ ಪರೀಕ್ಷೆಗೆ ತಾಲೀಮು ನಡೆಸುವ ಹಂತದಲ್ಲೇ ರಂಗಾ ರೋಹಣವೂ ಸಂಪನ್ನಗೊಳ್ಳುತ್ತಿದೆ. ಪ್ರತಿದಿನವೂ 4 ತಾಸು ಸತತವಾಗಿ ನೃತ್ಯದ ಅಭ್ಯಾಸ, ಕಬ್ಬಿಣದ ಕಡಲೆಯಾದ ಸಿಎ-ಎಲ್ಲವನ್ನೂ ಎದುರಿಸುವ ಕಣದಲ್ಲಿ ಧೃತಿಗೆಡದೆ ಸೆಣಸುತ್ತಿರುವ ಧೃತಿಯ ಛಾತಿಯನ್ನು ಮೆಚ್ಚಲೇ ಬೇಕು. ಈಗಾಗಲೇ ಹಂಪಿ ಉತ್ಸವ, ಹನುಮ ಜಯಂತಿ ಉತ್ಸವ, ವೈಕುಂಠ ಏಕಾದಶಿ ಮುಂತಾದ ಪ್ರತಿಷ್ಠಿತ ವೇದಿಕೆಗಳಲ್ಲಿ ಧೃತಿ ಗುರುವಿನೊಂದಿಗೆ ಹೆಜ್ಜೆ ಹಾಕಿ ಕ್ರಿಯಾಶೀಲತೆ ಪ್ರದರ್ಶಿಸಿರುವುದು ಬೆಳೆಯುವ ಸಿರಿಯ ದರ್ಶನ ಮಾಡಿಸಿದೆ.ತಂದೆಯ ಆಕಾಂಕ್ಷೆಗಳನ್ನು ಈಡೇರಿಸುವ ಪುತ್ರಿ
ಸಾಮಾನ್ಯವಾಗಿ ಸಂಗೀತ -ನೃತ್ಯ, ಕಸೂತಿ ಸೇರಿದಂತೆ ಬಹುತೇಕ ಲಲಿತ ಕಲೆಗಳು ಹೆಣ್ಣು ಮಕ್ಕಳಿಗೆ ತಾಯಿ- ತಂದೆಯರ ಪ್ರೇರಣೆ- ಪ್ರೋತ್ಸಾಹದಿಂದಲೇ ಒಲಿಯುತ್ತವೆ. ಯುವ ಕಲಾವಿದೆ ಧೃತಿ ಮನೆಯಲ್ಲೂ ಇದೇ ಪರಿಸರ ಇರುವ ಕಾರಣಕ್ಕೆ ನೃತ್ಯ ಈಕೆಗೆ ಒಲಿದಿದೆ. ಸಮೀರ ಸಿಂಹ ಮೂಲತಃ ಕೋಲಾರದವರು. ಮೆಟ್ರೋದಲ್ಲಿ ವೃತ್ತಿಯೊಂದಿಗೆ ಭಾರತೀಯ ಸನಾತನ ಸಂಸ್ಕೃತಿ ಸಂಪ್ರದಾಯ ಮತ್ತು ಆಚರಣೆಗಳನ್ನು ದಂಪತಿ ಮನೆಯಲ್ಲಿ ಅನುಸರಿಸಿಕೊಂಡು ಬರುತ್ತಿರುವವರು.

ಸಮೀರರ ತಾಯಿಯೂ ಹರಿದಾಸರ ಪದಗಳಲ್ಲಿ ವಿಶೇಷವಾದ ಶ್ರದ್ಧೆ, ಕಳಕಳಿ ಹೊಂದಿರುವ ಹಿರಿಯ ಜೀವ. ಮಗಳು ನಾಟ್ಯಕಲೆಯಲ್ಲಿ ನೈಪುಣ್ಯತೆ ಹೊಂದಬೇಕೆಂದು ಸಮೀರ ಸಿಂಹ ಸಾಕಷ್ಟು ಸಮಯವನ್ನು ಮಗಳ ಕ್ರಿಯಾಶೀಲತೆ ವರ್ಧನೆಗೆ ಮೀಸಲಿಟ್ಟರು. ಅದರ ಫಲವಾಗಿಯೇ ‘ನಾಟ್ಯ ನಿವೇದನಂ’ ಶೀರ್ಷಿಕೆ ಅಡಿಯಲ್ಲಿ ರಂಗಾರೋಹಣ ಸಂಪನ್ನಗೊಳ್ಳುತ್ತಿರುವುದು ವಿಶೇಷದಲ್ಲಿ ವಿಶೇಷವಾಗಿದೆ.ಉದ್ಯಾನದ ಕಾರ್ಯಕ್ರಮವೇ ಪ್ರೇರಣೆ
ಬೆಂಗಳೂರಿನ ಬಸವೇಶ್ವರನಗರದ ಉದ್ಯಾನವನದಲ್ಲಿ ಆಟವಾಡುತ್ತಿದ್ದ ಬಾಲಕಿಗೆ ಅಲ್ಲಿ ನಡೆಯುತ್ತಿದ್ದ ಸಂಗೀತ ಮತ್ತು ನೃತ್ಯ ಕಾರ್ಯಕ್ರಮಗಳು ಗಮನ ಸೆಳೆದವು. 4 ವರ್ಷದ ಧೃತಿ ತನ್ನ ಅಪ್ಪ-ಅಮ್ಮನಿಗೆ ಮನದಾಳದ ಭಾವ ತಿಳಿಸಿದಳು. ನೃತ್ಯ ಕಲಿಯುವ ಅಪೇಕ್ಷೆಯನ್ನು ಮಾನ್ಯ ಮಾಡಿದ ಸಿಂಹ ದಂಪತಿಗೆ ಮೊದಲು ಕಂಡ ಗುರುವೇ ವಿದುಷಿ ಅಂಜಲಿ. ಯಾವ ಅಡೆ ತಡೆಗಳಿಗೆ ಅಂಜದೇ- ಅಳುಕದೇ ಧೃತಿಯೂ ನಾಟ್ಯಾಭ್ಯಾಸ ಮಾಡಿ ವಿದ್ವತ್ ಹಂತಕ್ಕೆ ಬಂದಿರುವುದು ಸಾಧನೆಯೇ ಸರಿ.
ಅಂಜಲಿ ಗರಡಿ
ಮನೆಯಲ್ಲಿ ಅಮ್ಮ ಹಾಡುತಿದ್ದ ದೇವರ ನಾಮಗಳು, ಅಜ್ಜಿ ಅನುಸರಿಸುತ್ತಿದ್ದ ಸಂಪ್ರದಾಯ, ತಂದೆಯ ಅನುಷ್ಠಾನ, ತಮ್ಮನ ಕ್ರೀಡಾ ಉತ್ಸಾಹ ಮತ್ತು ಸಹೋದರತ್ವದ ಕಳಕಳಿ- ಇದರೊಂದಿಗೆ ಸ್ವಯಂ ಶ್ರದ್ಧೆ- ಎಲ್ಲವೂ ಸೇರಿ ಧೃತಿಯನ್ನು ಒಬ್ಬ ದೃಢ ಕಲಾ ಆರಾಧಕಿಯನ್ನಾಗಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದವು. ಸತತ 12 ವರ್ಷಗಳ ಕಾಲ ವಿದುಷಿ ಮತ್ತು ಕ್ರಿಯಾಶೀಲ, ಸೃಜನಾಶೀಲ ಚಟುವಟಿಕೆಗಳ ಆಗರವೇ ಆಗಿರುವ ಅಂಜಲಿ ಗರಡಿಯಲ್ಲಿ ಈ ಬಾಲಕಲಾವಿದೆ ಪಳಗಿದಳು.

ಕನಸು ಬಹಳ ದೊಡ್ಡದು
ಸಿಎ- ಭರತನಾಟ್ಯ ವಿದ್ವತ್ ಪರೀಕ್ಷೆ ತಯಾರಿಯನ್ನು ಧೃತಿ ಸಮಗ್ರವಾಗಿ ನಡೆಸುತ್ತಿದ್ದು, ಎರಡಕ್ಕೂ ಏಕಕಾಲದಲ್ಲಿ ವಿಜಯದ ಗುರಿ ಇಟ್ಟುಕೊಂಡಿರುವುದು ಯುವ ಸಮುದಾಯಕ್ಕೆ ಮಾದರಿ ಆಗಿದೆ. ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ಎರಡೂ ಪರೀಕ್ಷೆಯನ್ನು ಪೂರ್ಣಗೊಳಿಸಿ ತನ್ನದೇ ಆದಂತಹ ವೃತ್ತಿಪರ ಸಂಸ್ಥೆ (ಸಿಎ ಪ್ರಾಕ್ಟೀಸ್ ಆಫೀಸ್) ಮತ್ತು ಭರತನಾಟ್ಯ ಬೋಧಿಸುವಂತಹ ಸಂಸ್ಥೆಯನ್ನು ಕಟ್ಟಬೇಕು. ವೃತ್ತಿ ಬದುಕಿಗೆ ನೆರವಾದರೆ ಪ್ರವೃತ್ತಿ ಜೀವನದ ಉದ್ದಕ್ಕೂ… ಎಂದು ನಂಬಿಕೊಂಡು ಅನೇಕ ಮಕ್ಕಳಿಗೆ ನೃತ್ಯದ ಪಾಠಗಳನ್ನು ಮಾಡಬೇಕು ಎಂಬುದು ಈ ಯುವಕಲಾವಿದೆಯ ಬಹುದೊಡ್ಡ ಕನಸು. ಈ ಕನಸಿನ ಹಿಂದೆ ಈಕೆ ತನ್ನ ತಂದೆಯ ತ್ಯಾಗಗಳನ್ನು ಬಹು ಧನ್ಯತೆಯಿಂದ ಸ್ಮರಿಸಿಕೊಳ್ಳುತ್ತಾರೆ. ನನ್ನ ನೃತ್ಯ ಕಲಿಕೆಗಾಗಿ ನೆರವು ನೀಡಲಿ ಸಾಕಷ್ಟು ಸಮಯ ಮೀಸಲಾಗಿಟ್ಟು, ದೊಡ್ಡ ಅಪೇಕ್ಷೆಗಳನ್ನೇ ಕಟ್ಟಿಕೊಂಡ ಅಪ್ಪನಿಗೆ ನಾನು ಏನನ್ನಾದರೂ ಕೊಡುಗೆಯಾಗಿ ಕೊಡಬೇಕು ಎಂದರೆ ಅದು ನನ್ನ ಸಾಧನೆಯಿಂದ ಮಾತ್ರ ಸಾಧ್ಯ ಎನ್ನುತ್ತಾಳೆ ಈ ವಿದ್ಯಾರ್ಥಿನಿ.

ಗುರುವಿನಂತೆ ನಾನೂ ಆಗಬೇಕು
ಸದಾ ಕ್ರಿಯಾಶೀಲವಾಗಿ ಇದ್ದು, ರಚನಾತ್ಮಕ ಚಟುವಟಿಕೆಗಳನ್ನೇ ಮಾಡುತ್ತಿರಬೇಕು ಎಂಬುದಕ್ಕೆ ಈಕೆಗೆ ತನ್ನ ಗುರು ಅಂಜಲಿಯವರನ್ನೇ ಪ್ರತಿಮೆ ಮತ್ತು ಪ್ರತೀಕವಾಗಿ ಇರಿಸಿಕೊಂಡಿದ್ದಾಳೆ. ಬಹುಮುಖಿ ಅಂಜಲಿ ಅವ ರಂತೆಯೇ ನಾನೂ ವೈವಿಧ್ಯಮಯ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು, ಈ ಸಮಾಜಕ್ಕೆ ಏನನ್ನಾದರೂ ಹೊಸತನ್ನು ಕೊಡುಗೆಯಾಗಿ ನೀಡಬೇಕು ಎಂಬ ಉತ್ಕಟ ಹಂಬಲ ಧೃತಿಗೆ ಇದೆ. ಇವೆಲ್ಲವಕ್ಕೂ ಸಮಗ್ರ ಕುಟುಂಬದ ಬೆಂಬಲ ಇರುವುದು ‘ಸುಕೃತ’ವೇ ಆಗಿದೆ.ಹವ್ಯಾಸ ಹಲವು
ಪ್ರೌಢ ಶಿಕ್ಷಣ ಹಂತದಿಂದಲೂ ಬ್ಯಾಡ್ಮಿಂಟನ್, ವಾಲಿಬಾಲ್ ಕ್ರೀಡೆಗಳಲ್ಲಿ ತನ್ನನ್ನು ವಿಶೇಷವಾಗಿ ಗುರುತಿಸಿಕೊಂಡಿರುವ ಧೃತಿ, ಎನ್‌ಸಿಸಿ ಯಲ್ಲೂ ತರಬೇತಿ ಪಡೆದಿರುವ ಕೆಡೆಟ್. ಬಿಡುವಿನ ವೇಳೆಯಲ್ಲಿ ಚಿತ್ರ ಬರೆಯುವುದು, ಶಾಸ್ತ್ರೀಯ ಸಂಗೀತ ಕೇಳುವುದು, ನಮ್ಮ ಸಂಸ್ಕೃತಿಯ ಬೇರುಗಳನ್ನು ತಿಳಿದುಕೊಳ್ಳುವಲ್ಲಿ ಈ ಯುವತಿಗೆ ಅಪಾರವಾದ ಆಸಕ್ತಿ. 80 ವಸಂತ ಕಂಡಿರುವ ಅಜ್ಜಿ ಈಕೆಯ ನೃತ್ಯದ ಬಗ್ಗೆ ಸಾಕಷ್ಟು ವಿಮರ್ಶಾತ್ಮಕವಾಗಿ ತಿಳಿ ಹೇಳುತ್ತಾ ಇನ್ನೂ ಇನ್ನೂ ಸಾಧನೆ ಮಾಡಬೇಕು ಎಂದು ಪ್ರೇರಣೆ ನೀಡುತ್ತಾರೆ. ಇವು ಮೊಮ್ಮಗಳ ಮುಂದಣ ಹೆಜ್ಜೆಗಳಿಗೆ ಸ್ಫೂರ್ತಿಯಾಗಿದೆ. ಇವೆಲ್ಲಾ ನೆಲೆಗಳನ್ನು ಬಳಸಿಕೊಂಡು ಈಕೆ ಮಹೋನ್ನತ ಮೈಲುಗಲ್ಲು ಗಳನ್ನು ಸ್ಥಾಪಿಸಲಿ ಎಂಬುದೇ ಕಲಾಸಕ್ತ ಮನಸುಗಳ ಹಾರೈಕೆ.

ಸಿಂಹದ ನಡೆ ಪ್ರಾಪ್ತಿಯಾಗಲಿ
ಸಂಸ್ಕಾರವಂತ ತಂದೆ- ತಾಯಿಗೆ ಸಂಸ್ಕೃತಿ ಬಿಂಬಿಸುವಂತಹ ಮಕ್ಕಳು ಜನಿಸುವುದು ಅಪರೂಪದಲಿ ಅಪರೂಪ. ಹಾಗಾಗಿ ಅದನ್ನು ‘ಸುಕೃತ’ ಎನ್ನುತ್ತಾರೆ ಹಿರಿಯರು. ಸಮೀರ ಸಿಂಹ- ಸುಕೃತಾ ಅವರ ಕುಟುಂಬದ ಹೆಮ್ಮೆಯ ಪ್ರತಿಭೆ ಧೃತಿ ‘ಸಿಂಹ’ದ ನಡೆಯನ್ನೇ ಅನುಸರಿಸಿ ಅಗ್ರಗಣ್ಯ ಕಲಾವಿದೆ ಆಗಲಿಎಂದು ಹಾರೈಸೋಣ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

Tags: BENGALURUBharatanatyamDanceIndian artIndian DanceKannada News WebsiteLatest News KannadaRangapraveshaಅಂಜಲಿ ಸ್ಕೂಲ್ ಆಫ್ ಮ್ಯೂಸಿಕ ಆ್ಯಂಡ್ ಡಾನ್ಸ್‌ಧೃತಿ ಸಿಂಹನಾಟ್ಯ ನಿವೇದನಂಬೆಂಗಳೂರುಭರತನಾಟ್ಯರಂಗ ಪ್ರವೇಶ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಖ್ಯಾತ ನಟ ಪ್ರಭುದೇವ ಭೇಟಿ | ವಿಶೇಷ ಪೂಜೆ ಸಮರ್ಪಣೆ

Next Post

ಸೊರಬ | ಜನಪದ ಸಂಸ್ಕೃತಿ ಇನ್ನೂ ಹಳ್ಳಿಗಳಲ್ಲಿ ಜೀವಂತ | ಬಿ. ಲೋಕೇಶ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸೊರಬ | ಜನಪದ ಸಂಸ್ಕೃತಿ ಇನ್ನೂ ಹಳ್ಳಿಗಳಲ್ಲಿ ಜೀವಂತ | ಬಿ. ಲೋಕೇಶ್

ಸೊರಬ | ಜನಪದ ಸಂಸ್ಕೃತಿ ಇನ್ನೂ ಹಳ್ಳಿಗಳಲ್ಲಿ ಜೀವಂತ | ಬಿ. ಲೋಕೇಶ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Chamarajanagara: Nalvadi Krishnaraja Wodeyar

ನಾಲ್ವಡಿ ಕೃಷ್ಣರಾಜ ಒಡೆಯರ್ ಆಡಳಿತ ಪ್ರತಿಯೊಬ್ಬರಿಗೂ ಆದರ್ಶ: ಸುರೇಶ್ ಋಗ್ವೇದಿ

June 15, 2026
‘Smart Surface’ Technology Introduced at IIS

ಏಷ್ಯಾದಲ್ಲೇ ಮೊದಲು | IISನಲ್ಲಿ ‘ಸ್ಮಾರ್ಟ್ ಸರ್ಫೇಸ್’ ತಂತ್ರಜ್ಞಾನ | ಭಾರತೀಯ ಕ್ರೀಡಾ ತರಬೇತಿಯಲ್ಲಿ ಡಿಜಿಟಲ್ ಕ್ರಾಂತಿ

June 15, 2026
Linkedin fund for Skill development

ಕರ್ನಾಟಕದ 25,000 ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿ : ಲಿಂಕ್ಡ್‌ ಇನ್ 1.5 ಕೋಟಿ ರೂ. ಅನುದಾನ

June 15, 2026
Indira Lankesh

ಪತ್ರಕರ್ತ ಪಿ.ಲಂಕೇಶ್ ಪತ್ನಿ, ಹಿರಿಯ ಲೇಖಕಿ ‘ಇಂದಿರಾ ಲಂಕೇಶ್’ ಇನ್ನಿಲ್ಲ

June 15, 2026
Cricket: Maharaja Trophy

ನಾಳೆ ಶಿವಮೊಗ್ಗ ಯೋಧಾಸ್ ಜೆರ್ಸಿ ಅನಾವರಣ | ತಂಡದ ಆಂಥೆಮ್ ಬಿಡುಗಡೆ

June 15, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL