No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Thursday, April 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ವಿಶ್ವವನ್ನೇ ನಿಬ್ಬೆರಗಾಗಿಸಿದ ಹಾಕಿ ಮಾಂತ್ರಿಕ ಧ್ಯಾನ್’ಚಂದ್ ಬಗ್ಗೆ ತಿಳಿಯದಿದ್ದರೆ ಜೀವನವೇ ವ್ಯರ್ಥ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 31, 2019
in Special Articles
0
ವಿಶ್ವವನ್ನೇ ನಿಬ್ಬೆರಗಾಗಿಸಿದ ಹಾಕಿ ಮಾಂತ್ರಿಕ ಧ್ಯಾನ್’ಚಂದ್ ಬಗ್ಗೆ ತಿಳಿಯದಿದ್ದರೆ ಜೀವನವೇ ವ್ಯರ್ಥ
Share on FacebookShare on TwitterShare on WhatsApp

ಭಾರತದ ಪ್ರಾಚೀನ ಸಾಧನೆಗಳನ್ನು ಗಮನಿಸಿದಾಗ ಹಲವು ವಿಷಯಗಳಲ್ಲಿ ನಾವು ವಿಶ್ವಮಟ್ಟದಲ್ಲಿ ಮುಂಚುಣಿಯಲ್ಲಿದ್ದೆವು ಎನ್ನುವುದು ಸ್ಪಷ್ಟವಾಗಿ ತಿಳಿಯುತ್ತದೆ. ಇಪತ್ತನೇ ಶತಮಾನದ ಆರಂಭದಲ್ಲಿ ಸ್ವಾತಂತ್ರ್ಯ ಹೋರಾಟದ ಕಾವು ರಾಷ್ಟ್ರದಾದ್ಯಂತ ವ್ಯಾಪಿಸಿತ್ತು. ಇಂತಹ ಕ್ಲಿಷ್ಟಕರ ಸಮಯದಲ್ಲೂ ಭಾರತಇಂದು ವಿಶ್ವದ ದಿಗ್ಗಜರೆಂದು ಕರೆಸಿಕೊಳ್ಳುವ ಅನೇಕ ರಾಷ್ಟ್ರಗಳನ್ನು, ಪ್ರಮುಖವಾಗಿ ಒಂದು ಕ್ಷೇತ್ರದಲ್ಲಿ ಮುಲಾಜಿಲ್ಲದೆ ಬಗ್ಗು ಬಡಿದಿತ್ತು. ಅದು ಹಾಕಿ ಕ್ರೀಡೆಯಲ್ಲಿ.

ವಿಶ್ವದ ಪ್ರಮುಖ ಕ್ರೀಡೆಯಲ್ಲೊಂದಾದ ಹಾಕಿಯಲ್ಲಿ ವಿಶ್ವದ ಜನರನ್ನು ಬಾಯ್ಮೇಲೆ ಬೆರಳಿಡುವಂತೆ ಅತ್ಯುತ್ತಮ ಸಾಧನೆ ಮಾಡಿತ್ತು ಭಾರತ. ಈ ಸಾಧನೆಯ ಹಿಂದಿನ ಮಹಾನ್ ಶಕ್ತಿ ಹಾಕಿ ಮಾಂತ್ರಿಕ ಮೇ. ಧ್ಯಾನ್ ಚಾಂದ್. ಈ ವಿಶ್ವ ಶ್ರೇಷ್ಠ ಹಾಕಿ ದಂತಕತೆಯನ್ನು, ಅವರ ಜನ್ಮದಿನದಂದು ಸ್ಮರಿಸುವ ಜವಾಬ್ದಾರಿ ನಮ್ಮೆಲ್ಲರದ್ದು.

