ಶ್ರೀನಗರ:ಆ-29:ಕಣಿವೆ ರಾಜ್ಯ ಕಾಶ್ಮೀರದಲ್ಲಿ ಕಳೆದ 52 ದಿನಗಳಿಂದ ವಿಧಿಸಲಾಗಿದ್ದ ಕರ್ಫ್ಯೂವನ್ನು ಹಿಂತೆಗೆದುಕೊಳ್ಳಲಾಗಿದೆ. ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ಉಗ್ರ ಬುರ್ಹಾನ್ ವನಿ ಹತ್ಯೆ ಬಳಿಕ ಕಾಶ್ಮೀರದಲ್ಲಿ ಉಂತಾಗಿದ್ದ ಹಿಂಸಾಚಾರ ಹಿನ್ನಲೆಯಲ್ಲಿ ಕರ್ಫ್ಯೂ ವಿಧಿಸಲಾಗಿತ್ತು. ಕಾಶ್ಮೀರದ ಹಲವೆಡೆ ಪರಿಸ್ಥಿತಿ ಸಹಜ ಸ್ಥಿತಿಯತ್ತ ಮರಳುತ್ತಿರುವ ಹಿನ್ನಲೆಯಲ್ಲಿ ಹಲವೆಡೆ ಕರ್ಫ್ಯೂ ತೆರವುಗೊಳಿಸಲಾಗಿದೆ.
ಪುಲ್ವಾಮಾ ಜಿಲ್ಲೆಯಲ್ಲಿ ಹಿಂಸಾಚಾರ, ಪ್ರತಿಭಟನೆಗಳು ಮುಂದುವರೆದಿರುವುದರಿಂದ ಪುಲ್ವಾಮಾ ಹಾಗೂ ಇನ್ನು ಕೆಲ ಪ್ರದೇಶಗಳಲ್ಲಿ 144 ಸೆಕ್ಷನ್ ಅಡಿಯಲ್ಲಿನಿಷೇಧಾಜ್ನೆ ಮುಂದುವರೆಸಲಾಗಿದೆ. ಇಲ್ಲಿ 10 ಮಂದಿ ಒಟ್ಟಿಗೆ ಸೇರುವುದನ್ನು ನಿಷೇಧಿಸಲಾಗಿದೆ.
ಪುಲ್ವಾಮ ಹೊರತು ಪಡಿಸಿ ಕಾಶ್ಮೀರದ ವಿವಿಧ ನಗರಗಳಲ್ಲಿ ಖಾಸಗಿ ಬಸ್, ಆಟೋ ರಿಕ್ಷಾ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಹಲವೆಡೆ ಶುಕ್ರವಾರ ಹಾಗೂ ಶನಿವಾರ ಪರಿಸ್ಥಿತಿ ಶಾಂತವಾಗಿರುವ ಹಿನ್ನಲೆಯಲ್ಲಿ ಕರ್ಫ್ಯೂ ತೆರವುಗೊಳಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.
ಕಳೆದ ವಾರವಷ್ಟೇ ಶ್ರೀನಗರ ಸೇರಿದಂತೆ ಕಾಶ್ಮೀರದ ಬಟಮಲೂ, ಮೈಸುಮಾ ಮತ್ತು ಕ್ರಾಲ್ಕುಡ್ ಪಟ್ಟಣಗಳಲ್ಲಿ ಪರಿಸ್ಥಿತಿ ಶಾಂತವಾಗಿರುವ ಹಿನ್ನಲೆಯಲ್ಲಿ ಇಲ್ಲಿ ಹೇರಲಾಗಿದ್ದ ಕರ್ಫ್ಯೂವನ್ನುತೆರವು ಗೊಳಿಸಲಾಗಿತ್ತು. ಉಗ್ರ ಬುರ್ಹಾನ್ ವಾನಿ ಹತ್ಯೆ ಬಳಿಕ ಕಾಶ್ಮೀರದಲ್ಲಿ ಭುಗಿಲೆದ್ದಿದ್ದ ಹಿಂಸಾಚಾರದಲ್ಲಿ ಈ ವರೆಗೂ 70 ಮಂದಿ ಸಾವಿಗೀಡಾಗಿದ್ದು, 11 ಸಾವಿರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
Discussion about this post