ಕಿರಿಯ ವಯಸ್ಸಿನಲ್ಲೇ ಕಾರಣಾಂತರಗಳಿಂದ ಓದು ಮುಂದುವರೆಸಲಾಗದೆ, ಸೇನೆಗೆ ಸೇರಿದ ಧ್ಯಾನ್’ಸಿಂಗ್, ಸೇನೆಯ ಸ್ನೇಹಪೂರ್ಣ ಪಂದ್ಯಗಳಲ್ಲಿ ಹಾಕಿ ಆಡಲು ಶುರು ಮಾಡಿದರು. ಇವರ ಮಿಂಚಿನ ಆಟವನ್ನು ಗಮನಿಸಿದ ಮೇಜರ್ ಭೋಲೆ ತಿವಾರಿಯವರು ಧ್ಯಾನ್ ಸಿಂಗ್ ಅವರಿಗೆ ಹಾಕಿ ಕ್ರೀಡೆಯ ವಿಶೇಷತೆಗಳ ಬಗ್ಗೆ ತರಬೇತಿ ನೀಡಿದರು. ಅಷ್ಟೇ ಅಲ್ಲದೆ ಧ್ಯಾನ್‌ಸಿಂಗ್ ಅವರಆಟದ ವೈಖರಿ ಮತ್ತು ಅವರಲ್ಲಿದ್ದ ಚಾಕಚಕ್ಯತೆಯನ್ನು ಸೂಕ್ಷ್ಮವಾಗಿ ಗಮನಿಸಿದ ಮೇ, ಭೋಲೆ ತಿವಾರಿ ಅಂದೇ, ಮುಂದೆ ಇವನು ಚಂದ್ರನಂತೆ(ಹಿಂದಿ ಭಾಷೆಯಲ್ಲಿ ಚಾಂದ್) ಬೆಳಗುತ್ತಾನೆ ಎಂದು ನುಡಿದಿದ್ದರು. ಇಷ್ಟು ಮಾತ್ರವಲ್ಲ ಹಾಕಿ ಮೇಲಿದ್ದ ನಿಷ್ಠೆಯಿಂದಾಗಿ ಧ್ಯಾನ್ ಸಿಂಗ್ ಚಂದ್ರನ ಬೆಳಕಿನಲ್ಲೂ ಹಾಕಿ ಅಭ್ಯಾಸ ಮಾಡುತ್ತಿದ್ದದನ್ನು ಗಮನಿಸಿದ ಇವರ ಸ್ನೇಹಿತರು ಇವರನ್ನು ‘‘ಚಾಂದ್’’ ಎಂಬ ಹೆಸರಿನಿಂದ ಕರೆಯುತ್ತಿದ್ದರು. ಅಂದಿನಿಂದ ಧ್ಯಾನ್ ಸಿಂಗ್, ಧ್ಯಾನ್ ಚಾಂದ್ ಎಂದು ಹೆಸರಾದರು.

ಹಲವು ಸೇನೆಯ ಸ್ಪರ್ಧೆಗಳಲ್ಲಿ ಇವರು ತೋರಿದ ಅಸಾಧಾರಣ ಪ್ರದರ್ಶನದ ಫಲವಾಗಿ ನಂತರದ ದಿನಗಳಲ್ಲಿ ಸೇನಾ ತಂಡವನ್ನು ಪ್ರತಿನಿಧಿಸುವ ಅವಕಾಶ ದೊರೆಯಿತು. 1926ರಲ್ಲಿ ಮೊದಲ ಬಾರಿಗೆ ಧ್ಯಾನ್ ಚಂದ್ ನ್ಯೂಜಿಲಾಂಡ್ ತಂಡದ ವಿರುದ್ಧದ ಪಂದ್ಯಗಳಲ್ಲಿ ಆಡಿದರು. ನ್ಯೂಜಿಲ್ಯಾಂಡ್ ಪ್ರವಾಸದಲ್ಲಿ ಆಡಿದ 21 ಪಂದ್ಯಗಳಲ್ಲಿ 18 ಪಂದ್ಯಗಳಲ್ಲಿ ಭಾರತ ಜಯಭೇರಿ ಬಾರಿಸಿತು. ಈ ಗೆಲುವುಗಳಲ್ಲಿ ಧ್ಯಾನ್ ಚಾಂದ್ ಅವರ ಕೊಡುಗೆ ಅಪಾರವಾದದ್ದು. ಇವರ ಆಟದ ಮೋಹಕತೆಗೆ ನಿಬ್ಬೆರಗಾದ ಅನೇಕರು ಪ್ರಶಂಸಿಸುತ್ತಾರೆ.

ನಂತರದ ದಿನಗಳಲ್ಲಿ ಇವರ ಪ್ರದರ್ಶನದ ಸಾಮರ್ಥ್ಯದ ಮುಲಕ ಅರ್ಹವಾಗಿಯೇ 1928, 1932 ಮತ್ತು 1936ರ ಒಲಂಪಿಕ್ಸ್‌’ನಲ್ಲಿ ಭಾರತವನ್ನು ಪ್ರತಿನಿಧಿಸುವ ಅವಕಾಶ ದೊರೆಯಿತು. ಈ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಂಡ ಧ್ಯಾನ್’ಚಂದ್ ತಮ್ಮದೆಯಾದ ಟ್ರೆಂಡ್ ಅನ್ನು ಹಾಕಿ ಕ್ಷೇತ್ರದಲ್ಲಿ ಸೃಷ್ಟಿಸಿ ಬಿಡುತ್ತಾರೆ. ಇದಕ್ಕೆ ಕಾರಣ ಈ ಮೂರೂ ಒಲಂಪಿಕ್ಸ್‌’ನಲ್ಲಿ ಭಾರತ ಗಳಿಸಿದ ಒಟ್ಟು ಗೋಲುಗಳ ಸಂಖ್ಯೆ 107. ಇದರಲ್ಲಿ 39 ಗೋಲುಗಳು ಧ್ಯಾನ್’ಚಂದ್ ಅವರದ್ದೇ! ಮತ್ತು ಇದರ ಪರಿಣಾಮವಾಗಿ ಭಾರತ ಈ ಮೂರೂ ಒಲಂಪಿಕ್ಸ್‌’ನಲ್ಲೂ ಚಿನ್ನದ ಪದಕ ಗೆಲ್ಲುವ ಮೂಲಕ ವಿಶ್ವದಾಖಲೆಯನ್ನು ನಿರ್ಮಿಸಿತು.

ಲಾಸ್ ಏಂಜಲೀಸ್ ಒಲಂಪಿಕ್ಸ್‌ ನಂತರ ಅಮೆರಿಕಾವನ್ನು ಒಳಗೊಂಡ ವಿದೇಶಿ ಪ್ರವಾಸವನ್ನು ಭಾರತತಂಡ ಕೈಗೊಳ್ಳುತ್ತದೆ. ಈ ಪ್ರವಾಸದಲ್ಲಿ ಆಡಲಾದ 37 ಪಂದ್ಯಗಳಲ್ಲಿ ಭಾರತ 34ರಲ್ಲಿ ವಿಜಯಶಾಲಿಯಾಗುತ್ತದೆ. ಈ ಪಂದ್ಯಗಳಲ್ಲಿ ಭಾರತ ಗಳಿಸಿದ ಒಟ್ಟು 338 ಗೋಲುಗಳಲ್ಲಿ 133 ಗೋಲುಗಳನ್ನು ಧ್ಯಾನ್’ಚಂದ್ ಒಬ್ಬರೇ ಗಳಿಸುತ್ತಾರೆ!

ಧ್ಯಾನ್’ಚಂದ್ ಅವರ ಆಟ ಎಂತಹ ಸಂಚಲನವನ್ನು ಹುಟ್ಟಿಸಿತ್ತೆಂದರೆ 1936ರ ಬರ್ಲಿನ್ ಒಲಂಪಿಕ್’್ಸನ ಸಂದರ್ಭದಲ್ಲಿ ಜರ್ಮನ್ ಪತ್ರಿಕೆಯೊಂದು ಈ ರೀತಿ ಸುದ್ದಿ ಪ್ರಕಟಿಸುತ್ತದೆ, ‘‘ಹಾಕಿ ಆಟ ಈಗ ಮ್ಯಾಜಿಕ್ ಷೋ ಕೂಡ ಆಗಿದೆ. ಭಾರತದ ಮಾಂತ್ರಿಕನ ಆಟ ನೋಡಲು ಕ್ರೀಡಾಂಗಣಕ್ಕೆ ತಪ್ಪದೆ ಬನ್ನಿ’’, ಎಂದು. ಧ್ಯಾನ್’ಚಂದ್ ಅವರ ದಿಗ್ಭಮೆಗೊಳಿಸುವಂತಹ ಆಟ, ವಿಶ್ವದ ಜನರನ್ನು ಅವರ ಹಾಕಿ ಸ್ಟಿಕ್ ಮುರಿದು ನೋಡಿ, ಅದರಲ್ಲೇನಾದರೂ ಚೆಂಡನ್ನು ಹಿಡಿದಿಡುವ ತಂತ್ರದ ಅಳವಡಿಕೆಯಾಗಿದೆಯೇ ಎಂದು ಪರಿಶೀಲಿಸಿದ್ದೂ ಇದೆ.

ಹಾಗೆಯೇ ಧ್ಯಾನ್’ಚಾಂದ್ ಅವರ ಸಮಕಾಲೀನರಾದ ಕ್ರಿಕೆಟ್ ದಂತಕತೆ ಬ್ರಾಡ್ಮನ್ ಧ್ಯಾನ್’ಚಂದ್ ಅವರನ್ನು ಅಡಿ ಲೈಡ್’ನಲ್ಲಿ ಮುಖಾಮುಖಿಯಾದಾಗ ‘‘ನಾವು ಕ್ರಿಕೆಟ್’ನಲ್ಲಿ ರನ್ ಬಾರಿಸುವಂತೆ, ನೀವು ಗೋಲುಗಳನ್ನು ಬಾರಿಸುತ್ತೀರಲ್ಲ’’ ಎಂದು ಕೇಳಿದ್ದರಂತೆ. ಈ ಮಾತು ಹಾಕಿಯಲ್ಲಿ ಧ್ಯಾನ್’ಚಾಂದ್ ಅವರ ಶ್ರೇಷ್ಠ ಮಟ್ಟವನ್ನು ತಿಳಿಸುತ್ತದೆ.

ಧ್ಯಾನ್’ಚಂದ್’ರ ಈ ಸಾಧನೆಗಳು ಮತು ಅವರ ಪ್ರಸಿದ್ಧಿ ಎಷ್ಟರ ಮಟ್ಟಿಗೆ ಜಗಜ್ಜನಿತವಾಗಿತ್ತೆಂದರೆ ಭಾರತದಲ್ಲಿ ಇವರ ಸಾಧನೆಯನ್ನು ಗುರುತಿಸುವ ಮೊದಲೇ ಆಸ್ಟ್ರೀಯಾದ ವಿಯೆನ್ನಾದಲ್ಲಿ ಇವರ ಪುತ್ಥಳಿ ಸ್ಥಾಪನೆಗೊಂಡಿತ್ತು. ನಂತರದ ದಿನಗಳಲ್ಲಿ ಇವರ ಜನ್ಮದಿನವನ್ನು ‘‘ರಾಷ್ಟ್ರೀಯ ಕ್ರೀಡಾ ದಿನ’’ವೆಂದು ಆಚರಣೆಗೆ ತಂದರು.

ಧ್ಯಾನ್’ಚಂದ್ ಕೇವಲ ಕ್ರೀಡಾಪಟು ಮಾತ್ರವಾಗಿರಲಿಲ್ಲ. ಬದಲಾಗಿ ಅಪ್ರತಿಮ ರಾಷ್ಟ್ರಭಕ್ತರೂ ಆಗಿದ್ದರು. 16ನೆಯ ವಯಸ್ಸಿನಲ್ಲಿ ಸೇನೆಗೆ ಸೇರಿದ್ದ ಇವರು, 1940ರ ದಶಕದ ಕೊನೆಯವರೆಗೂ ಸೇನೆಗಾಗಿ ಅದರ ಜೊತೆ ಜೊತೆಗೆ ಭಾರತದ ಹಾಕಿ ತಂಡದ ಮೂಲಕ ಭಾರತದ ಗೌರವವನ್ನು ಹೆಚ್ಚಿಸುವುದಕ್ಕಾಗಿ ದುಡಿದರು.

ಜರ್ಮನಿಯ ಆಗಿನ ಸರ್ವಾಧಿಕಾರಿ ಅಡಾಲ್ಫ್‌ ಹಿಟ್ಲರ್ ಕ್ರೀಡೆಯ ಮೂಲಕ ತನ್ನ ರಾಷ್ಟ್ರ ವಿಶ್ವಕ್ಕೆ ಸಮರ್ಥ ರಾಷ್ಟ್ರವೆಂದು ತೋರಿಸಿಕೊಡುವ ಉದ್ದೇಶದಿಂದ 1936ರಲ್ಲಿ ನಡೆದ ಬರ್ಲಿನ್ ಒಲಂಪಿಕ್ಸ್‌’ನ್ನು ಆಯೋಜಿಸುತ್ತಾನೆ. ಅಲ್ಲಿ ಹಾಕಿ ಫೈನಲ್ ಪಂದ್ಯದಲ್ಲಿ ಜರ್ಮನಿ ವಿರುದ್ಧ ಭಾರತ 8-1ರ ಅಂತರದಲ್ಲಿ ಗೆಲ್ಲುತ್ತದೆ. ಇದರಲ್ಲಿ ತಂಡದ ನಾಯಕನಾಗಿದ್ದ ಧ್ಯಾನ್’ಚಂದ್’ರ ಪಾತ್ರವೂ ಹೆಚ್ಚಿತ್ತು. ಇದನ್ನು ಗಮನಿಸಿದ ಹಿಟ್ಲರ್ ಅಧಿಕಾರದ ಪ್ರಲೊಭನೆಯನ್ನು ನೀಡಿ ಜರ್ಮನ್ ಪರ ಆಡಲು ಧ್ಯಾನ್’ಚಂದ್’ರ ಬಳಿ ಕೇಳಿದ್ದರಂತೆ. ಆದರೆ ಯಾವುದೇ ಪ್ರಲೋಭನೆಗಳಿಗೆ ಒಳಗಾಗದೇ ನಾನು ಆಡಿದರೆ ನನ್ನ ದೇಶಕ್ಕಾಗಿ ಮಾತ್ರ ಎಂದು ದೃಢವಾಗಿ ಹೇಳಿದ ಶ್ರೇಷ್ಠ ದೇಶಭಕ್ತ ಧ್ಯಾನ್’ಚಂದ್.

ನಿಜಕ್ಕೂ ಇವರು ಭಾರತರತ್ನ. ಇವರ ಹೆಸರಿನಲ್ಲೊಂದು ಅಕಾಡೆಮಿ, ಪದ್ಮಭೂಷಣ ಪ್ರಶಸ್ತಿ ನೀಡಿದ್ದನ್ನು ಬಿಟ್ಟು ನನ್ನ ಜ್ಞಾನದ ಅರಿವಿಗೆ ಬಂದಂತೆ ಬೇರೇನೂ ನೀಡಿದ್ದು ಕಾಣ ಸಿಗುವುದಿಲ್ಲ. ಈ ಮಹಾನ್ ವ್ಯಕ್ತಿಗಲ್ಲದೇ ಬೇರೆ ಯಾರಿಗೆ ತಾನೇ ಭಾರತರತ್ನ ಕೊಡಲು ಸಾಧ್ಯ. ಭಾರತ ಪ್ರಸ್ತುತ ಕ್ರೀಡಾಕ್ಷೇತ್ರದಲ್ಲಿ ಹೊಸ ಶಕ್ತಿಯಾಗಿ ಬೆಳೆಯುತ್ತಿದೆ. ಅದಕ್ಕೆ ಪ್ರೇರಣೆ ಧ್ಯಾನ್’ಚಾಂದ್ ಆಗಲಿ. ನಮ್ಮ ಮನೆಯ ಮಕ್ಕಳಿಗೂ ಧ್ಯಾನ್’ಚಾಂದ್’ರಂತೆ ಆಗಲು ಪ್ರೇರೇಪಿಸುವ ಕೆಲಸಗಳಾಗಬೇಕು. ಆಗ ಸದೃಢ ಯುವ ಭಾರತವನ್ನು ನಿರ್ಮಿಸಲು ಸಾಧ್ಯ.

 

Tags: Adolf HitlerArun KirmanjeswaraChinaDhyan ChandHockeyhockey wizard Dhyan ChandIndiaIndian SportsKannada ArticleSports Newsಅಡಾಲ್ಫ್‌ ಹಿಟ್ಲರ್ಅರುಣ್ ಕಿರಿಮಂಜೇಶ್ವರಭಾರತೀಯ ಕ್ರೀಡೆಹಾಕಿ ಮಾಂತ್ರಿಕ ಧ್ಯಾನ್’ಚಂದ್
Share196Tweet123Send
Previous Post

ಬೆಂಗಳೂರಿನ ಅಪೋಲೊ ಆಸ್ಪತ್ರೆಗೆ ರಜನಿಕಾಂತ್ ಭೇಟಿ: ಮುಗಿಬಿದ್ದ ಅಭಿಮಾನಿಗಳು

Next Post

ಬೆಂಗಳೂರು: ಅಭಿನಯದ ಪ್ರೌಢಿಮೆ ಅಭಿವ್ಯಕ್ತಿಸಿದ ಅನುಷಾ ರಂಗ ಪ್ರವೇಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬೆಂಗಳೂರು: ಅಭಿನಯದ ಪ್ರೌಢಿಮೆ ಅಭಿವ್ಯಕ್ತಿಸಿದ ಅನುಷಾ ರಂಗ ಪ್ರವೇಶ

ಬೆಂಗಳೂರು: ಅಭಿನಯದ ಪ್ರೌಢಿಮೆ ಅಭಿವ್ಯಕ್ತಿಸಿದ ಅನುಷಾ ರಂಗ ಪ್ರವೇಶ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಭೀಕರ ಅಪಘಾತ | ರಂಭಾಪುರಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಸಾವು

ಭೀಕರ ಅಪಘಾತ | ರಂಭಾಪುರಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಸಾವು

April 29, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ ಗುರೂಜಿ ಅವರ 70ನೇ ಜನ್ಮೋತ್ಸವ | ಮೇ 5ರಿಂದ `ಆನಂದೋತ್ಸವ’ ಕಾರ್ಯಕ್ರಮ

April 29, 2026
ಪ್ರಕೃತಿ ವಿಕೋಪದಿಂದ ಹಾನಿ, ವಿಶೇಷ ಪ್ರಕರಣವೆಂದು ಪರಿಗಣಿಸಿ ಪರಿಹಾರ ನೀಡಿ

ಪ್ರಕೃತಿ ವಿಕೋಪದಿಂದ ಹಾನಿ, ವಿಶೇಷ ಪ್ರಕರಣವೆಂದು ಪರಿಗಣಿಸಿ ಪರಿಹಾರ ನೀಡಿ

April 29, 2026
ಕ್ರೈಸ್ಟ್‌ಕಿಂಗ್ | ದ್ವಿತೀಯ ಪಿಯುಸಿ ಮರುಮೌಲ್ಯಮಾಪನ | ಪ್ರಜ್ವಲ್ ಶೆಟ್ಟಿ ರಾಜ್ಯಕ್ಕೆ ನಾಲ್ಕನೇ ರ್‍ಯಾಂಕ್ 

ಕ್ರೈಸ್ಟ್‌ಕಿಂಗ್ | ದ್ವಿತೀಯ ಪಿಯುಸಿ ಮರುಮೌಲ್ಯಮಾಪನ | ಪ್ರಜ್ವಲ್ ಶೆಟ್ಟಿ ರಾಜ್ಯಕ್ಕೆ ನಾಲ್ಕನೇ ರ್‍ಯಾಂಕ್ 

April 29, 2026
ಹುಲಿಕಲ್ ಘಾಟ್ ರಸ್ತೆ ತಡೆಗೋಡೆ ನಿರ್ಮಾಣ ಮಣ್ಣು ಕುಸಿತ ಪ್ರಕರಣ | ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ: ಎಸ್. ಮಧು ಬಂಗಾರಪ್ಪ

ಹುಲಿಕಲ್ ಘಾಟ್ ರಸ್ತೆ ತಡೆಗೋಡೆ ನಿರ್ಮಾಣ ಮಣ್ಣು ಕುಸಿತ ಪ್ರಕರಣ | ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ: ಎಸ್. ಮಧು ಬಂಗಾರಪ್ಪ

April 29, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL